Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...