Homeಅಂಕಣಗಳುಪುಟಕ್ಕಿಟ್ಟ ಪುಟಗಳು: ಖರ್ಚು ಮಾಡಿಬಿಡು, ಇನ್ನೂ ಬಾಕಿಯೇಕುಳಿಸಿಕೊಂಡಿರುವೆ?

ಪುಟಕ್ಕಿಟ್ಟ ಪುಟಗಳು: ಖರ್ಚು ಮಾಡಿಬಿಡು, ಇನ್ನೂ ಬಾಕಿಯೇಕುಳಿಸಿಕೊಂಡಿರುವೆ?

- Advertisement -
- Advertisement -

ಉಮರನ ಕವನಗಳೆಂದರವು ಇಹದ ಅಮಲು, ಪರದ ಅನುಭಾವ, ಪ್ರೀತಿಯ ಗಮಲು, ಕಾವ್ಯದ ಹುಚ್ಚು; ಪರ್ಶಿಯಾ ಭಾಷೆಯಲ್ಲಿನ ಈ ನಾಲ್ಕು ಸಾಲಿನ ಕವನಗಳನ್ನು ಎಡ್ವರ್ಡ್ ತಮ್ಮದಾಗಿಸಿಕೊಂಡು ಮಾಡಿರುವ ಅನುವಾದಗಳಲ್ಲೆಲ್ಲೂ ಪರಕೀಯತೆಯನ್ನು ಹೊಂದಿರುವಂತೆ ಕಾಣುವುದಿಲ್ಲ. ಆದರೆ ಪರ್ಶಿಯಾ ಭಾಷೆ ಗೊತ್ತಿದ್ದವರು ಅದನ್ನು ಹೇಳಬೇಕು. ಅಮಲು, ಗಮಲು ಮತ್ತು ಹುಚ್ಚಿನಲ್ಲಿರುವ ಯಾವನೊಬ್ಬ ತನ್ನೆದೆಯ ಗೂಡಿನಲ್ಲಿ ಬೆಚ್ಚಗಿರುವ ತಲೆಯನ್ನು ಕಳೆದುಕೊಂಡಿರುತ್ತಾನೋ, ಅವನಿಗೆ ಎಡ್ವರ್ಡ್‌ನ ಅನುವಾದವೋ, ಉಮರನ ಮೂಲವೋ ಎಂಬುದು ವಿಷಯವಲ್ಲ. ಆ ಹೊತ್ತಿನ ಅವನೆದೆಯ ಸೊತ್ತಾಗುತ್ತದೆ ಅಷ್ಟೇ.

ಮೌನವೇ ಸೊಲ್ಲಾಗಿರುವಂಗೆ ದಾರಿಯಿಲ್ಲದ ಬಯಲು, ಎಲ್ಲೆಯಿಲ್ಲದ ಮುಗಿಲು ಕಣ್ಣಿಗಾಗಲಿ, ಕಾಲಿಗಾಗಲಿ ತೊಡರದು. ನಾನೂ ಇಲ್ಲ, ನೀನೂ ಇಲ್ಲ. ಅದೂ ಇಲ್ಲ, ಇದೂ ಇಲ್ಲ. ಎಲ್ಲವೂ ಇದೆ, ಯಾವುದೂ ಇಲ್ಲ.

ಕೀಲಿಯಿಲ್ಲದ ಕದವನು ಕಂಡೆ
ಕಾಣಲಾರದಂತಹ ಪರದೆಯಿದೆ
ನಮ್ಮ ನಡುವೆ ಸಣ್ಣ ಮಾತು ಅಲ್ಪ ಕಾಲದೆ
ಇಲ್ಲವಾಯ್ತಾಗ ನಾನು ನೀನೆಂಬುದೆ

ಕುಡಿತವೆಂಬುದು ಇಹವ ಮರೆಯುವ ಒಂದು ನೆಪ. ಲೌಕಿಕದ ಲೆಕ್ಕ್ಕಾಚಾರಗಳೆಲ್ಲಾ ಭ್ರಷ್ಟವಾಗಿರುವವು ಅಲೌಕಿಕ ಮುಕ್ತ ಬಯಲಿನಲ್ಲಿ. ಕಾಲವೇ ಜೀವನ. ಜೀವನವೇ ಕಾಲ. ಏಕೆಂದರೆ ಅರಿವಿಲ್ಲದಂತೆ ಆಯ್ತೆಮ್ಮ ಜನನ, ಅರಿತಿಲ್ಲ ನಾವು ಎಂದು ಬರುವುದೋ ಮರಣ. ಅವಧಿ ಎಂಬುವುದುಂಟು ಹುಟ್ಟುಸಾವಿನ ನಡುವೆ. ಆ ಕಾಲವಲ್ಲವೇ ನಮ್ಮೆಲ್ಲಾ ಜೀವನ? ಕಾಲ ಮತ್ತು ಜೀವನ ಸಮಾನಾರ್ಥಕ ಪದಗಳು. ಒಂದಕ್ಕೆ, ಒಬ್ಬರಿಗೆ ಸಮಯವನ್ನು ಕೊಡುತ್ತೇವೆಂದರೆ ಜೀವನವನ್ನೇ ಕೊಡುತ್ತೇವೆಂದು ಅರ್ಥ. ಆ ಜೀವನವನ್ನು ಲೌಕಿಕವು ಬಂಧಿಸದಿರಲು ಇಹವನ್ನು ಮರೆಯುವ ಅಮಲು ಬೇಕು.

ಕೋಳಿ ಕೂಗುತ್ತಿದ್ದಂತೆ ಮದಿರಾಲಯದ ಮುಂದೆ
ನಿಂತಾತ ಕೂಗಿದ – ಕೂಡಲೆ ಬಾಗಿಲನು ತೆರೆ
ನಾವೆಷ್ಟು ಅಲ್ಪ ಕಾಲ ಇರುವುದೆಂದು ನಿನಗೆ ಗೊತ್ತಿಲ್ಲ
ಒಮ್ಮೆ ಇಲ್ಲಿಂದ ಹೊರಟರೆ ಬರದಿರಬಹುದು ಹಿಂದೆ.

ಆ ಸಿದ್ಧಾಂತ, ಈ ಸಾಧನೆ, ಅದೆಂತದ್ದೋ ಘನತೆ, ಇಂತಹದ್ದೊಂದು ಅಧಿಕಾರ; ಎಂದೆಲ್ಲಾ ಪರಿಪಾಟಲು ಪಡುವಾಗ ಉಮರ ಮೆಲ್ಲನೆ ಕಿವಿಯಲ್ಲಿ ಉಲಿಯುವನು.

ಖರ್ಚು ಮಾಡಿಬಿಡು, ಇನ್ನೂ ಬಾಕಿಯೇಕುಳಿಸಿಕೊಂಡಿರುವೆ?
ನಾವೂ ಕೂಡಾ ಮಣ್ಣಿಗಿಳಿದು ಬಿಡುವ ಮುನ್ನವೇ.
ಮಣ್ಣು ಮಣ್ಣಾಗುವಾಗ, ಮಣ್ಣ ಕೆಳಗುರುಳಿರುವಾಗ,
ಮದ್ಯವಿಲ್ಲ, ಹಾಡಿಲ್ಲ, ಹಾಡುವನಿಲ್ಲ, ಕೊನೆಯೂ ಇಲ್ಲ.

ಬದುಕೆಂಬುದೇ ಮಧುಪಾತ್ರೆ. ಅದನ್ನು ಸಿಹಿ ಎನ್ನುವುದೇ, ಕಹಿ ಎನ್ನುವುದೇ? ಅದು ರುಚಿಗಳನ್ನು ಮೀರಿರುವುದು. ಆದರೆ ಅರುಚಿಯ ರೋಗವಲ್ಲವದು. ಅಭಿರುಚಿಯ ರಸಿಕತೆಯದು.

ನೈಶಾಪುರದಲ್ಲಾಗಲಿ, ಬ್ಯಾಬಿಲೋನಲ್ಲಾಗಲಿ
ಬಟ್ಟಲೊಸರುತ್ತಿರುವುದು ಸಿಹಿಯಿಂದಾಗಲಿ, ಕಹಿಯಿಂದಾಗಲಿ
ಬದುಕ ಮಧುಪಾತ್ರೆ ಸೋರುತ್ತಿರುವುದು ಹನಿಹನಿಯಾಗಿ
ಬಾಳ ಬಿಟ್ಟು ಹನಿಯುತ್ತಲಿರುವುದು ಒಂದೊಂದಾಗಿ.

ಉಮರ ಇಸ್ಲಾಮಿನ ಕರ್ಮಠರಿಗೆ ತನ್ನ ಅನೇಕ ಕವನಗಳಲ್ಲಿ ಸೃಷ್ಟಿಯ ಸೌಂದರ್ಯದ ಪಾಠವನ್ನು ಮಾಡುವನು. ಸಂಪ್ರದಾಯ ಮತ್ತು ಆಚರಣೆಗಳಿಂದಾಗಿ ತಮ್ಮ ಬದುಕಿನ ಆದ್ರತೆಯನ್ನು ಬರಡಾಗಿಸಿಕೊಳ್ಳದಿರುವಂತೆ ಪ್ರೇರೇಪಿಸಲು ಯತ್ನಿಸುತ್ತಾನೆ. ಅದಾದರೂ ತನ್ನ ಕಡೆಯಿಂದ ಅವರಿಗಾಗಿ ಮಾಡುವಂತ ಪ್ರಯತ್ನವೇನಲ್ಲ. ಆದರೂ ಅವು ಸಾಂಪ್ರದಾಯಿಕ ವಿಚಾರಗಳ ಮತ್ತು ಸೂಫಿ ಸಿದ್ಧಾಂತಗಳ ನಡುವೆ ಚರ್ಚೆಯನ್ನು ತಂದಿಡುತ್ತವೆ.

ಒಟ್ಟಿನಲ್ಲಿ ಎಡ್ವರ್ಡ್ ತಮ್ಮ ಒಲವಿನಂತೆ ಲೌಕಿಕತೆಯಲ್ಲಿ ಅಲೌಕಿಕತೆಯನ್ನು ಸಾಕ್ಷಾತ್ಕರಿಸಿಕೊಳ್ಳುವ ಅಮಲಿನ ಪದ್ಯಗಳನ್ನು ಆಯ್ದುಕೊಂಡಿದ್ದಾರೆ. ಮುಕ್ತವಾಗಿ ಭಾವಾನುವಾದ ಮಾಡುವಂತೆ ಮಾಡದೇ ಪರ್ಶಿಯಾ ಮೂಲದ ಕೃತಿಯ ಲಯವನ್ನು ಇಂಗ್ಲಿಷಿನಲ್ಲಿ ಕಾಯ್ದಿಟ್ಟುಕೊಳ್ಳಲು ಯತ್ನಿಸಿದ್ದಾರೆ. ಸಾಮಾನ್ಯವಾಗಿ ಇದು ಕಷ್ಟದ ಕೆಲಸವೇ. ಆದರೆ ಮಾಡಿರುವ ಉತ್ತಮ ಮತ್ತು ಪ್ರಾಮಾಣಿಕ ಪ್ರಯತ್ನದಿಂದಾಗಿ ಉಮರ ಗಮಲನ್ನು ಕೆಡಿಸದಿರಲು ಸಾಧ್ಯವಾಗಿದೆ ಎನಿಸುತ್ತದೆ. ಕನ್ನಡದಲ್ಲಿ ಡಿ ವಿ ಗುಂಡಪ್ಪನವರು ಉಮರನ ಒಸಗೆ ಎಂದು ಅನುವಾದಿಸಿರುವುದೂ ಕೂಡಾ ಇದೇ ಎಡ್ವರ್ಡ್ ಫಿಟ್ಜ್ ಜೆರಾಲ್ಡನ ಅನುವಾದವನ್ನೇ.

ಆಡುವವನೆಸೆವಂತೆ ಬೀಳ್ವ ಚೆಂದಿಗದೇಕೆ
ಎಡಬಲಗಳೆಣಿಕೆ, ಸೋಲ್ ಗೆಲವುಗಳ ಗೋಜು
ನಿನ್ನಾರಿತ್ತಲೆಸೆದಿಹನೊ ಬಲ್ಲವನಾತ
ನೆಲ್ಲ ಬಲ್ಲವನವನು – ಬಲ್ಲನೆಲ್ಲವನು.

ಆತ್ಮ ಮತ್ತು ಪರಮಾತ್ಮನು ಒಂದಾಗುವಂತಹ ಅದ್ವೈತ ಸಿದ್ಧಾಂತ ಇಸ್ಲಾಮಿನ ಸಾಂಪ್ರದಾಯಿಕ ನಂಬುಗೆಯಲ್ಲಿ ಇಲ್ಲ. ಆದರೆ, ಸೂಫಿ ಪರಂಪರೆಯಲ್ಲಿ ಇಂತಹ ಅನುಭಾವಗಳಿಗೆ ಕೊರತೆ ಇಲ್ಲ. ಉಪನಿಷತ್ತಿನ, ಬೌದ್ಧ ಮತ್ತು ಕ್ರೈಸ್ತಧರ್ಮಗಳ ಪ್ರಭಾವಗಳನ್ನೆಲ್ಲಾ ತನ್ನದಾಗಿಸಿಕೊಂಡು ಇಸ್ಲಾಮಿನ ತಾತ್ವಿಕ ವಿಚಾರಗಳನ್ನು ಮಥಿಸಿ ನವನೀತವನ್ನು ತೆಗೆದಿದ್ದಾರೆ. ನನ್ನ ಅಭಿಪ್ರಾಯದಲ್ಲಿ ಉಮರನೂ ಅದನ್ನು ಮಾಡಿದ್ದಾನೆ.

ಉಮರನು ತಾನೇ ತನ್ನ ಚರಮ ಗೀತೆಯನ್ನು ಬರೆದುಕೊಂಡು ಇಹವನ್ನು ತ್ಯಜಿಸಿದನೆಂದು ಹೇಳುತ್ತಾರೆ.

ಓ ದೇವ ನೀನರಿವೆ ನಿನ್ನನಾರಸುತ್ತೆ
ಪಟ್ಟೆಲ್ಲ ಪಾಡುಗಳನಾದನಿತು ಪಟ್ಟೆನ್
ಎನಗೆ ಬಂದರಿವಿನಾ ಕೊರೆಯ ನೀಂ ಮರೆತುಬಿಡು
ನಾನರಸಿದವನೆಂದು ಕನಿಕರಿಸಿ ನೋಡು

ಈ ಸಾಲುಗಳು ಗುಂಡಪ್ಪರವರ ಅನುವಾದ. ಈ ಮೊದಲು ಮೇಲೆ ಮಾಡಿರುವವು ನನ್ನವು.

ಒಟ್ಟಿನಲ್ಲಿ ಜೀವನದ ರಹಸ್ಯ, ದರ್ಶನ, ಅನುಭವ, ರುಚಿಯ ಆಸ್ವಾದನೆಗಳ ಉಮನ ಒಸಗೆಯಲ್ಲಿ ದಕ್ಕುವುದು.
ಹೆಂಡದ ಅಂಗಡಿ ಎಂದರೆ ಜಿಜ್ಞಾಸುಗಳ ಗೋಷ್ಠಿ. ಬಟ್ಟಲೆಂದರೆ ಹೃದಯವೆಂದೂ, ಮದ್ಯವನ್ನು ಬಟ್ಟಲಿಗೆ ಹುಯ್ಯುವ ಸಾಕಿಯೆಂದರೆ ತತ್ವಾಭ್ಯಾಸಿ ಎಂದೂ, ಮದ್ಯವೆಂದರೆ ದೈವಿಕ ಆನಂದವೆಂದೂ ಉಮರನ ಚೌಪದಿಗಳಲ್ಲಿ ಸಂಕೇತಿಸುವರು. ಅವನ ಚೌಪದಿಗಳನ್ನು ವಿವರಿಸಲು ಹೋದರೆ ವಾಚ್ಯವಾಗುವುದು. ಸೂಚಿತ ಸಂಕೇತಗಳನ್ನು ತಾನೇ ಬಿಡಿಸಿಕೊಳ್ಳುತ್ತಾ ತಾನೇ ಸವಿಯುತ್ತಿದ್ದರೆ ಆನಂದದ ರಸವೊಸರುವುದು. ಇಷ್ಟು ಹೇಳಿದ್ದೂ ಅತಿಯೇ.


ಇದನ್ನೂ ಓದಿ: ಪುಟಕ್ಕಿಟ್ಟ ಪುಟಗಳು: ಪುರುಷಾಧಿಪತ್ಯವನ್ನು ಪ್ರಶ್ನಿಸಿ ಆರೋಗ್ಯಕರ ಶೃಂಗಾರ ಪಾಠ ಹೇಳುವ ’ಪ್ರಾಚೀನ ಭಾರತದಲ್ಲಿ ಕಾಮಶಾಸ್ತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...