Homeಮುಖಪುಟಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು- ಮೀನಾ ಹ್ಯಾರಿಸ್

- Advertisement -
- Advertisement -

ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಇದು ಕೇವಲ ಕೃಷಿ ನೀತಿಯ ಬಗ್ಗೆ ಅಲ್ಲ. ಇದು ಧಾರ್ಮಿಕ ಅಲ್ಪಸಂಖ್ಯಾತರ ಕಿರುಕುಳದ ಬಗ್ಗೆಯೂ ಇದೆ. ಇದು ಪೊಲೀಸ್ ಹಿಂಸೆ, ಉಗ್ರಗಾಮಿ ರಾಷ್ಟ್ರೀಯತೆ ಮತ್ತು ಕಾರ್ಮಿಕ ಹಕ್ಕುಗಳ ಮೇಲಿನ ದಾಳಿ. ಇದು ಜಾಗತಿಕ ಸರ್ವಾಧಿಕಾರ. ನಿಮ್ಮ ಆಂತರಿಕ ವ್ಯವಹಾರಗಳಿಂದ ದೂರವಿರಲು ಹೇಳಬೇಡಿ. ಇವೆಲ್ಲ ನಮ್ಮ ಸಮಸ್ಯೆಗಳು” ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಈ ಹಿಂದೆಯೂ ಮೀನಾ ಹ್ಯಾರಿಸ್ ರೈತರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, “ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆದಿರುವುದು ಕಾಕತಾಳೀಯವಲ್ಲ, ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರಜಾಪ್ರಭುತ್ವವು ಆಕ್ರಮಣಕ್ಕೊಳಗಾಗಿದೆ. ಭಾರತದ ಅಂತರ್ಜಾಲ ಸ್ಥಗಿತಗೊಳಿಸುವಿಕೆ ಮತ್ತು ರೈತ ಪ್ರತಿಭಟನಾಕಾರರ ವಿರುದ್ಧ ಅರೆಸೈನಿಕ ಪಡೆಗಳ ದೌರ್ಜನ್ಯದ ವಿರುದ್ಧ ನಾವೆಲ್ಲರೂ ಆಕ್ರೋಶಗೊಳ್ಳಬೇಕು”ಎಂದು ಅವರು ಟ್ವೀಟ್ ಮಾಡಿದ್ದರು.

ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ದೆಹಲಿ ಪೊಲೀಸರು ಘರ್ಷಣೆ ನಡೆಸಿದ ನಂತರ ಅಲ್ಲಿ ಇಂಟರ್ನೆಟ್ ಕಡಿತಗೊಳಿಸಿರುವುದನ್ನು ಉಲ್ಲೇಖಿಸಿ ಸಿಎನ್‌ಎನ್ ಹೋರಾಟದ ಬಗ್ಗೆ ವರದಿ ಮಾಡಿತ್ತು. ಇದನ್ನು ತನ್ನ ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದ ಪಾಪ್ ತಾರೆ ರಿಹಾನ್ನಾ “ರೈತ ಹೋರಾಟದ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ರಿಹಾನ್ನಾ ಟ್ವೀಟ್ ಮಾಡಿದ ನಂತರ ಹೋರಾಟವು ಜಾಗತಿಕವಾಗಿ ಸದ್ದು ಮಾಡಿದ್ದು ಹಲವಾರು, ಅಂತಾರಾಷ್ಟ್ರೀಯ ಸೆಲೆಬ್ರಿಟಿಗಳು ರೈತ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ಇದರಿಂದ ಅಸಮಧಾನಗೊಂಡಿದ್ದ ಕೇಂದ್ರ ಸರ್ಕಾರ ರೈತರ ಸಮಸ್ಯೆಯು ದೇಶದ ಆಂತರಿಕ ವಿಷಯ, ವಿದೇಶಿಯರು ತಲೆ ಹಾಕಬಾರದು ಎಂದು ಹೇಳಿತ್ತು. ಜೊತೆಗೆ ರೈತರನ್ನು ಬೆಂಬಲಿಸಿದ ಹ್ಯಾಶ್‌ಟ್ಯಾಗ್‌ಗಳ ವಿರುದ್ದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ನೀಡಿತ್ತು. ಇದನ್ನು ಅನುಸರಿಸಿ ಭಾರತೀಯ ಸೆಲೆಬ್ರಿಟಿಗಳು ಸರ್ಕಾರದ ಪರ ಬ್ಯಾಟ್ ಬೀಸಿದ್ದರು.

ಈ ಮಧ್ಯೆ ರೈತ ಹೋರಾಟದ ಪರವಾಗಿ ಮಾತನಾಡಿದ್ದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ತನ್ನ ಟ್ವೀಟ್‌ ಒಂದರಲ್ಲಿ ಹೋರಾಟಕ್ಕೆ ಹೇಗೆ ಬೆಂಬಲಿಸಬಹುದು ಎಂಬ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರು. ಇದೀಗ ಪೊಲೀಸರು ಈ ಟೂಲ್‌‌ಕಿಟ್‌ ಅನ್ನು ರಚಿಸಿದವರ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.


ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೇವಲ ಎಡಪಂಥೀಯ ಚಿಂತನೆಗಳು ಮಾತ್ರ ಇದರಲ್ಲಿ ಬರುತ್ತದೆ ಹೊರತು ಯಾವುದೇ ಪ್ರಯೋಜನವಿಲ್ಲ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...