Homeಮುಖಪುಟ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ #FarmersProtest ಹ್ಯಾಷ್‌ಟ್ಯಾಗ್ ಬಳಸಿದ್ದು ಕುತೂಹಲಕರವಾಗಿದೆ ಮತ್ತು ಇದು ನಮ್ಮ ವಿದೇಶಾಂಗ ಇಲಾಖೆಗೆ ಇನ್ನಷ್ಟು ಚಡಪಡಿಕೆ ಉಂಟು ಮಾಡುವ ಸಾಧ್ಯತೆಯಿದೆ.

- Advertisement -
- Advertisement -

ಅಧಿಕಾರಸ್ಥರು ಪ್ರತಿಭಟನಾಕಾರರ ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು, ಗೌರವಿಸಬೇಕು ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ (ಒಎಚ್‌ಸಿಎಚ್‌ಆರ್) ಕಚೇರಿ ತಿಳಿಸಿದೆ.

ಭಾರತದಲ್ಲಿ 73ನೆ ದಿನಕ್ಕೆ ಕಾಲಿಟ್ಟಿರುವ ರೈತರ ಪ್ರತಿಭಟನೆಯು ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದು, ಅಪಾರ ಬೆಂಬಲವೂ ವ್ಯಕ್ತವಾಗುತ್ತಿದೆ. ಈ ನಡುವೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಅಥವಾ ಒಎಚ್‌ಸಿಎಚ್‌ಆರ್ ಕಚೇರಿ ಶುಕ್ರವಾರ ಸರ್ಕಾರ ಮತ್ತು ಪ್ರತಿಭಟನಾಕಾರರಿಗೆ ಗರಿಷ್ಠ ಸಂಯಮವನ್ನು ತೋರುವಂತೆ ಕರೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಕಚೇರಿ, #FarmersProtest ಹ್ಯಾಷ್‌ಟ್ಯಾಗ್ ಬಳಸಿದ್ದು ಕುತೂಹಲಕರವಾಗಿದೆ ಮತ್ತು ಇದು ನಮ್ಮ ವಿದೇಶಾಂಗ ಇಲಾಖೆಗೆ ಇನ್ನಷ್ಟು ಚಡಪಡಿಕೆ ಉಂಟು ಮಾಡುವ ಸಾಧ್ಯತೆಯಿದೆ.

“ಈಗ ನಡೆಯುತ್ತಿರುವ #FarmersProtest ನಲ್ಲಿ ಅಧಿಕಾರಸ್ಥರು ಮತ್ತು ಪ್ರತಿಭಟನಾಕಾರರು ಗರಿಷ್ಠ ಸಂಯಮವನ್ನು ಕಾಪಾಡಿಕೊಳ್ಳಲು ನಾವು ಕೇಳುತ್ತಿದ್ದೇವೆ. ಶಾಂತಿಯುತ ಪ್ರತಿಭಟನೆಯ ಮತ್ತು ಅಭಿವ್ಯಕ್ತಿಯ ಹಕ್ಕುಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ರಕ್ಷಿಸಬೇಕು. ಎಲ್ಲರಿಗೂ ಒಪ್ಪಿಗೆಯಾಗುವ ಎಲ್ಲರಿಗೂ #HumanRights ಎಂಬ ನೀತಿಯಡಿ ಸಮನಾದ ಪರಿಹಾರಗಳನ್ನು ಕಂಡುಹಿಡಿಯುವುದು ಬಹಳ ಮುಖ್ಯ,” ಎಂದು ಅದು ಟ್ವೀಟ್ ಮಾಡಿದೆ.

ಪ್ರತಿಭಟನೆಗೆ ಸರ್ಕಾರ ನೀಡುತ್ತಿರುವ ಕಿರಿಕಿರಿ ವಿಷಯ ಈಗ ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕು ವಿಷಯದ ಚರ್ಚೆಯಾಗಿ ಸಂಭವಿಸಿದೆ. ಪಾಪ್ ತಾರೆ ರಿಹಾನ್ನಾ ಮತ್ತು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಗಣ್ಯರು ರೈತರಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಸತ್ತಿನಲ್ಲಿ ಶುಕ್ರವಾರ, ಕಾನೂನುಗಳಲ್ಲಿ ಲೋಪವೇ ಇಲ್ಲ, ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಮದಿರುವುದೂ ಕೂಡ ವಿವಾದಾತ್ಮಕ ಎನಿಸಿದೆ.

ಕಳೆದ ತಿಂಗಳು ನಡೆದ ಹಿಂಸಾಚಾರದ ನಂತರ, ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಅವರ ವಕ್ತಾರರು, ಶಾಂತಿಯುತ ಪ್ರತಿಭಟನೆ, ಸಭೆ ಸೇರುವ ಸ್ವಾತಂತ್ರ‍್ಯ ಮತ್ತು ಅಹಿಂಸೆಯನ್ನು ಗೌರವಿಸುವುದು ಮುಖ್ಯ ಎಂದು ಹೇಳಿದ್ದರು. ಡಿಸೆಂಬರ್‌ನಲ್ಲಿ ಅವರ ಕಚೇರಿ ಜನರಿಗೆ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ ಮತ್ತು ಅಧಿಕಾರಿಸ್ಥರು ಹಾಗೆ ಮಾಡಲು ಅವಕಾಶ ನೀಡಬೇಕು ಎಂದು ಹೇಳಿತ್ತು.


ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...