Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....