Homeಮುಖಪುಟಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಕಂಗನಾ ದ್ವೇಷಪೂರಿತ ಪೋಸ್ಟ್: ತನಿಖೆಯ ವರದಿ ಸಲ್ಲಿಸುವಂತೆ ಕೋರ್ಟ್ ನಿರ್ದೇಶನ

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಂದೇಶ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ವಿರುದ್ಧ ನಡೆಯುತ್ತಿರುವ ತನಿಖೆಯ ವರದಿ ಸಲ್ಲಿಸುವಂತೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೇಲ್ ಆಕ್ಷೇಪಾರ್ಹ ಸಂದೇಶಗಳನ್ನು ಕಳಿಸಿದ್ದಾರೆಂದು ಆರೋಪಿಸಿ ವಕೀಲರೊಬ್ಬರು ಕಳೆದ ಅಕ್ಟೋಬರ್‌ನಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ಡಿಸೆಂಬರ್ 5 ರೊಳಗೆ ವರದಿ ಸಲ್ಲಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಉಪನಗರ ಅಂಬೋಲಿ ಪೊಲೀಸರಿಗೆ ಸೂಚಿಸಿತ್ತು.

ಆದರೆ ನ್ಯಾಯಾಲಯವು ನೀಡಿದ ಸಮಯದೊಳಗೆ ವರದಿಯನ್ನು ಸಲ್ಲಿಸಲು ಪೊಲೀಸರು ವಿಫಲರಾಗಿದ್ದರು. ನಂತರ ಗಡುವನ್ನು ಜನವರಿ 5 ಕ್ಕೆ ವಿಸ್ತರಿಸಿತು. ಆಗಲೂ ಕೂಡ ಪೊಲೀಸರು ವರದಿ ಸಲ್ಲಿಸಿಲ್ಲ. ಪೊಲೀಸರಿಗೆ ಫೆಬ್ರವರಿ 5 ರವರೆಗೆ ಹೊಸ ಗಡುವು ನೀಡಲಾಯಿತು, ಆದರೆ ಪೊಲೀಸರು ಈ ಬಗ್ಗೆ ನಡೆಸಿದ ವಿಚಾರಣೆಯ ವರದಿಯನ್ನು ಇನ್ನೂ ಸಲ್ಲಿಸಿಲ್ಲ.

ಇದನ್ನೂ ಓದಿ: ನಿಮ್ಮ ಜೀವನವನ್ನೇ ಸರ್ವನಾಶ ಮಾಡುತ್ತೇನೆ: ಮತ್ತೆ ವಿವಾದಾತ್ಮಕ ಟ್ವೀಟ್ ಮಾಡಿದ ಕಂಗನಾ!

ಪೊಲೀಸರು ತನಿಖೆಯ ವರದಿ ಸಲ್ಲಿಸಲು ವಿಫಲವಾಗಿದ್ದರಿಂದ ಪ್ರಕ್ರಿಯೆಯನ್ನು ನೇರವಾಗಿ ಆರೋಪಿಗಳಿಗೆ ನೀಡಿ ಎಂದು ನಾನು ಮನವಿ ಮಾಡಿದ್ದೇನೆ ಎಂದು ದೂರುದಾರರಾದ ವಕೀಲ ಅಲಿ ಕಾಶಿಫ್ ಖಾನ್ ದೇಶ್ಮುಖ್ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕ್ರಿಯೆ ನೀಡುವುದು ಕಾನೂನು ವಿಧಾನವಾಗಿದ್ದು, ಆ ಮೂಲಕ ಆರೋಪಿಯು (ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ) ನ್ಯಾಯಾಲಯಕ್ಕೆ ಹಾಜರಾಗಬೇಕು ಅಥವಾ ಅವನ / ಅವಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸೂಚನೆ ನೀಡಲಾಗುತ್ತದೆ.

ಸಿಆರ್‌ಪಿಸಿಯ ಸೆಕ್ಷನ್ 202 ರ ಅಡಿಯಲ್ಲಿ ವಿಚಾರಣೆಗೆ ಪ್ರಾಥಮಿಕ ಸಾಕ್ಷ್ಯಳಿವೆಯೇ ಮತ್ತು ಆರೋಪಿಗಳ ವಿರುದ್ಧ ತನಿಖೆ ಮುಂದುವರಿಯಲು ಸಾಕಷ್ಟು ಆಧಾರವಿದೆಯೇ ಎಂದು ನಿರ್ಧರಿಸಲು ಆದೇಶಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 04ಕ್ಕೆ ಮುಂದೂಡಲಾಗಿದೆ.

ಕಂಗನಾ ಸಹೋದರಿ ರಂಗೋಲಿ ಚಾಂಡೆಲ್ ಕಳೆದ ವರ್ಷ ಏಪ್ರಿಲ್‌ನಲ್ಲಿ ಟ್ವಿಟ್ಟರ್‌ನಲ್ಲಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಸಂದೇಶವನ್ನು ಪೋಸ್ಟ್ ಮಾಡಿದ್ದರು. ನಂತರ ಅವರ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಅದೇ ಸಮಯದಲ್ಲಿ ತನ್ನ ಸಹೋದರಿಯ ಬೆಂಬಲಕ್ಕೆ ಕಂಗನಾ ನಿಂತಿದ್ದರು ಮತ್ತು ನಿರ್ದಿಷ್ಟ ಸಮುದಾಯವನ್ನು ಭಯೋತ್ಪಾದಕರು ಎಂದು ಕರೆದಿದ್ದರು ಎಂದು ದೂರಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಹಿಂಸಾತ್ಮಕ, ಪ್ರಚೋದಾನಾತ್ಮಕ ಪೋಸ್ಟ್‌ಗಳಿಗೆ ಕಂಗನಾ ಕುಖ್ಯಾತಿಯಾಗಿದ್ದಾರೆ. ಈ ಕುರಿತು ಹತ್ತಾರು ದೂರುಗಳು ಅವರ ಮೇಲೆ ದಾಖಲಾಗಿದ್ದು ವಿಚಾರಣೆ ನಡೆಯುತ್ತಿವೆ.


ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...