Homeಕರೋನಾ ತಲ್ಲಣಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

- Advertisement -
- Advertisement -

ಭಾರತದಲ್ಲಿ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುವುದಾಗಿ ಫೈಜರ್ ಫಾರ್ಮಾ ಹೇಳಿದೆ. ಅಮೆರಿಕದ ಔಷಧ ಕಂಪೆನಿಯಾದ ಫೈಝರ್ 2020ರ ಡಿಸಂಬರ್ ನಲ್ಲಿ ತುರ್ತು ಬಳಕೆಯ ಅಧಿಕಾರಕ್ಕಾಗಿ ಭಾರತದ ಔಷಧ ನಿಯಂತ್ರಕರಾದ DCGI-ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ-ದಿಂದ ಅನುಮತಿ ಕೋರಿತ್ತು.

“ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಫೈಜರ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಪ್ರಾಧಿಕಾರವು ನಮ್ಮಿಂದ ಇನ್ನೂ ಹೆಚ್ಚಿನ ಮಾಹಿತಿಯನ್ನು ಅಪೇಕ್ಷಿಸಿದೆ” ಎಂದು ಭಾರತದ ಔಷಧ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಕಂಪನಿಯ ವಕ್ತಾರರು ಹೇಳಿದ್ದಾರೆ ಎಂಬುದಾಗಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅದಾಗ್ಯೂ ಫೈಜರ್ ಕಂಪನಿಯು ಪ್ರಾಧಿಕಾರದೊದಿಗಿನ ಸಹಭಾಗಿತ್ವವನ್ನು ಮುಂದುವರಿಸುತ್ತದೆ. ಮುಂದಿನ ದಿನಗಳಲ್ಲಿ ಲಸಿಕೆಯ ಅನುಮೋದನೆಗಾಗಿ ಹೆಚ್ಚಿನ ಮಾಹಿತಿಗಳೊಂದಿಗೆ ಮತ್ತೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

“ಫೈಜರ್ ತನ್ನ ಲಸಿಕೆಯನ್ನು ಭಾರತದಲ್ಲಿ ಲಭ್ಯವಾಗುವಂತೆ ಮಾಡಲು ಮತ್ತು ತುರ್ತು ಬಳಕೆಯ ದೃಢೀಕರಣಕ್ಕೆ ಬೇಕಾಗಿರುವ ಅಗತ್ಯ ಮಾರ್ಗಸೂಚಿಯನ್ನು ಅನುಸರಿಸಲು ಬದ್ಧವಾಗಿದೆ” ಎಂದು ವಕ್ತಾರರು ಹೇಳಿದರು.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!

ಫೈಜರ್/ಬಯೋಟೆಕ್ ಕೊರೊನಾ ಲಸಿಕೆ ಪಡೆದ ನಂತರ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಪ್ರಕರಣ ಇಸ್ರೇಲ್‌ನಲ್ಲಿ ನಡೆದಿತ್ತು. ಜಾಗತಿಕವಾಗಿ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಇಸ್ರೇಲ್‌ನಲ್ಲಿಯೂ ಲಸಿಕೆ ನೀಡಲಾಗುತ್ತಿತ್ತು.

ಫೈಜರ್‌ನ ಲಸಿಕೆ ಹಾಕಿದ ನಂತರ ಇಸ್ರೇಲ್‌ನ ಆರೋಗ್ಯ ಸಚಿವಾಲಯವು 189,000 ಜನರನ್ನು ಪರೀಕ್ಷಿಸಿತ್ತು. ಇವರಲ್ಲಿ ಶೇಕಡಾ 6.6 ರಷ್ಟು ಜನರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ತಿಳಿದುಬಂದಿದೆ. ಇತ್ತೀಚೆಗೆ, ಸಾಂಕ್ರಾಮಿಕ ರೋಗದ ರಾಷ್ಟ್ರೀಯ ಸಂಯೋಜಕರಾದ ನಾಚ್ಮನ್ ಆಶ್, “ಫೈಜರ್ ಲಸಿಕೆ ನಾವು ಅಂದುಕೊಂಡಿದ್ದಕ್ಕಿಂತ ಕಡಿಮೆ ಪರಿಣಾಮಕಾರಿಯಾಗಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಅಮೆರಿಕ ಮೂಲದ ಫೈಝರ್‌ ಮತ್ತು ಜರ್ಮನಿ ಮೂಲದ ಬಯೋಎಂಡೆಕ್ ಜಂಟಿಯಾಗಿ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಯು ಮೂರನೇ ಹಂತದ ಪ್ರಯೋಗಗಳಲ್ಲಿ 95% ನಷ್ಟು ದಕ್ಷತೆಯನ್ನು ವರದಿ ಮಾಡಿತ್ತು.

ಬ್ರಿಟನ್ ಮತ್ತು ಬಹ್ರೇನ್‌ನಲ್ಲಿ ಅನುಮತಿ ಪಡೆದ ನಂತರ ಭಾರತದಲ್ಲಿ ಅನುಮತಿಗಾಗಿ ಅರ್ಜಿ ಸಲ್ಲಿಸಿತ್ತು. ಕೊರೊನಾ ಲಸಿಕೆಗಾಗಿ ಭಾರತದಲ್ಲಿ ಅನುಮತಿ ಕೋರಿದ ಮೊದಲ ಕಂಪನಿ ಇದಾಗಿದೆ.

ಸಾಮಾನ್ಯವಾಗಿ ಲಸಿಕೆ ಉತ್ಪಾದಿಸಲು ಹಾಗೂ ಸಂಶೋಧನೆ ಮತ್ತು ಬಳಕೆಯ ಹಂತವನ್ನು ತಲುಪಲು 10 ವರ್ಷಗಳವರೆಗೆ ತೆಗೆದುಕೊಳ್ಳುತ್ತದೆ. ಆದರೆ ಫಿಜರ್ ಮತ್ತು ಬಯೋಎಂಡೆಕ್ ಅಭಿವೃದ್ಧಿಪಡಿಸಿದ ಈ ಕೊರೊನಾ ವೈರಸ್ ಲಸಿಕೆ ಕೇವಲ ಹತ್ತು ತಿಂಗಳಿನಲ್ಲಿ ತಯಾರಾಗಿದೆ. ವಿಶ್ವದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ತಯಾರಾದ ಲಸಿಕೆ ಇದಾಗಿದೆ.


ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...