Homeಮುಖಪುಟರೈತ ಹೋರಾಟ: ನಾಳೆಯ 'ಚಕ್ಕಾ ಜಾಮ್' ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

ರೈತ ಹೋರಾಟ: ನಾಳೆಯ ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

- Advertisement -
- Advertisement -

ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಭಾಗವಾಗಿ ನಾಳೆ ಶನಿವಾರ ಫೆ. 6 ರಂದು ಚಕ್ಕಾ ಜಾಮ್-ರಸ್ತೆ ತಡೆ ಪ್ರತಿಭಟನೆಗೆ ಸಂಯುಕ್ತ್ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದರ ಸ್ವರೂಪ ಹೇಗಿರಲಿವೆ? ವಿವರಗಳು ಇಲ್ಲಿವೆ.

ಚಕ್ಕಾ ಜಾಮ್ ಏತಕ್ಕಾಗಿ?

40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ್ ಕಿಸಾನ್ ಮೋರ್ಚಾ ದೇಶವ್ಯಾಪಿ ರಸ್ತೆ ತಡೆಗೆ ಕರೆ ನೀಡಿದೆ. ಕೇಂದ್ರ ಬಜೆಟ್‌ನಲ್ಲಿ ರೈತರನ್ನು ನಿರ್ಲಕ್ಷಿಸಿದ್ದು ಮತ್ತು ಪ್ರತಿಭಟನೆ ನಡೆಯುತ್ತಿರುವ ಸ್ಥಳಗಳು ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಯಾವ ಭಾಗಗಳಲ್ಲಿ ಪರಿಣಾಮ?

ದೆಹಲಿಯನ್ನು ಹೊರತುಪಡಿಸಿ, ಆದರೆ ರಾಷ್ಟ್ರ ರಾಜಧಾನಿ ವಲಯ (ಎನ್‌ಸಿಆರ್)ದಲ್ಲಿ ಬರುವ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಗಡಿಭಾಗಗಳಲ್ಲಿ ರಸ್ತೆ ತಡೆ ನಡೆಯಲಿದೆ. ಉಳಿದಂತೆ ದಕ್ಷಿಣ ರಾಜ್ಯಗಳು ಸೇರಿದಂತೆ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, “ನಾವು ದೆಹಲಿಯಲ್ಲಿ ಏನನ್ನೂ ಮಾಡಲು ಹೋಗುವುದಿಲ್ಲ, ಅಲ್ಲಿನ ರಾಜ ಸ್ವಯಂ ಗೃಹಬಂಧಿಯಗಿದ್ದಾನೆ. ಈಗ ಅಲ್ಲಿ ನಾವು ದಿಗ್ಬಂಧನ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.

ಎಷ್ಟು ಸಮಯದವರೆಗೆ?

ರಸ್ತೆಗಳು ಮತ್ತು ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ನಡುವೆ ’ಚಕ್ಕಾ ಜಾಮ್’ ನಡೆಯಲಿದೆ. ಬಂದು ನಿಲ್ಲುವ ವಾಹನಗಳಿಗೆ ನೀರು ಮತ್ತು ಆಹಾರವನ್ನು ನೀಡಲಾಗುವುದು ಎಂದು ಟಿಕಾಯತ್ ಹೇಳಿದ್ದಾರೆ. ಈ ಜನರಿಗೆ ಸರ್ಕಾರವು ರೈತರೊಂದಿಗೆ ಹೇಗೆ ವರ್ತಿಸುತ್ತಿದೆ ಎಂಬುದರ ಕುರಿತು ತಿಳಿಸಲಾಗುವುದು ಎಂದಿದ್ದಾರೆ.

ಈ ಪ್ರತಿಭಟನೆಯನ್ನು ರೈತರ ನೇತೃತ್ವದ ’ಸೈದ್ಧಾಂತಿಕ ಕ್ರಾಂತಿ’ ಎಂದು ಅವರು ಬಣ್ಣಿಸಿದ್ದಾರೆ. ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿನ ರೈತ ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ಹಿನ್ನಲೆಯಲ್ಲಿ, ಈ ಪ್ರತಿಭಟನೆಗೆ ಫೋನ್‌ಗಳು ಅಥವಾ ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಇದು ಸರ್ಕಾರದ ಕ್ರಮಗಳ ವಿರುದ್ಧದ ಪ್ರತಿಭಟನೆ ಎಂದಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಬಾಲಿವುಡ್ ನಟ ಸಲ್ಮಾನ್ ಖಾನ್‌‌ ಹೇಳಿದ್ದೇನು?

ಭದ್ರತಾ ವ್ಯವಸ್ಥೆ:

ರಾಷ್ಟ್ರವ್ಯಾಪಿ ’ಚಕ್ಕಾ ಜಾಮ್’ ದೃಷ್ಟಿಯಿಂದ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ. ಗಾಜಿಪುರ ಗಡಿಯಲ್ಲಿ ವಾಹನಗಳ ಸಂಚಾರವನ್ನು ತಡೆಯಲು ಪೊಲೀಸರು ಬಹು-ಪದರದ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದಾರೆ. ಜನರು ಕಾಲ್ನಡಿಗೆಯಲ್ಲಿ ಬರುವುದನ್ನು ತಪ್ಪಿಸಲು ಮುಳ್ಳುತಂತಿ-ಮೊಳೆಗಳನ್ನು ಸಹ ಹಾಕಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಪ್ರಯತ್ನದಲ್ಲಿ ಹರಿಯಾಣ ಪೊಲೀಸರು ಭದ್ರತಾ ಕ್ರಮಗಳನ್ನು ಚುರುಕುಗೊಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪ್ರಮುಖ ಜಂಕ್ಷನ್‌ಗಳು ಮತ್ತು ರಸ್ತೆಗಳಲ್ಲಿ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುವಂತೆ ಹೇಳಲಾಗಿದ್ದು, ಸಮರ್ಪಕ ಸಿಬ್ಬಂದಿಯನ್ನು ನಿಯೋಜಿಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.

ಪ್ರತಿಭಟನೆಗಳ ಬಗ್ಗೆ:

ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಹೆಚ್ಚಿನ ಪ್ರಮಾಣದ ರೈತರು ಸೇರಿದಂತೆ ದೇಶದ ಇತರ ಭಾಗಗಳ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. ಪ್ರತಿಭಟನಾ ನಿರತ ರೈತರು ಈ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ವ್ಯವಸ್ಥೆಯನ್ನು ಕಿತ್ತುಹಾಕಲು ದಾರಿ ಮಾಡಿಕೊಡುತ್ತವೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕ ಮುಂದೂಡಿದ ರಾಜ್ಯ ಸರ್ಕಾರ- ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...