Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...