Homeಮುಖಪುಟರೈತ ಹೋರಾಟ: ನಾಳೆಯ 'ಚಕ್ಕಾ ಜಾಮ್' ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

ರೈತ ಹೋರಾಟ: ನಾಳೆಯ ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

- Advertisement -
- Advertisement -

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಭಾಗವಾಗಿ ನಾಳೆ ಶನಿವಾರ ಫೆ. 6 ರಂದು ಚಕ್ಕಾ ಜಾಮ್-ರಸ್ತೆ ತಡೆ ಪ್ರತಿಭಟನೆಗೆ ಸಂಯುಕ್ತ್ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದರ ಸ್ವರೂಪ ಹೇಗಿರಲಿವೆ? ವಿವರಗಳು ಇಲ್ಲಿವೆ.

ಚಕ್ಕಾ ಜಾಮ್ ಏತಕ್ಕಾಗಿ?

40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ದೇಶವ್ಯಾಪಿ ರಸ್ತೆ ತಡೆಗೆ ಕರೆ ನೀಡಿದೆ. ಕೇಂದ್ರ ಬಜೆಟ್‌ನಲ್ಲಿ ರೈತರನ್ನು ನಿರ್ಲಕ್ಷಿಸಿದ್ದು ಮತ್ತು ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಯಾವ ಭಾಗಗಳಲ್ಲಿ ಪರಿಣಾಮ?

ದೆಹಲಿಯನ್ನು ಹೊರತುಪಡಿಸಿ, ಆದರೆ ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ಬರುವ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಗಡಿಭಾಗಗಳಲ್ಲಿ ರಸ್ತೆ ತಡೆ ನಡೆಯಲಿದೆ. ಉಳಿದಂತೆ ದಕ್ಷಿಣ ರಾಜ್ಯಗಳು ಸೇರಿದಂತೆ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, “ನಾವು ದೆಹಲಿಯಲ್ಲಿ ಏನನ್ನೂ ಮಾಡಲು ಹೋಗುವುದಿಲ್ಲ, ಅಲ್ಲಿನ ರಾಜ ಸ್ವಯಂ ಗೃಹಬಂಧಿಯಗಿದ್ದಾನೆ. ಈಗ ಅಲ್ಲಿ ನಾವು ದಿಗ್ಬಂಧನ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.

ಎಷ್ಟು ಸಮಯದವರೆಗೆ?

ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ನಡುವೆ ’ಚಕ್ಕಾ ಜಾಮ್’ ನಡೆಯಲಿದೆ. ಬಂದು ನಿಲ್ಲುವ ವಾಹನಗಳಿಗೆ ನೀರು ಮತ್ತು ಆಹಾರವನ್ನು ನೀಡಲಾಗುವುದು ಎಂದು ಟಿಕಾಯತ್ ಹೇಳಿದ್ದಾರೆ. ಈ ಜನರಿಗೆ ಸರ್ಕಾರವು ರೈತರೊಂದಿಗೆ ಹೇಗೆ ವರ್ತಿಸುತ್ತಿದೆ ಎಂಬುದರ ಕುರಿತು ತಿಳಿಸಲಾಗುವುದು ಎಂದಿದ್ದಾರೆ.

ಈ ಪ್ರತಿಭಟನೆಯನ್ನು ರೈತರ ನೇತೃತ್ವದ ’ಸೈದ್ಧಾಂತಿಕ ಕ್ರಾಂತಿ’ ಎಂದು ಅವರು ಬಣ್ಣಿಸಿದ್ದಾರೆ. ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿನ ರೈತ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ಹಿನ್ನಲೆಯಲ್ಲಿ, ಈ ಪ್ರತಿಭಟನೆಗೆ ಫೋನ್‌ಗಳು ಅಥವಾ ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಇದು ಸರ್ಕಾರದ ಕ್ರಮಗಳ ವಿರುದ್ಧದ ಪ್ರತಿಭಟನೆ ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

ಭದ್ರತಾ ವ್ಯವಸ್ಥೆ:

ರಾಷ್ಟ್ರವ್ಯಾಪಿ ’ಚಕ್ಕಾ ಜಾಮ್’ ದೃಷ್ಟಿಯಿಂದ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಗಾಜಿಪುರ ಗಡಿಯಲ್ಲಿ ವಾಹನಗಳ ಸಂಚಾರವನ್ನು ತಡೆಯಲು ಪೊಲೀಸರು ಬಹು-ಪದರದ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ. ಜನರು ಕಾಲ್ನಡಿಗೆಯಲ್ಲಿ ಬರುವುದನ್ನು ತಪ್ಪಿಸಲು ಮುಳ್ಳುತಂತಿ-ಮೊಳೆಗಳನ್ನು ಸಹ ಹಾಕಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನದಲ್ಲಿ ಹರಿಯಾಣ ಪೊಲೀಸರು ಭದ್ರತಾ ಕ್ರಮಗಳನ್ನು ಚುರುಕುಗೊಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಮುಖ ಜಂಕ್ಷನ್‌ಗಳು ಮತ್ತು ರಸ್ತೆಗಳಲ್ಲಿ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ಹೇಳಲಾಗಿದ್ದು, ಸಮರ್ಪಕ ಸಿಬ್ಬಂದಿಯನ್ನು ನಿಯೋಜಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಪ್ರತಿಭಟನೆಗಳ ಬಗ್ಗೆ:

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹೆಚ್ಚಿನ ಪ್ರಮಾಣದ ರೈತರು ಸೇರಿದಂತೆ ದೇಶದ ಇತರ ಭಾಗಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿಭಟನಾ ನಿರತ ರೈತರು ಈ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿದ ರಾಜ್ಯ ಸರ್ಕಾರ- ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...