Homeಮುಖಪುಟಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

- Advertisement -
- Advertisement -

ನಮ್ಮ ದೇಶದ ವಿಷಯಗಳಲ್ಲಿ ಯಾರೂ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂಬುದು ಈ ದೇಸಿ ಟ್ವಿಟರಿಸ್ಟ್‌ಗಳ ಯುಎಸ್‌ಪಿ (Unique Selling Point). ರಿಹಾನ್ನಾ ದೆಹಲಿ ಗಡಿಗಳಲ್ಲಿನ ಬ್ಯಾರಿಕೇಡಿಂಗ್, ಇಂಟರ್‌ನೆಟ್ ಸ್ಥಗಿತದ ಕುರಿತಾಗಿ ಕಮೆಂಟ್ ಮಾಡಿದ್ದು ಅಷ್ಟೇ. ಅದರ ಹಿಂದಿರುವ ಭೀಕರ ಸತ್ಯ ಅರಗಿಸಿಕೊಳ್ಳದ ಅಂಧಭಕ್ತರು ಟ್ವೀಟ್‌ಗಳಲ್ಲಿ ರೆಡಿಮೇಡ್ ಉತ್ತರ ಕೊಡುತ್ತಿದ್ದಾರೆ.

ನೀವು ಎಂದಾದರೂ ಈ ಸಚಿನ್ ತೆಂಡೂಲ್ಕರ್ ರಾಜ್ಯಸಭೆಯಲ್ಲಿ ಈ ದೇಶದ ಸಂಕಷ್ಟಗಳ ಬಗ್ಗೆ ಮಾತಾಡಿದ್ದನ್ನು ಕೇಳಿದ್ದೀರಾ? ಅದಿರಲಿ, ಈ ದಾಖಲೆವೀರ ಕ್ರಿಕೆಟಿಗ ಕಲಾಪಗಳಿಗೆ ಹಾಜರಾದದ್ದೇ ಅಪರೂಪ. ಇಂತಹ ಸಚಿನ್ ಕೂಡ ಬರ್ನಿಂಗ್ ಇಶ್ಯೂ ಮೇಲೆ ಟ್ವೀಟ್ ಮಾಡಬೇಕಾಯಿತು!

ಇನ್ನು ಈ ಅಕ್ಷಯಕುಮಾರ್, ಸುನೀಲ್ ಶೆಟ್ಟಿ, ಅಜಯ್ ದೇವಗನ್ ತಮ್ಮ ಸಿನಿಮಾಗಳಲ್ಲಿ ಕೂಡ ರೈತರ ಇಶ್ಯೂ ಹೈಲೈಟ್ ಮಾಡಿದ್ದೆ ಇಲ್ಲ. ಈ ಮೂವರ ಸಿನಿಮಾಗಳ ತಿರುಳುಗಳೂ ಒಂದೇ, ಅಷ್ಟೇ ಕಳಪೆ. ಅಕ್ಷಯಕುಮಾರ್ ಈಗಾಗಲೆ ಬಿಜೆಪಿಯ ’ಪೋಸ್ಟರ್ ಬಾಯ್’ ಎಂಬ ಬಿರುದನ್ನು ಆನಂದಿಸುತ್ತಿರುವ ಮನುಷ್ಯ. ಸೇನೆ, ಧ್ವಜ ಕೆಲವೊಮ್ಮೆ ಪಂಜಾಬಿ ಅಸ್ಮಿತೆಯ ಕಥಾನಕಗಳ ಮೇಲೆ ವರ್ಷಕ್ಕೊಂದು ಬಿಗ್ ಬಜೆಟ್ ಸಿನಿಮಾ ಮಾಡಿ ಅಸ್ತಿತ್ವ ಉಳಿಸಿಕೊಂಡಿರುವ ಸ್ಟಾರ್. ಈತನೂ ಈಗ ರೈತರ ಪರ ಎನ್ನುವಂತೆ, ಸರ್ಕಾರ ಸಮಸ್ಯೆ ಬಗೆಹರಿಸುತ್ತಿದೆ ಎನ್ನುವಂತೆ ಟ್ವೀಟ್ ಮಾಡಿದ್ದಾನೆ. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಅಜಯ್ ದೇವಗನ್ ಮತ್ತು ಸುನೀಲ್ ಶೆಟ್ಟಿ ಈಗ ಸಿನಿಮಾ ನಿರ್ಮಿಸಬಹುದೇ ಹೊರತು ಅವರೇ ಅಭಿನಯಿಸಿದರೆ ಪುಟ್ಟಾಪೂರಾ ಲಾಸ್ ಪಕ್ಕಾ. ’ವಿಮಲ್’ ಎಂಬ ಗುಟ್ಕಾದ ’ರಾಯಭಾರಿ’ ಆಗಿಯಷ್ಟೇ ’ಕೇಸರಿ’ ಸ್ವಾದದ ಬಗ್ಗೆ ಮಾತನಾಡುವ ಅಜಯ್ ದೇವಗನ್, ಮೊದಲ ಸಲ ’ಕೇಸರಿ’ ಪಡೆಯ ಪರವಾಗಿ ಒಂದು ಟ್ವೀಟನ್ನೂ ಮಾಡಬೇಕಾಗಿತು. (ಟ್ವೀಟ್ ಮಾಡಿಸಿದ್ದಾರೆ ಎಂದೂ ಓದಿಕೊಳ್ಳಬಹುದು!)

ಇದನ್ನೂ ಓದಿ: ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ಭಾರತದ ಶ್ರೀಮಂತ ಅವಿಭಕ್ತ ಕುಟುಂಬಗಳು, ಎನ್‌ಆರ್‌ಐಗಳ ಕತೆ-ಚಿತ್ರಕತೆಗಳ ನಿರ್ದೇಶನಕ್ಕೆ ಸಿಮೀತರಾದ ಕರಣ್ ಜೋಹರ್ ಕೂಡ ಭಾರತದ ಒಗ್ಗಟ್ಟಿನ ಕುರಿತು ಟ್ವೀಟ್ ಮಾಡಿದ್ದಾರೆ.

ಚೊಚ್ಚಲ ಮಗುವಿನ ಸಂಭ್ರಮದಲ್ಲಿದ್ದರೆಂದು ಕಾಣುತ್ತದೆ. ಡೌನ್ ಆರ್ಡರ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದ ವಿರಾಟ್ ಕೊಹ್ಲಿ ಸ್ವಲ್ಪ ತಡವಾಗಿ ಇಂತದ್ದೊಂದು ಟ್ವೀಟ್ ಬೌಂಡರಿ ಬೀಸಿದ್ದಾರೆ.

ಗೌತಮ್ ಗಂಭೀರ್ ಈ ಬಗ್ಗೆ ಟ್ವೀಟ್ ಮಾಡಿಲ್ಲ ಅಂತಾ ಕಾಣುತ್ತೆ. ಮೋಸ್ಟ್ಲಿ, ಅವರು ಗಣರಾಜ್ಯ ದಿನದ ಗಲಾಟೆಗೆ ಆಪ್ ಕಾರಣ ಎಂಬ ತಮ್ಮ ಸಂಶೋಧನೆಗೆ ಸಾಕ್ಷ್ಯ ಕಲೆ ಹಾಕುತ್ತಿರಬಹುದು.

ಹೀಗೆ ಇವರೆಲ್ಲ ಒಮ್ಮಿಂದೊಮ್ಮೆಲೆ ತಮ್ಮ ಐಷಾರಾಮಿ ಮಂಪರಿನಿಂದ ಹೊರಬರಲು ರಿಹಾನ್ನಾಳ ಆರು ಪದಗಳ ಟ್ವೀಟ್ ಪುಟಿ ಪುಟಿದು, ಆಕೆಯ ಹಾಡಿನಂತೆ ತೇಲಿ ತೇಲಿ ಬರಬೇಕಾಯಿತು. ಅಷ್ಟಕ್ಕೂ ಇವರೇನೂ ತಾವಾಗಿಯೇ ಟ್ವೀಟ್ ಮಾಡಿದಂತೆ ಕಾಣುತ್ತಿಲ್ಲ. ಬಿಜೆಪಿಯ ಇವರ ’ಉನ್ನತ’ ಹಿತೈಷಿಗಳಿಂದ ಅರ್ಜೆಂಟ್ ಕಾಲ್ ಬಂದ ನಂತರವಷ್ಟೇ ಒಂದು ಟ್ವೀಟ್ ಮಾಡಿ ಮತ್ತೆ ಎಂದಿನಂತೆ ತಮ್ಮ ಮಂಪರಿಗೆ ಜಾರಿದ್ದಾರೆ.

ಹಾಗೆ ನೋಡಿದರೆ, ಬಿಜೆಪಿಯ ಹೊಸ ’ಪೋಸ್ಟರ್ ಗರ್ಲ್’ ಕಂಗನಾ ರಾಣಾವತ್ ಅವರೇ ವಾಸಿ. ಈ ’ಹುಡುಗಿ’ ಸ್ಪಾಂಟೆನಿಯಸ್ ಆಗಿ ರಿಹಾನ್ನಾಗೆ ನೇರಾನೇರ ಪ್ರಶ್ನೆ ಮಾಡಿತ್ತು. ’ರೈತರಲ್ಲ, ಅವರು ಭಯೋತ್ಪಾದಕರು. ಚೀನಾ ಇದರ ಹಿಂದೆ ಇದೆ. ಭಾರತವನ್ನು ದುರ್ಬಲಗೊಳಿಸಿ, ಭಾರತವನ್ನು ತನ್ನ ವಸಾಹತುವನ್ನಾಗಿ ಮಾಡಿಕೊಳ್ಳುವ ಹುನ್ನಾರ ಇಲ್ಲಿದೆ’ ಎಂಬ ಹೊಸ some-ಶೋಧನೆಯನ್ನು ಈ ಚಂದುಳ್ಳಿ ’ಅಂಧಭಕ್ತೆ’ ಮಾಡಿದೆ. ಬಹುಸಮಯ ಪಾಕಿಸ್ತಾನದ ಸುತ್ತಲೆ ಗಿರಕಿ ಹೊಡೆಯುವ sum-ಶೋಧಕ ಅಮಿತ್ ಮಾಳವಿಯನಿಗೆ ಈ ’ಹುಡುಗಿಯನ್ನು’ ನೋಡಿ ನಾಚಿಕೆಯಾಗಬೇಕು!

ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ಶಾ ಕೂಡ ಫೀಲ್ಡಿಗೆ!

ಬಂಪರ್ ಬಜೆಟ್ ತಯಾರಿಸಿ ಸುಸ್ತಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ, ’ಒನ್ಸ್ ಇನ್ ಎ ಸೆಂಚುರಿ’ ಬಜೆಟ್ ಎಂಬ ಅದಾನಿಯ ಟ್ವೀಟೇ ಟಾನಿಕ್ ಆಗಿ ಒದಗಿ ಬಂದು ಚೇತರಿಕೆ ಕಂಡಿದ್ದರು. ಅವರೂ ಒಂದು ಟ್ವೀಟ್ ಮಾಡಿಯೇ ಬಿಟ್ಟರು. ಕೇಂದ್ರ ಸಚಿವರಾದ ವಿ.ಕೆ.ಸಿಂಗ್, ಕಿಶನ್‌ ರೆಡ್ಡಿ ಮುಂತಾದವರೆಲ್ಲ ವಿದೇಶಾಂಗ ಸಚಿವಾಲಯದ ಪ್ರಕಟಣೆ ಶೇರ್ ಮಾಡಿ ಎರಡು ಸಾಲು ಗೀಚಿ ಒಗೆದರು.

ಆದರೆ ಮೇಲಿನ ಈ ಎಲ್ಲರ-ಸಿನಿಮಾ, ಕ್ರಿಕೆಟ್ ಮತ್ತು ಪಾಲಿಟಿಕ್ಸ್- ಫಾಲೋವರ್‌ಗಳ ಸಂಖ್ಯೆ ಒಟ್ಟುಗೂಡಿಸಿದರೂ ರಿಹಾನ್ನಾಳ ಫಾಲೋವರ್ ಸಂಖ್ಯೆ ಮುಂದೆ ಜುಜುಬಿ. ಛೇ, ಇದ್ಯಾಕೋ ಸರಿ ಹೋಗ್ತಿಲ್ಲ ಎಂದು ’ಕ್ರೊನೊಲಜಿ ಸಮಝಿಯೆ’ ಖ್ಯಾತಿಯ ಅಮಿತ್ ಶಾ ಕೂಡ ಟೇಲ್‌ಎಂಡ್ ಬ್ಯಾಟ್ಸ್‌ಮನ್ ಆಗಿ ಬಂದು ಗಾಳಿಯಲ್ಲಿ ’ಬ್ಯಾಟು’ ಬೀಸಿದ್ದಾರೆ. (ಅವರು ಬ್ಯಾಟ್ ಬದಲು ದೊಣ್ಣೆ ತಂದಿದ್ದರಂತೆ, ಅದನ್ನು ಅವರ ಕೈಗೆ ಕೊಟ್ಟಿದ್ದು ಜಯ್ ಶಾ ಅಂತೆ!)

ದೊಡ್ಡ ಸಂಖ್ಯೆಯ ಫಾಲೋವರ್‍ಸ್ ಹೊಂದಿರುವ “ವಿಶ್ವಗುರು” ಮೈದಾನಕ್ಕೆ ಇಳಿದಿದ್ದರೆ ಭಕ್ತಗಣಕ್ಕೆ ರೋಮಾಂಚನ ಆಗುತ್ತಿತ್ತೇನೋ? ಆದರೆ ಈ ವಿಷಯವನ್ನು ಮುಂದಿನ ಮನ್ ಕಿ ಬಾತ್‌ಗೆ ಸಾಹೇಬರು ರಿಸರ್ವ್ ಮಾಡಿ ಇಟ್ಟಂತಿದೆ. ಗಣರಾಜ್ಯ ದಿನದ ವಿಷಯವನ್ನು ವಾರದ ನಂತರ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ನೆನೆಪಿದೆಯಲ್ಲ?


ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...