Homeಮುಖಪುಟಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ - ಶಿವಾನಂದ್ ತಿವಾರಿ

ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

- Advertisement -
- Advertisement -

“ಅಂತರರಾಷ್ಟ್ರೀಯ ಗಣ್ಯರ ವಿರುದ್ಧ ಕೇಂದ್ರ ಸರ್ಕಾರವೂ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದೆ” ಎಂದು ಆರ್‌ಜೆಡಿಯ ನಾಯಕ ನಾಯಕ ಶಿವಾನಂದ್ ತಿವಾರಿ ಶುಕ್ರವಾರ ಆರೋಪಿಸಿದ್ದಾರೆ. ರೈತ ಹೋರಾಟವನ್ನು ಬೆಂಬಲಿಸಿ ಖ್ಯಾತ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಮತ್ತು ಪಾಪ್ ಸಿಂಗರ್ ರಿಹಾನ್ನ ಟ್ವೀಟ್ ಮಾಡಿದ್ದರು.

ಇದನ್ನು ಖಂಡಿಸಿ ಕ್ರಿಕೆಟರ್‌ಗಳಾದ ಸಚಿನ್ ತೆಂಡೂಲ್ಕರ್, ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಮತ್ತು ಅಜಯ್ ದೇವಗನ್, ಕಂಗನಾ ರಣಾವತ್ ಸೇರಿ ಮುಂತಾದವರು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆರ್‌ಜೆಡಿಯ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಾನಂದ ತಿವಾರಿ, “ಸಚಿನ್ ಅಂಥವರಿಂದ ಹೇಳಿಕೆಗಳನ್ನು ಕೊಡಿಸುವ ಮೂಲಕ ರೈತರ ಹೋರಾಟಕ್ಕೆ ಜಗತ್ತು ಕುರುಡಾಗಿರಬೇಕು ಎಂದು ಕೇಂದ್ರ ಬಯಸುತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

“ರೈತರಿಗೆ ಟ್ವಿಟರ್ ಬಗ್ಗೆ ಗೊತ್ತಿಲ್ಲ. ಟ್ವಿಟರ್ ರಾಜಕೀಯ ಇತ್ತೀಚೆಗೆ ಪ್ರಾರಂಭವಾಗಿದೆ. ಎಲ್ಲರೂ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಗ್ರೇಟಾ ಥನ್‌ಬರ್ಗ್‌ ಅಥವಾ ರಿಹಾನ್ನಾ ಬಗ್ಗೆ ರೈತರಿಗೆ ಏನು ಗೊತ್ತು? ನೀವು ಅವರ ವಿರುದ್ಧ ಸಚಿನ್ ತೆಂಡೂಲ್ಕರ್ ಅವರನ್ನು ಕಣಕ್ಕಿಳಿಸಿದ್ದೀರಿ” ಎಂದು ತಿವಾರಿ ವಾಗ್ದಾಳಿ ನಡೆಸಿದ್ದಾರೆ.

ತಿವಾರಿ ಅವರ ಹೇಳಿಕೆಯು ಬಿಹಾರದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಯುವನ್ನು ಕೆರಳಿಸಿದ್ದು, ತಿವಾರಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. 

ಗ್ರೇಟಾ ಅವರನ್ನು ಬೆಂಬಲಿಸಿ ಸೆಲಬ್ರಿಟಿಗಳಾದ ಸೋನಾಕ್ಷಿ ಸಿನ್ಹಾ, ತಾಪ್ಸಿ ಪನ್ನು, ರಮ್ಯಾ, ಮನೋಜ್ ತಿವಾರಿ, ರೋಹಿತ್ ಶರ್ಮಾ ಮುಂತಾದವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...