Homeಕರ್ನಾಟಕಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ?

- Advertisement -
- Advertisement -

ಸಿಎಂ ಕಾರು ಚೆಕ್ ಮಾಡುವ ಆಯೋಗ ಪಿಎಂ ತಂದ ಸೂಟ್‍ಕೇಸ್‍ನ್ನು ಬಿಟ್ಟಿದ್ಯಾಕೆ? ಸಾರ್ವಜನಿಕ ವಲಯದ ಪ್ರಶ್ನೆಗಳು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಿಂದ ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಏಪ್ರಿಲ್ 8ರಂದು ಚಿತ್ರದುರ್ಗಕ್ಕೆ ಹೆಲಿಕಾಪ್ಟರ್‍ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಸ್ಥಳಕ್ಕೆ ತೆರಳುತ್ತಿದ್ದಂತೆ, ಅವರ ಹೆಲಿಕಾಪ್ಟರ್‍ನಿಂದ ಭಾರದ ಸೂಟ್‍ಕೇಸ್ ಒಂದನ್ನು ಇಳಿಸಲಾಗಿದೆ. ಒಬ್ಬರಲ್ಲಾ ಇಬ್ಬರು ವ್ಯಕ್ತಿಗಳು ಅದನ್ನು ಕಷ್ಟಪಟ್ಟು ಎತ್ತಿಕೊಂಡು ಹೋಗುತ್ತಿರುವುದನ್ನು ನೋಡಿದರೆ, ಅದು ಬಹಳ ಭಾರ ಇರುವುದು ಗೊತ್ತಾಗುತ್ತದೆ. ಆ ಸೂಟ್‍ಕೇಸನ್ನು ನಂತರ ಒಂದು ಇನ್ನೋವಾ ಕಾರಿನಲ್ಲಿ ಇಡಲಾಗುತ್ತದೆ. ಕೂಡಲೇ ಕಾರು ವೇಗವಾಗಿ ಅಲ್ಲಿಂದ ತೆರಳುತ್ತದೆ.

ಇದರಿಂದ ಎದ್ದಿರುವ ಪ್ರಶ್ನೆಗಳಿಗೆ ಇದುವರೆಗೆ ಬಿಜೆಪಿ ಪಕ್ಷವಾಗಲೀ, ಚುನಾವಣಾ ಆಯೋಗವಾಗಲಿ ಉತ್ತರಿಸಿಲ್ಲ. ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚುನಾವಣಾ ಪ್ರಚಾರ ನಿಮಿತ್ತ ಪ್ರಯಾಣಿಸುತ್ತಿದ್ದಾಗ ಒಂದಕ್ಕಿಂತ ಹೆಚ್ಚು ಬಾರಿ ಅದನ್ನು ತಡೆದು ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ‘ಎಷ್ಟು ಬೇಕಾದರೂ ಚೆಕ್ ಮಾಡಿ’ ಎಂದು ಮುಖ್ಯಮಂತ್ರಿಗಳು ಸಿಟ್ಟಿನಿಂದ ಹೇಳಿದರೆಂದು ವರದಿಯಾಗಿದೆ.

ಆದರೆ, ಇದೀಗ ಮೋದಿಯವರ ಹೆಲಿಕಾಪ್ಟರ್‍ನಿಂದ ಇಳಿಸಲಾದ ಭಾರದ ಸೂಟ್‍ಕೇಸ್ ಮತ್ತು ಇನ್ನೋವಾ ಕಾರನ್ನು ತಪಾಸಣೆ ಮಾಡಲಾಗಿದೆಯೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಚಿತ್ರದುರ್ಗದಲ್ಲಿ ಮೋದಿ ಬಂದಾಗ ಬೆಂಗಾವಲು ಪಡೆ ವಾಹನದಿಂದ ಖಾಸಗಿ ವಾಹನಕ್ಕೆ ರಹಸ್ಯ ಸೂಟ್ ಕೇಸ್ ಗಡಿಬಿಡಿಯಲ್ಲಿ ಟ್ರಾನ್ಸಫರ್! ಚುನಾವಣೆಗೆ ದುಡ್ಡು ಸಪ್ಲೈ ಮಾಡಲು ಮೋದಿಯಿಂದ ಬೆಂಗಾವಲು ಪಡೆ ದುರುಪಯೋಗ?

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, १३ एप्रिल, २०१९

ಕಳೆದ ತಿಂಗಳು ಪ್ರಜಾವಾಣಿ ಪತ್ರಿಕೆಯಲ್ಲಿ ‘ಚುನಾವಣಾ ಸಂದರ್ಭದಲ್ಲಿ ಹಣವನ್ನು ಹೇಗೆ ಸಾಗಿಸಲಾಗುತ್ತದೆ’ ಎಂಬ ಕುರಿತು ವಿವರವಾದ ವರದಿ ಪ್ರಕಟವಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಇನ್ನೊಬ್ಬ ಪೊಲೀಸ್ ಅಧಿಕಾರಿ ಹಣ ಸಾಗಿಸುವ ಜವಾಬ್ದಾರಿ ಹೊತ್ತುಕೊಂಡಿದ್ದರು ಎಂದು ಅದರಲ್ಲಿ ಹೇಳಲಾಗಿತ್ತು.

ಈಗ ಇನ್ನೂ ಒಂದು ಹೆಜ್ಜೆ ದಾಟಿ ಅಧಿಕಾರದಲ್ಲಿರುವ ದೊಡ್ಡ ನಾಯಕರುಗಳೇ ಈ ಕೆಲಸ ಮಾಡುತ್ತಿದ್ದಾರಾ ಎಂಬ ಅನುಮಾನ ಉದ್ಭವಿಸುತ್ತದೆ. ಅದೇ ಸಂದರ್ಭದಲ್ಲಿ ಸಿಎಂಗೆ ಒಂದು ರೀತಿಯಲ್ಲಿ, ಪಿಎಂಗೆ ಇನ್ನೊಂದು ರೀತಿಯಲ್ಲಿ ಚುನಾವಣಾ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರಾ ಎಂಬುದು ಸಹಜವಾಗಿಯೇ ಮೂಡಿಬರುವ ಪ್ರಶ್ನೆ.

ಆದರೆ, ಅಂತಿಮ ಅಭಿಪ್ರಾಯಕ್ಕೆ ಬರುವ ಮುಂಚೆ ಯಾವುದಕ್ಕೂ ಬಿಜೆಪಿಯ ವತಿಯಿಂದ ಅಥವಾ ಚುನಾವಣಾ ಆಯೋಗದದ ವತಿಯಿಂದ ಸ್ಪಷ್ಟೀಕರಣ ಬರುತ್ತದಾ ಕಾದು ನೋಡಬೇಕು. ಈ ಕುರಿತು ಕಾಂಗ್ರೆಸ್ ಮುಖಂಡ ದಿನೇಶ್ ಗೂಂಡುರಾವ್ ಸಮಗ್ರ ತನಿಖೆಯಾಗಬೇಕೆಂದು ಆಗ್ರಹಿಸಿದ್ದಾರೆ.

 

ಅಪ್‌ಡೇಟ್: 14.04.2019

ಚಿತ್ರದುರ್ಗದಲ್ಲಿ ಮೋದಿಯವರ ಹೆಲಿಕಾಪ್ಟರ್ ಜೊತೆಗೆ ಬಂದ ಸೂಟ್‌ಕೇಸ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಜಿಲ್ಲಾಧಿಕಾರಿಗಳಿಗೆ ನಿನ್ನೆ ದೂರು ನೀಡಿದೆ.

ಇದರ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಆರುಣ್ ಅದು ಭದ್ರತೆಗೆ ಸಂಬಂಧಿಸಿದ್ದು ಎಂದು ಸಂಬಂಧಪಟ್ಟ ಇಲಾಖೆಯವರು ಹೇಳಿದ್ದಾರೆ. ಆದರೆ, ಅದನ್ನು ಪರಿಶೀಲಿಸಿ ತಪಾಸಣೆ ನಡೆಸಬೇಕಾದದ್ದು ಪೊಲೀಸರಲ್ಲ, ಚುನಾವಣಾಧಿಕಾರಿಗಳು. ನೀವು ಹೆಚ್ಚಿನ ಮಾಹಿತಿಗೆ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಯವರನ್ನು ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿಗಳಿಂದ ಇನ್ನೂ ಹೇಳಿಕೆ ಹೊರಬಿದ್ದಿಲ್ಲ.

ಈ ಮಧ್ಯೆ ಬಿಜೆಪಿಯು ಹೇಳಿಕೆ ನೀಡಿ, ಆ ಬಾಕ್ಸ್‌ನಲ್ಲಿ ಮೋದಿಯವರು ಭಾಷಣ ಮಾಡುವಾಗ ವೇದಿಕೆಯ ಮೇಲೆ ಬಳಸಲಾಗುವ ಉಪಕರಣಗಳಿರುತ್ತವೆ ಎಂದಿದೆ.

ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ದೆಹಲಿಯಲ್ಲಿ ಹೇಳಿಕೆ ನೀಡಿ ಆ ಬಾಕ್ಸ್‌ಅನ್ನು ಖಾಸಗಿ ವಾಹನದಲ್ಲಿ ಏಕೆ ತೆಗೆದುಕೊಂಡು ಹೋಗಲಾಯಿತು? ಅದು ಪ್ರಧಾನಿಯ ಎಸ್‌ಪಿಜಿ ಪ್ರೋಟೋಕಾಲ್‌ನ ಭಾಗ ಏಕೆ ಆಗಿರಲಿಲ್ಲ? ಈ ಕುರಿತು ಎಸ್‌ಪಿಜಿ ಉತ್ತರ ನೀಡಬೇಕು ಎಂದಿದ್ದಾರೆ.

ಮೊಟ್ಟಮೊದಲು ಕಾಂಗ್ರೆಸ್‌ನ ಕೇಂದ್ರೀಯ ಐಟಿ ವಿಭಾಗದ ಶ್ರೀವತ್ಸ ಇದನ್ನು ಏಪ್ರಿಲ್ 12ರಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...