Homeಮುಖಪುಟಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

ಮನಮೋಹನಸಿಂಗ್‍ಗೆ ಕಪ್ಪುಧ್ವಜ ತೋರಿಸಿದ್ದ ಜೆಎನ್‍ಯು ವಿದ್ಯಾರ್ಥಿ ಈಗ ರಾಹುಲ್ ಸಲಹೆಗಾರ!

- Advertisement -
- Advertisement -

ಎಐಸಿಸಿಯು ಇದನ್ನು ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಸದ್ಯ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಜೆಎನ್‍ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರೊಬ್ಬರು ಚುನಾವಣಾ ತಂತ್ರ ಕುರಿತಂತೆ ಸಲಹೆ ನೀಡುತ್ತಿದ್ದಾರೆ. ವಿಚಿತ್ರವೆಂದರೆ ಈ ಸಲಹೆಗಾರ ಹಿಂದೆ ಮನಮೋಹನ ಸಿಂಗ್ ಪ್ರಧಾನಿಯಾಗಿದ್ದಾಗ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟಿಸಿದ್ದರು! ಇವರ ಹೆಸರು ಸಂದೀಪ್ ಸಿಂಗ್.

ಸಂದೀಪ್ ಸಿಂಗ್

ಉತ್ತರ ಪ್ರದೇಶದವರಾದ ಸಂದೀಪ್ ಸಿಂಗ್ 2007ರಲ್ಲಿ ಜೆಎನ್‍ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಯೆಯಾಗಿದ್ದ ಕಾಮ್ರೇಡ್ ಸಂದೀಪ್‍ಸಿಂಗ್ ಈಗ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ರಾಜಕೀಯ ಸಲಹೆಗಾರರು. ರಾಹುಲ್ ಗಾಂಧಿಯವರ ಸಾರ್ವಜನಿಕ ಭಾಷಣಗಳ ತಯಾರಿಗೆ ಈಗ ಇದೇ ಸಂದೀಪ್ ಸಿಂಗ್ ನೆರವಾಗುತ್ತಿದ್ದಾರೆ.

ಪ್ರಿಯಾಂಕಾಗೆ ಉತ್ತರ ಪ್ರದೇಶದ ಜವಾಬ್ದಾರಿ ನೀಡುವಾಗ ರಾಹುಲ್‍ಗೆ ನೆನಪಾಗಿದ್ದು ಇದೇ ಸಂದೀಪ್ ಸಿಂಗ್. ಸದ್ಯ ಪ್ರಿಯಾಂಕಾ ಗಾಂಧಿಯವರ ಚುನಾವಣಾ ಪ್ರವಾಸದಲ್ಲಿ ಜೊತೆಗಿರುವ ಸಂದೀಪ್ ಸಿಂಗ್ ಸಲಹೆ ನೀಡುವುದರ ಜೊತೆಗೆ ಪಾಲಿಟಿಕಲ್ ಶೋಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.

ಹಿಂದೆ 2005ರಲ್ಲಿ ಆಗಿನ ಯುಪಿಎ ಸರ್ಕಾರದ ಕಾರ್ಪೋರೇಟ್ ಪರ ನೀತಿಗಳನ್ನು ವಿರೋಧಿಸುತ್ತಿದ್ದ ಸಂದೀಪ್ ಸಿಂಗ್ ಆಗಿನ ಪ್ರಧಾನಿ ಮನಮೋಹನಸಿಂಗ್‍ರರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು! ಸಂದೀಪ್‍ಸಿಂಗ್ ಕಮ್ಯುನಿಸ್ಟ್ ಪಾರ್ಟಿ(ಮಾರ್ಕಿಸ್ಟ್-ಲೆನಿನಿಸ್ಟ್)ಯ ವಿದ್ಯಾರ್ಥಿ ಸಂಘಟನೆ AISA ದ ಜೊತೆ ಗುರುತಿಸಿಕೊಂಡು ವಿದ್ಯಾರ್ಥಿ ನಾಯಕರಾದವರು. ಜೆಎನ್‍ಯು ಓದಿನ ನಂತರ ಅವರು ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಕಡೆ ವಾಲಿದರು ಎನ್ನುತ್ತಾರೆ ಅವರ ಸಹಪಾಠಿಗಳು.

2017ರಲ್ಲಿ ಎಡ ಚಿಂತನೆಗಳ ನೂರಾರು ವಿದ್ಯಾರ್ಥಿಗಳು, ಯುವ ನಾಯಕರು ರಾಹುಲ್ ಗಾಂಧಿ ಜೊತೆ ನಿಂತಿರುವುದನ್ನು ಇಲ್ಲಿ ಗಮನಿಸಬೇಕು. ರಾಹುಲ್ ಮಾತುಗಳಲ್ಲಿ ಕೂಡ ಬಂಡವಾಳಶಾಹಿಯ ವಿರುದ್ಧ ಕಟುಟೀಕೆ ಇರುವುದನ್ನು, ಅವರು ಕಲ್ಯಾಣರಾಜ್ಯದ ಬಗ್ಗೆ ಆಸಕ್ತಿ ತೋರುತ್ತಿರುವುದನ್ನು ಗಮನಿಸಬೇಕು. ಇದಕ್ಕೆ ಸಂದೀಪ್ ಸಿಂಗ್ ಕೂಡ ಕಾರಣರು ಎನ್ನಲಾಗುತ್ತಿದೆ.

ಇತ್ತೀಚಿನ ಪ್ರಿಯಾಂಕರ ಟ್ವೀಟ್‍ಗಳಲ್ಲೂ ಇದು ವ್ಯಕ್ತವಾಗಿದೆ. ಪ್ರಿಯಾಂಕಾ ಗಾಂಧಿಯ ಗಂಗಾ ಯಾತ್ರೆಯಲ್ಲಿ ಪಕ್ಕದಲ್ಲಿ ಬಿಜೆಪಿ ತೊರೆದು ಬಂದ ಸಾವಿತ್ರಿಬಾಯಿ ಪುಲೆ ಎಂಬ ದಲಿತ ನಾಯಕಿ ಇರುವಂತೆ ಸಿಂಗ್ ನೋಡಿಕೊಂಡರು ಎನ್ನಲಾಗಿದೆ. ಪ್ರಿಯಾಂಕಾ ಮತ್ತು ಭೀಮ್ ಆರ್ಮಿಯ ಚಂದ್ರಶೇಖರ್ ನಡುವೆ ಭೇಟಿ ಏರ್ಪಡಿಸಿದ್ದು ಕೂಡ ಇದೇ ಸಿಂಗ್.

ಎಡ ಚಿಂತನೆಗಳತ್ತ ವಾಲುವಿಕೆ!?
90ರ ದಶಕದಲ್ಲಿ ಕಾರ್ಪೊರೇಟ್ ಪರ ಆರ್ಥಿಕ ನೀತಿಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವೀಗ ರಾಹುಲ್ ನೇತೃತ್ವದಲ್ಲಿ ಎಡ ಚಿಂತನೆಗಳತ್ತ ಒಂದಿಷ್ಟು ವಾಲುತ್ತಿರುವ ಲಕ್ಷಣಗಳಿವೆ. ಕಾಂಗ್ರೆಸ್‍ನ ಪ್ರಣಾಳಿಕೆಯಲ್ಲೂ ಇದನ್ನು ಕಾಣಬಹುದು. ‘ನ್ಯಾಯ್’ ಯೋಜನೆಯಲ್ಲಂತೂ ಇದು ದಟ್ಟವಾಗಿದೆ.

ಇದು ಸಂದೀಪ್ ಸಿಂಗ್‍ರಂತಹ ಎಡ ಚಿಂತನೆಯ ಹಿನ್ನಲೆಯವರ ಸಾಂಗತ್ಯದ ಪರಿಣಾಮ ಎನ್ನಬಹುದು. ಆದರೆ, ನಿಜಕ್ಕೂ ಈ ಜನಸ್ನೇಹಿ ಪಲ್ಲಟದಲ್ಲಿ ಕಾಂಗ್ರೆಸ್ ಮುಂದೆಯೂ ಪ್ರಾಮಾಣಿಕವಾಗಿ ಇರಬಲ್ಲುದೇ ಎಂಬ ಪ್ರಶ್ನೆಯಂತೂ ಕಾಡುತ್ತಿದೆ.
(ಆಧಾರ: ದಿ ಪ್ರಿಂಟ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...