Homeಮುಖಪುಟ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ #FarmersProtest ಹ್ಯಾಷ್‌ಟ್ಯಾಗ್ ಬಳಸಿದ್ದು ಕುತೂಹಲಕರವಾಗಿದೆ ಮತ್ತು ಇದು ನಮ್ಮ ವಿದೇಶಾಂಗ ಇಲಾಖೆಗೆ ಇನ್ನಷ್ಟು ಚಡಪಡಿಕೆ ಉಂಟು ಮಾಡುವ ಸಾಧ್ಯತೆಯಿದೆ.

- Advertisement -
- Advertisement -

ಅಧಿಕಾರಸ್ಥರು ಪ್ರತಿಭಟನಾಕಾರರ ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು, ಗೌರವಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ (ಒಎಚ್‌ಸಿಎಚ್‌ಆರ್) ಕಚೇರಿ ತಿಳಿಸಿದೆ.

ಭಾರತದಲ್ಲಿ 73ನೆ ದಿನಕ್ಕೆ ಕಾಲಿಟ್ಟಿರುವ ರೈತರ ಪ್ರತಿಭಟನೆಯು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಈ ನಡುವೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಅಥವಾ ಒಎಚ್‌ಸಿಎಚ್‌ಆರ್ ಕಚೇರಿ ಶುಕ್ರವಾರ ಸರ್ಕಾರ ಮತ್ತು ಪ್ರತಿಭಟನಾಕಾರರಿಗೆ ಗರಿಷ್ಠ ಸಂಯಮವನ್ನು ತೋರುವಂತೆ ಕರೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ, #FarmersProtest ಹ್ಯಾಷ್‌ಟ್ಯಾಗ್ ಬಳಸಿದ್ದು ಕುತೂಹಲಕರವಾಗಿದೆ ಮತ್ತು ಇದು ನಮ್ಮ ವಿದೇಶಾಂಗ ಇಲಾಖೆಗೆ ಇನ್ನಷ್ಟು ಚಡಪಡಿಕೆ ಉಂಟು ಮಾಡುವ ಸಾಧ್ಯತೆಯಿದೆ.

“ಈಗ ನಡೆಯುತ್ತಿರುವ #FarmersProtest ನಲ್ಲಿ ಅಧಿಕಾರಸ್ಥರು ಮತ್ತು ಪ್ರತಿಭಟನಾಕಾರರು ಗರಿಷ್ಠ ಸಂಯಮವನ್ನು ಕಾಪಾಡಿಕೊಳ್ಳಲು ನಾವು ಕೇಳುತ್ತಿದ್ದೇವೆ. ಶಾಂತಿಯುತ ಪ್ರತಿಭಟನೆಯ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು. ಎಲ್ಲರಿಗೂ ಒಪ್ಪಿಗೆಯಾಗುವ ಎಲ್ಲರಿಗೂ #HumanRights ಎಂಬ ನೀತಿಯಡಿ ಸಮನಾದ ಪರಿಹಾರಗಳನ್ನು ಕಂಡುಹಿಡಿಯುವುದು ಬಹಳ ಮುಖ್ಯ,” ಎಂದು ಅದು ಟ್ವೀಟ್ ಮಾಡಿದೆ.

ಪ್ರತಿಭಟನೆಗೆ ಸರ್ಕಾರ ನೀಡುತ್ತಿರುವ ಕಿರಿಕಿರಿ ವಿಷಯ ಈಗ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕು ವಿಷಯದ ಚರ್ಚೆಯಾಗಿ ಸಂಭವಿಸಿದೆ. ಪಾಪ್ ತಾರೆ ರಿಹಾನ್ನಾ ಮತ್ತು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಗಣ್ಯರು ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಸತ್ತಿನಲ್ಲಿ ಶುಕ್ರವಾರ, ಕಾನೂನುಗಳಲ್ಲಿ ಲೋಪವೇ ಇಲ್ಲ, ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಮದಿರುವುದೂ ಕೂಡ ವಿವಾದಾತ್ಮಕ ಎನಿಸಿದೆ.

ಕಳೆದ ತಿಂಗಳು ನಡೆದ ಹಿಂಸಾಚಾರದ ನಂತರ, ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರ ವಕ್ತಾರರು, ಶಾಂತಿಯುತ ಪ್ರತಿಭಟನೆ, ಸಭೆ ಸೇರುವ ಸ್ವಾತಂತ್ರ‍್ಯ ಮತ್ತು ಅಹಿಂಸೆಯನ್ನು ಗೌರವಿಸುವುದು ಮುಖ್ಯ ಎಂದು ಹೇಳಿದ್ದರು. ಡಿಸೆಂಬರ್‌ನಲ್ಲಿ ಅವರ ಕಚೇರಿ ಜನರಿಗೆ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ ಮತ್ತು ಅಧಿಕಾರಿಸ್ಥರು ಹಾಗೆ ಮಾಡಲು ಅವಕಾಶ ನೀಡಬೇಕು ಎಂದು ಹೇಳಿತ್ತು.


ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...