Homeಮುಖಪುಟಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಫರಾಹ್ ಖಾನ್ ಅಲಿ ಕಿಡಿಕಾರಿದ್ದಾರೆ.

- Advertisement -
- Advertisement -

ಪಾಪ್ ಗಾಯಕಿ ರಿಯಾನ್ನ ಭಾರತದ ರೈತ ಹೋರಾಟವನ್ನು ಬೆಂಬಲಿಸಿದ ನಂತರ ಭಾರತದ ಬಾಲಿವುಡ್ ಸಹ ಈ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಮೊದಲಿಂದಲೂ ರೈತ ಹೋರಾಟ ಬೆಂಬಲಿಸುತ್ತಾ ಬಂದಿದ್ದ ಬಾಲಿವುಡ್‌ನ ಖ್ಯಾತ ನಟಿಯರಾದ ತಾಪ್ಸಿ ಪನ್ನು, ಫರಾಹ್ ಖಾನ್ ಅಲಿ ಮತ್ತು ಸ್ವರ ಭಾಸ್ಕರ್‌ರವರನ್ನು ನಟ ಅಭಯ್ ಡಿಯೋಲ್ ಶ್ಲಾಘಿಸಿದ್ದಾರೆ.

“ನನ್ನ ಮುಂದಿನ ರಿಹಾನ್ನಾ ಕುರಿತು ಬಾದಗಲ್‌ರಿರಿ ವಿಡಿಯೋದಲ್ಲಿ ನೀವಿರಲೇಬೇಕು. ಏಕೆಂದರೆ ಅದಕ್ಕೆ ಧೈರ್ಯವಿರಬೇಕು. ಈ ಮೂವರು ಪ್ರಿಯ ಮಹಿಳೆಯರನ್ನು ನೋಡಿ” ಎಂದು ಅಭಯ್ ಡಿಯೋಲ್ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Abhay Deol (@abhaydeol)

ಅಭಯ್ ತನ್ನ ಪೋಸ್ಟ್‌ನಲ್ಲಿ ತಾಪ್ಸಿ ಪನ್ನು ಮಾಡಿದ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ” ಎಂದು ತಾಪ್ಸಿ ಬರೆದಿದ್ದಾರೆ.

ಇನ್ನು ಸ್ವರ ಭಾಸ್ಕರ್ ಈಗಾಗಲೇ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಖುದ್ದು ಹೋಗಿ ಭಾಗವಹಿಸಿ ಬಂದಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯುತ್ತಿರುವ ಟ್ವಿಟರ್ ಆಂದೋಲನದಲ್ಲಿ ರಿಹಾನ್ನ, ಗ್ರೇಟಾ ಥನ್‌ಬರ್ಗ್ ಮತ್ತು ಮಿಯಾ ಖಲೀಫ್ ಸೇರಿದಂತೆ ಹಲವರ ಪರ ದನಿಯೆತ್ತಿದ್ದಾರೆ.

ಇನ್ನು ಫರಾಹ್ ಖಾನ್ ಅಲಿ ಟ್ವೀಟ್ ಮಾಡಿ “ರೀಲ್ ಲೈಫ್ ಹೀರೋಗಳು ಮತ್ತು ರಿಯಲ್ ಲೈಫ್ ಹೀರೋಗಳು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಎಗೆನೆಸ್ಟ್ ಪ್ರೊಪಗಾಂಡ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿರುವುದು ಮಾರ್ಕೆಟ್ ಗಿಮ್ಮಿಕ್ಕ್ ನಂತೆ ತೋರುತ್ತದೆ. ಏನೇ ಕಾರಣಗಳಿರಲಿ ಮತ್ತು ನಾನು ಅದನ್ನು ನಿರ್ಣಯಿಸಲು ಯಾರು ಅಲ್ಲ, ಆದರೆ ನೀವು ಅದನ್ನು ಒರಿಜಿನಲ್ ನಂತೆ ತೋರಿಸಲು ಪ್ರಯತ್ನಿಸಬಹುದಿತ್ತು. ಈಗ ನೀವು ಅದರಿಂದ ದೂರ ಸರಿದಿದ್ದೀರಿ. ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಎಂದು ಅವರು ಬರೆದಿದ್ದಾರೆ.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಅಕ್ಷಯ್ ಕುಮರ್, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತ ಕಪೂರ್, ಸುನೀಲ್ ಶೆಟ್ಟಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದರೆ ಕೆಲವರು ರೈತರ ಪರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...