Homeಮುಖಪುಟದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ - ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ದೆಹಲಿಯ ಸುತ್ತಮುತ್ತಲಿನ ಮೂರು ಪ್ರಮುಖ ಪ್ರತಿಭಟನಾ ಸ್ಥಳಗಳಲ್ಲಿ (ಸಿಂಘು, ಟಿಕ್ರಿ ಮತ್ತು ಗಾಜಿಪುರ) ಇಂಟರ್ನೆಟ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಕನಿಷ್ಟ ಬೆಂಬಲ ಬೆಲೆಯ ಭರವಸೆ ನೀಡುವಂತೆ ಒತ್ತಾಯಿಸಿ ಕಳೆದ 2 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆಯ ನಂತರ ರಾಕೇಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ್ದರು. ಇದು ಉತ್ತರ ಭಾರತದ ರಾಜ್ಯಗಳ ರೈತರನ್ನು ಕೆರಳಿಸಿತ್ತು. ಇದರಿಂದ ಪ್ರಚೋದಿತಗೊಂಡ ಲಕ್ಷಾಂತರ ರೈತ ಬೆಂಬಲಿಗರು ಪ್ರತಿ ಹಳ್ಳಿಯಲ್ಲೂ ಮಹಾಪಂಚಾಯತ್ ನಡೆಸಿ ದೆಹಲಿಯಲ್ಲಿ ಕುಳಿತಿರುವ ರೈತರಿಗೆ ಬೆಂಬಲ ಸೂಚಿಸಿದ್ದಾರೆ.

ಇದರ ಬೆನ್ನಲ್ಲೇ ರೈತ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ರೈತ ಮುಖಂಡ ರಾಕೇಶ್ ಟಿಕಾಯತ್ ಇಂದು (ಫೆಬ್ರವರಿ 6) ರಾಷ್ಟ್ರದಾದ್ಯಂತ ರಸ್ತೆ ತಡೆ (ಚಕ್ಕಾ ಜಾಮ್) ಪ್ರತಿಭಟನೆಯನ್ನು ನಡೆಸಲು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ಸುಮಾರು 50,000 ಕ್ಕೂ ಹೆಚ್ಚು ಪೊಲೀಸರು, ಅರೆ ಸೈನಿಕರು ಮತ್ತು ಮೀಸಲು ಪಡೆಯನ್ನು ದೆಹಲಿಯ ಗಡಿಗಳಲ್ಲಿ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಮೂರು ವಿವಾದಾತ್ಮಕ ಕೇಂದ್ರ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸಮ್ಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕರೆ ನೀಡಿರುವ ಚಕ್ಕಾ ಜಾಮ್ ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗಲಿದ್ದು, ದೇಶದ ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು 3 ಗಂಟೆಯವರೆಗೆ ನಿರ್ಬಂಧಿಸಲಾಗುವುದು.

“ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಾಳೆ ಯಾವುದೇ ರಸ್ತೆ ತಡೆ ಇಲ್ಲ; ದೆಹಲಿಯನ್ನು ಹೊರತುಪಡಿಸಿ ದೇಶದ ಉಳಿದ ಭಾಗಗಳಲ್ಲಿ ರಸ್ತೆಗಳನ್ನು ನಿರ್ಬಂಧಿಸಲಾಗುವುದು” ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇವಲ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಮಾತ್ರ ತಡೆಯಲಾಗುತ್ತಿದ್ದು, ದೆಹಲಿಯಲ್ಲಿ ಯಾವುದೇ ಪ್ರತಿಭಟನೆ ಇರುವುದಿಲ್ಲ ಎಂದು ರೈತ ಸಂಘಟನೆಗಳು ಸ್ಪಷ್ಟಪಡಿಸಿದ್ದರೂ, 50,000 ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಗಣ್ಯರ ವಿರುದ್ಧ ತೆಂಡೂಲ್ಕರ್ ಅನ್ನು ಕಣಕ್ಕಿಳಿಸಿದ ಕೇಂದ್ರ – ಶಿವಾನಂದ್ ತಿವಾರಿ

ಎಲ್ಲ ತುರ್ತು ಹಾಗೂ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದ್ದು, ಈ ಪ್ರತಿಭಟನೆ ಸಂಪೂರ್ಣ ಅಹಿಂಸಾತ್ಮಕ ಹಾಗೂ ಶಾಂತಿಯುತವಾಗಿರುತ್ತವೆ ಎಂದು ರೈತ ಮುಖಂಡರು ಹೇಳಿದ್ದಾರೆ. ಆದರೆ ಗಣರಾಜ್ಯೋತ್ಸವ ದಿನದ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸರು ಬಿಗಿಬಂದೋಬಸ್ತ್ ವ್ಯವಸ್ಥೆಗೊಳಿಸಿದ್ದಾರೆ.

ರಾಜಧಾನಿಯ ವಿವಿಧೆಡೆ ಬಾಂಬ್ ಹಾಗೂ ಶ್ವಾನದಳವನ್ನು ನಿಯೋಜಿಸಲಾಗಿದೆ. ಮಾರುಕಟ್ಟೆ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹಾಗೂ ಐತಿಹಾಸಿಕ ಮಹತ್ವದ ಸ್ಥಳಗಳಾದ ಕೆಂಪು ಕೋಟೆ, ಇಂಡಿಯಾ ಗೇಟ್ ಮತ್ತು ಸಂಸತ್ ಭವನದ ರಸ್ತೆಗಳ ಮೇಲೆ ಹೆಚ್ಚಿನ ಕಣ್ಗಾವಲು ವ್ಯವಸ್ಥೆಗೊಳಿಸಲಾಗಿದೆ. ರಾಜಧಾನಿಯತ್ತ ಬರುವ ಕಚ್ಚಾ ರಸ್ತೆಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಸಾವಿರಾರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಇದನ್ನು ಕೇಂದ್ರೀಯ ಸಿ4ಐ ನಿಯಂತ್ರಣ ಕೊಠಡಿಗಳಿಂದ ವೀಕ್ಷಿಸಲಾಗುತ್ತಿದೆ.

“ವದಂತಿ ಹರಡುವವರನ್ನು ಪತ್ತೆಹಚ್ಚಲು ಅಥವಾ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಸಾಮಾಜಿಕ ಮಾಧ್ಯಮವನ್ನು ಮೇಲ್ವಿಚಾರಣೆ ಮಾಡಲಿದ್ದಾರೆ. ನಾವು ಇತರ ರಾಜ್ಯಗಳ ಪೊಲೀಸ್ ಪಡೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ದೆಹಲಿ ಪೊಲೀಸ್ ವಕ್ತಾರ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ದೆಹಲಿಯ ಸುತ್ತಮುತ್ತಲಿನ ಮೂರು ಪ್ರಮುಖ ಪ್ರತಿಭಟನಾ ಸ್ಥಳಗಳಲ್ಲಿ (ಸಿಂಘು, ಟಿಕ್ರಿ ಮತ್ತು ಗಾಜಿಪುರ) ಇಂಟರ್ನೆಟ್ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.

ಇನ್ನು ಈ ಕುರಿತು ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗ, “ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಪ್ರತಿಭಟನಾನಿರತ ರೈತರು ಸಂಯಮ ಕಾಪಾಡುವಂತೆ ಮನವಿ ಮಾಡುತ್ತಿದ್ದೇವೆ. ಶಾಂತಿಯುತವಾಗಿ ಸೇರುವುದು ಹಾಗೂ ಅಭಿವ್ಯಕ್ತಿಯ ಹಕ್ಕನ್ನು ಆಫ್‌ಲೈನ್ ಮತ್ತು ಆನ್‌ಲೈನ್ ಮೂಲಕ ಸಂರಕ್ಷಿಸಬೇಕು. ಎಲ್ಲರ ಮಾನವ ಹಕ್ಕುಗಳನ್ನು ಗೌರವಿಸುವ ರೀತಿಯಲ್ಲಿ ಸಮಾನ ಪರಿಹಾರವನ್ನು ಕಂಡುಹಿಡಿಯುವುದು ಅಗತ್ಯ” ಎಂದು ಮನವಿ ಮಾಡಿದೆ.


ಇದನ್ನೂ ಓದಿ: ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...