Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...