Homeಮುಖಪುಟರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

ರೈತರನ್ನು ಬೇರ್ಪಡಿಸಲು ಕಂದಕ ಸೃಷ್ಟಿಸಿದ ಪೊಲೀಸರು: ಸಿಂಘು ಗಡಿಯಿಂದ ಗ್ರೌಂಡ್ ರಿಪೋರ್ಟ್

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 72 ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತರ ಹೋರಾಟ ಹತ್ತಿಕ್ಕಲು ಪ್ರಭುತ್ವ ಹಲವು ಪ್ರಯತ್ನಗಳನ್ನು ನಡೆಸುತ್ತಲೇ ಇದೆ. ಸಿಂಘು, ಟಿಕ್ರಿ ಗಾಝಿಪುರ್ ಗಡಿಗಳಲ್ಲಿ ಮುಳ್ಳು ತಂತಿ ಹಾಕುವುದು, ರಸ್ತೆಗೆ ಕಬ್ಬಿಣದ ಮುಳ್ಳುಗಳನ್ನು ನೆಡುವುದು, ಬ್ಯಾರಿಕೆಡ್‌ಗಳ ಮಧ್ಯೆ ಇರುವ ಸ್ಥಳ ತುಂಬಲು ಕಾಂಕ್ರಿಟ್ ಹಾಕಿ ಗೋಡೆಗಳ ನಿರ್ಮಾಣ ಮಾಡಲಾಗಿದೆ.

ಸಿಂಘು ಗಡಿಯಲ್ಲಿ ಇರುವ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ವೇದಿಕೆಗಳ ನಡುವೆ ಈಗಾಗಲೇ ಬ್ಯಾರಿಕಡ್ ಮತ್ತು ಮುಳ್ಳುತಂತಿ ಹಾಕಲಾಗಿದೆ. ನಿನ್ನೆ (ಫೆಬ್ರವರಿ) ರಸ್ತೆಗಳಲ್ಲಿ ಗುಂಡಿಗಳನ್ನೂ ತೊಡಲಾಗಿದೆ. ಈಗ ಈ ಎರಡು ವೇದಿಕೆಗಳ ಮಧ್ಯೆ ಇರುವ ಒಂದೇ ಒಂದು ಪುಟ್ಟ ಗಲ್ಲಿಯನ್ನು ಮುಚ್ಚಲು ಹೊರಟಿದ್ದಾರೆ.

ಈ ದಾರಿಯೊಂದೆ ಪ್ರತಿಭಟನಾಕಾರರನ್ನು ಒಟ್ಟಿಗೆ ಸೇರಿಸುವ ಕೆಲಸ ಮಾಡುತ್ತಿದೆ. ಎರಡು ವೇದಿಕೆಗಳ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಈಗಾಗಲೇ ಸರ್ಕಾರ ಹಲವು ಪ್ರಯತ್ನಗಳನ್ನು ನಡೆಸಿದೆ. ಈ ಗಲ್ಲಿ ಮೂಲಕ ದೆಹಲಿ ಭಾಗದ ವೇದಿಕೆಯ ಜನರು ಹರಿಯಾಣ ಭಾಗದಲ್ಲಿರುವ ಲಂಗರ್‌ಗಳಿಗೆ ಹೋಗುತ್ತಾರೆ. ಈಗ ಈ ಗಲ್ಲಿಯನ್ನು ಬಂದ್ ಮಾಡಲು ತೊಡಗಿದ್ದು, ರೈತ ಸ್ವಯಂ ಸೇವಕರು ಗಲ್ಲಿ ಬಂದ್ ಮಾಡದಂತೆ ಪಹರೆ ಕಾಯುತ್ತಿದ್ದಾರೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಇದಲ್ಲದೇ ಸಿಂಘು ಗಡಿಗೆ ಪ್ರತಿಭಟನಾ ಬೆಂಬಲಿಗರು ಮತ್ತು ಪತ್ರಕಾರರು ಹೋಗದಂತೆ ತಡೆಯಲು ಕುಂಡ್ಲಿ ಬಾರ್ಡರ್ ಕೂಡ ಬಂದ್ ಮಾಡಲು ಯೋಜನೆ ರೂಪಿಸುತ್ತಿದೆ. ದೆಹಲಿಯಿಂದ ಹೋಗುವವರು ಸಿಂಘು ಗಡಿಗೆ ಸಮೀಪವಿರುವ ನರೇಲಾ ಬಳಿ ಇಳಿದುಕೊಂಡು ಇಲ್ಲಿಂದ ಮತ್ತೊಂದು ವಾಹನದ ಮೂಲಕ ಕುಂಡ್ಲಿ ಬಾರ್ಡರ್ ತಲುಪಬೇಕಾಗುತ್ತದೆ. ಅಥವಾ ಕುಂಡ್ಲಿ ಬಾರ್ಡರ್‌ಗೆ ವಾಹನ ಸಿಕ್ಕರೆ ಅಲ್ಲಿಯೇ ಇಳಿದುಕೊಂಡು ಬ್ಯಾರಿಕೇಡ್ ದಾಟಿ ಹರಿಯಾಣ ಭಾಗದ ವಾಹನ ತೆಗೆದುಕೊಳ್ಳಬೇಕು. ಹರಿಯಾಣ ಮೂಲಕ ಆಟೋಗಳಲ್ಲಿ ಹೋಗಿ ಪ್ರತಿಭಟನಾ ಸ್ಥಳಕ್ಕೆ ಹತ್ತಿರವಾಗುವ ಜಾಗದಲ್ಲಿ ಇಳಿದುಕೊಂಡು ಸಿಂಘು ಬಾರ್ಡರ್ ತಲುಪಬೇಕು.

ಈ ಕುಂಡ್ಲಿ ಬಾರ್ಡರ್ ಮೂಲಕ ಈಗ ಜನರು ಸಿಂಘು ಬಾರ್ಡರ್ ತಲುಪುತಿದ್ದು ಅಲ್ಲಿಯೂ ಪೊಲೀಸ್ ಇಲಾಖೆ ಕಟ್ಟುನಿಟ್ಟಾದ ಪಹರೆಯನ್ನು ಹಾಕಿದೆ. ಒಂದು ದಿನದ ಅಂತರದಲ್ಲಿ ಕುಂಡ್ಲಿ ಬಾರ್ಡರ್ ಬಳಿಯೇ ಒಂದು ಕಿಲೋಮೀಟರ್ ದೂರದಲ್ಲಿ ವಾಹನ ನಿಲ್ಲುವಂತೆ ಮಾಡಿದೆ. ಇದರಿಂದ ಪ್ರತಿಭಟನಾಕಾರರನ್ನು ತಲುಪಲು ಮತ್ತಷ್ಟು ತೊಂದರೆಯಾಗಲಿದೆ. ಇಂಟರ್ನೆಟ್ ಸಂಪರ್ಕ ಇಲ್ಲದ ಕಾರಣ ಆಟೋ, ಟ್ಯಾಕ್ಸಿಗಳು ಕೇಳಿದಷ್ಟು ಹಣಕೊಟ್ಟು ಇಲ್ಲಿಗೆ ಬರಬೇಕಾದ ಪರಿಸ್ಥತಿ ಪ್ರತಿಭಟನಾ ಬೆಂಬಲಿಗರಿಗೆ ಬಂದಿದೆ.

ಈ ಸ್ಥಳಗಳಿಗೆ ತಲುಪಲು ಕೂಡ ನಾವು ಸ್ಥಳೀಯರಂತೆ ಕಾಣುವುದು ಮುಖ್ಯ. ಬೇರೆ ಭಾಗಗಳಿಂದ ಬಂದವರಂತೆ ತೋರಿಸಿಕೊಂಡರೇ ಬಾರ್ಡರ್‌ಗಳಿಂದಲೇ ವಾಪಸ್ ಕಳುಹಿಸಲಾಗುತ್ತದೆ. ಕುಂಡ್ಲಿ ಬಾರ್ಡರ್ನಲ್ಲಿಯೂ ಬಸ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಲಾಗಿದೆ.

ರೈತ ಹೋರಾಟ ಜಾಗತಿಕವಾಗಿ ಚರ್ಚೆಗೆ ಬಂದಿದ್ದು, ಸದ್ಯ ಎಲ್ಲರ ಗಮನ ಸೆಳೆಯುತ್ತಿರುವ ಗಾಝಿಪುರ್ ಗಡಿಯಲ್ಲಿ, ಪೊಲೀಸರು ಹಾಕಿದ್ದ ಕಬ್ಬಿಣದ ಮೊಳೆಗಳನ್ನು ತೆಗೆಯಲಾಗಿದೆ. ಆದರೆ ಸಣ್ಣ ಸಣ್ಣ ದಾರಿಗಳ ಮೂಲಕ ಪ್ರತಿಭಟನಾ ಸ್ಥಳಗಳನ್ನು ಸೇರಿಕೊಳ್ಳುವವರನ್ನು ತಡೆಯುವ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ.


ಇದನ್ನೂ ಓದಿ: ಹೋರಾಟ ಬೆಂಬಲಿಸಿದ್ದಕ್ಕೆ FIR: ಬೆದರಿಕೆಗೆ ಮಣಿಯಲ್ಲ, ನಾನಿನ್ನೂ ರೈತರ ಪರ ಎಂದ ಗ್ರೇಟಾ ಥನ್‌‌ಬರ್ಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....