Homeಮುಖಪುಟಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಫರಾಹ್ ಖಾನ್ ಅಲಿ ಕಿಡಿಕಾರಿದ್ದಾರೆ.

- Advertisement -
- Advertisement -

ಪಾಪ್ ಗಾಯಕಿ ರಿಯಾನ್ನ ಭಾರತದ ರೈತ ಹೋರಾಟವನ್ನು ಬೆಂಬಲಿಸಿದ ನಂತರ ಭಾರತದ ಬಾಲಿವುಡ್ ಸಹ ಈ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದೆ. ಆದರೆ ಮೊದಲಿಂದಲೂ ರೈತ ಹೋರಾಟ ಬೆಂಬಲಿಸುತ್ತಾ ಬಂದಿದ್ದ ಬಾಲಿವುಡ್‌ನ ಖ್ಯಾತ ನಟಿಯರಾದ ತಾಪ್ಸಿ ಪನ್ನು, ಫರಾಹ್ ಖಾನ್ ಅಲಿ ಮತ್ತು ಸ್ವರ ಭಾಸ್ಕರ್‌ರವರನ್ನು ನಟ ಅಭಯ್ ಡಿಯೋಲ್ ಶ್ಲಾಘಿಸಿದ್ದಾರೆ.

“ನನ್ನ ಮುಂದಿನ ರಿಹಾನ್ನಾ ಕುರಿತು ಬಾದಗಲ್‌ರಿರಿ ವಿಡಿಯೋದಲ್ಲಿ ನೀವಿರಲೇಬೇಕು. ಏಕೆಂದರೆ ಅದಕ್ಕೆ ಧೈರ್ಯವಿರಬೇಕು. ಈ ಮೂವರು ಪ್ರಿಯ ಮಹಿಳೆಯರನ್ನು ನೋಡಿ” ಎಂದು ಅಭಯ್ ಡಿಯೋಲ್ ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by Abhay Deol (@abhaydeol)

ಅಭಯ್ ತನ್ನ ಪೋಸ್ಟ್‌ನಲ್ಲಿ ತಾಪ್ಸಿ ಪನ್ನು ಮಾಡಿದ ಟ್ವೀಟ್‌ನ ಸ್ಕ್ರೀನ್ ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ… ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸಲು ಕೆಲಸ ಮಾಡಿ. ಬದಲಿಗೆ ಉಳಿದವರಿಗೆ ಪ್ರೊಪಗಂಡಾ ಪಾಠ ಮಾಡಲು ಬರಬೇಡಿ” ಎಂದು ತಾಪ್ಸಿ ಬರೆದಿದ್ದಾರೆ.

ಇನ್ನು ಸ್ವರ ಭಾಸ್ಕರ್ ಈಗಾಗಲೇ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಖುದ್ದು ಹೋಗಿ ಭಾಗವಹಿಸಿ ಬಂದಿದ್ದಾರೆ. ಅಲ್ಲದೆ ಭಾರತದಲ್ಲಿ ನಡೆಯುತ್ತಿರುವ ಟ್ವಿಟರ್ ಆಂದೋಲನದಲ್ಲಿ ರಿಹಾನ್ನ, ಗ್ರೇಟಾ ಥನ್‌ಬರ್ಗ್ ಮತ್ತು ಮಿಯಾ ಖಲೀಫ್ ಸೇರಿದಂತೆ ಹಲವರ ಪರ ದನಿಯೆತ್ತಿದ್ದಾರೆ.

ಇನ್ನು ಫರಾಹ್ ಖಾನ್ ಅಲಿ ಟ್ವೀಟ್ ಮಾಡಿ “ರೀಲ್ ಲೈಫ್ ಹೀರೋಗಳು ಮತ್ತು ರಿಯಲ್ ಲೈಫ್ ಹೀರೋಗಳು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಎಗೆನೆಸ್ಟ್ ಪ್ರೊಪಗಾಂಡ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಒಂದೇ ರೀತಿಯ ಟ್ವೀಟ್‌ಗಳನ್ನು ಮಾಡಿರುವುದು ಮಾರ್ಕೆಟ್ ಗಿಮ್ಮಿಕ್ಕ್ ನಂತೆ ತೋರುತ್ತದೆ. ಏನೇ ಕಾರಣಗಳಿರಲಿ ಮತ್ತು ನಾನು ಅದನ್ನು ನಿರ್ಣಯಿಸಲು ಯಾರು ಅಲ್ಲ, ಆದರೆ ನೀವು ಅದನ್ನು ಒರಿಜಿನಲ್ ನಂತೆ ತೋರಿಸಲು ಪ್ರಯತ್ನಿಸಬಹುದಿತ್ತು. ಈಗ ನೀವು ಅದರಿಂದ ದೂರ ಸರಿದಿದ್ದೀರಿ. ರೀಲ್ ಲೈಫ್ ಹೀರೋಗಳ ವಿರುದ್ಧ ರಿಯಲ್ ಲೈಫ್ ಹೀರೋಗಳು ಎಂದು ಅವರು ಬರೆದಿದ್ದಾರೆ.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಅಕ್ಷಯ್ ಕುಮರ್, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತ ಕಪೂರ್, ಸುನೀಲ್ ಶೆಟ್ಟಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದರೆ ಕೆಲವರು ರೈತರ ಪರ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...