Homeಮುಖಪುಟಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR - ಸ್ವಾಗತ ಕೋರಿದ ಕನ್ಹಯ್ಯಾ!

ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನಿನ್ನೂ ರೈತರನ್ನು ಹಾಗೂ ಅವರ ಶಾಂತಿಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ನನ್ನ ನಿಲುವನ್ನು ಬದಲಾಯಿಸಲು ಸಾಧ್ಯವಿಲ್ಲ- ಗ್ರೇಟಾ ಥನ್‌ಬರ್ಗ್

- Advertisement -
- Advertisement -

ಭಾರತದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಕ್ಕೆ ಗ್ರೇಟಾ ಥನ್‌ಬರ್ಗ್ ವಿರುದ್ಧ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸಿದ್ದಾರೆ” ಎಂದು ಪ್ರಕರಣವನ್ನು ದಾಖಲಿಸಿ ಎಫ್‌ಐಆರ್ ಹಾಕಲಾಗಿತ್ತು. ಈ ಕುರಿತು ಕನ್ಹಯ್ಯಾ ಕುಮಾರ್ ಟ್ವೀಟ್ ಮಾಡಿದ್ದು, ಅವರಿಗೆ ಸ್ವಾಗತ ಕೋರಿದ್ದಾರೆ.

ಕನ್ಹಯ್ಯಾ ಟ್ವೀಟ್ ಮಾಡಿ, “ಡಿಯರ್ ಗ್ರೇಟಾ ಥನ್‌ಬರ್ಗ್, ನಮ್ಮ ಕ್ಲಬ್‌ಗೆ ನಿಮಗೆ ಸ್ವಾಗತ. ಜಯ್ ಶಾ ಅವರ ತಂದೆಯ ಆದೇಶದ ಮೇರೆಗೆ ನಿಮ್ಮ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನೀವು ಇತಿಹಾಸದ ನೈಜ ಹಾದಿಯಲ್ಲಿದ್ದೀರಿ ಮತ್ತು ಉತ್ತಮ ಕಾರ್ಯಕ್ಕಾಗಿ ಹೋರಾಟ ಮಾಡುತ್ತಿದ್ದೀರಿ ಅನ್ನುವುದಕ್ಕಿರುವ ಸಾಕ್ಷಿ ಇದು. ನನ್ನ ಹಲವಾರು ಸ್ನೇಹಿತರು ಈ ಹೋರಾಟಗಳ ಭಾಗವಾಗಿದ್ದಕ್ಕೆ ಈಗಲೂ ಜೈಲಿನಲ್ಲಿದ್ದಾರೆ. ನಿಮ್ಮ ಹೋರಾಟ ಮುಂದುವರಿಸಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಆರೇ ಪದಗಳ ಟ್ವೀಟ್: ಒನ್ ಶಾಟ್ ಲಸಿಕೆ ಮಂಪರಿನಿಂದ ಹೊರಬಂದ ’Low-ಕಲ್’ ಸೆಲೆಬ್ರಿಟಿಗಳು!

ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಒಂದು ದಿನದ ಹಿಂದೆಯಷ್ಟೆ ಟ್ವೀಟ್ ಮಾಡಿದ್ದರು.

ಇವರಿಗಿಂತಲು ಮೊದಲು ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ರೈತರನ್ನು ಬೆಂಬಲಿಸಿದ್ದರು. ಇದಾದ ನಂತರ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಹಲವು ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ವಿಶ್ವದ ಗಮನ ಸೆಳೆದಿದ್ದು, ರೈತ ಹೋರಾಟಕ್ಕೆ ಜಾಗತಿಕ ಮನ್ನಣೆ ಸಿಗುವಂತಾಗಿದೆ.

ಇದನ್ನೂ ಓದಿ: ರೈತರ ಮಹಾಪಂಚಾಯತ್‌ಗೆ ಅನುಮತಿ ನಿರಾಕರಿಸಿದ ಯುಪಿ ಸರ್ಕಾರ

ಗ್ರೇಟಾ ಥನ್‌‌ಬರ್ಗ್‌ ತನ್ನ ಟ್ವೀಟ್‌ನಲ್ಲಿ, “ಭಾರತೀಯ ರೈತರ ಹೋರಾಟದ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ” ಎಂದು ಎಂದು ಸಿಎನ್‌ಎನ್‌ ವರದಿಯನ್ನು ಹಂಚಿಕೊಂಡಿದ್ದರು. ಈ ಕಾರಣಕ್ಕಾಗಿ ಅವರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು.

ತಮ್ಮ ಮೇಲೆ ಎಫ್‌ಐಆರ್ ಹಾಕಿದ ನಂತರ ಗ್ರೇಟಾ ಥನ್‌‌ಬರ್ಗ್ ಮತ್ತೇ ರೈತರ ಹೋರಾಟವನ್ನು ಬೆಂಬಲಿಸಿದ್ದಾರೆ. ಈಗಷ್ಟೇ ಹಾಕಿದ ಟ್ವೀಟ್‌‌ನಲ್ಲಿ, “ನಾನಿನ್ನೂ ರೈತರನ್ನು ಹಾಗೂ ಅವರ ಶಾಂತಿಯುತ ಹೋರಾಟವನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ನನ್ನ ನಿಲುವನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ನಿನ್ನೆಯಿಂದ ರೈತ ಹೋರಾಟಕ್ಕೆ ಅಂತಾರಾಷ್ಟ್ರೀಯ ಬೆಂಬಲ ಹೆಚ್ಚುತ್ತಿದ್ದು, ಇದರಿಂದಾಗಿ ತೀವ್ರ ಮುಜುಗರಕ್ಕೊಳಗಾಗಿರುವ ಕೇಂದ್ರ ಸರ್ಕಾರ, ರೈತ ಹೋರಾಟವು ದೇಶದ ಆಂತರಿಕ ಸಮಸ್ಯೆಯಾಗಿದ್ದು ವಿದೇಶಿಗರು ಇದರ ಬಗ್ಗೆ ಮಾತನಾಡಬಾರದು ಎಂದು ಹೇಳಿತ್ತು. ಜೊತೆಗೆ #FarmersProtest ಹ್ಯಾಶ್‌ಟ್ಯಾಗ್‌ಗೆ ವಿರುದ್ದವಾಗಿ ’ಇಂಡಿಯಾ ಟುಗೆದರ್‌’ ಮತ್ತು  ’ಇಂಡಿಯಾ ಅಗೇನ್ಸ್ಟ್‌‌ ಪ್ರೊಪಗಾಂಡ’ ಎಂಬ ಹ್ಯಾಶ್ ಟ್ಯಾಗನ್ನು ನೀಡಿತ್ತು.


ಇದನ್ನೂ ಓದಿ: ಅಮೆರಿಕದ ದ್ವಂದ್ವ ನೀತಿ: ಡೆಮಾಕ್ರಸಿಗಾಗಿ ರೈತರಿಗೆ ಬೆಂಬಲ, ಬಂಡವಾಳಶಾಹಿಗಳಿಗಾಗಿ ಕೃಷಿ ಕಾಯ್ದೆಗಳ ಸ್ತುತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...