Homeಮುಖಪುಟ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ': ಮಂದೀಪ್ ಪುನಿಯಾ

‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ ಎಂದು ಜಾಮೀನಿನ ಮೇಲೆ ಬಿಡುಗಡೆಗೊಂಡ ಪತ್ರಕರ್ತ ಮಂದೀಪ್ ಪುನಿಯಾ ತಿಳಿಸಿದ್ದಾರೆ.

- Advertisement -
- Advertisement -

ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸ್ಥಳದಲ್ಲಿ ಪೊಲೀಸರಿಂದ ಬಂಧಿತರಾಗಿ, ಮಂಗಳವಾರ ಜಾಮೀನಿನ ಮೇಲೆ ಬಿಡುಗಡೆಯಾದ ಪತ್ರಕರ್ತ ಮಂದೀಪ್ ಪುನಿಯಾ, ಬಂಧನದಲ್ಲಿದ್ದಾಗ ಅನುಭವಿಸಿದ ಕ್ರೂರ ಹಿಂಸೆಯಿಂದ ತಾನು ವಿಚಲಿತನಾಗಿಲ್ಲ ಮತ್ತು “ಅಧಿಕಾರಸ್ಥರಿಂದ ಕಿರುಕುಳಕ್ಕೊಳಗಾದ ಜನರ ಬಗ್ಗೆ ವರದಿ ಮಾಡಲು ಹಿಂತಿರುಗುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಗುರುವಾರ ಎನ್‌ಡಿಟಿವಿ ಪುನಿಯಾರ ಜೊತೆ ನಡೆಸಿದ ಸಂದರ್ಶನದ ವಿಡಿಯೋ ಯೂಟ್ಯೂಬ್‌ನಲ್ಲಿ 24 ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ (10 ಲಕ್ಷಕ್ಕೂ) ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಪುನಿಯಾ ಅವರ ಜನಪ್ರಿಯತೆಯನ್ನು ತೋರಿಸುತ್ತದೆ. ಜೈಲಿನ ಒಳಗೆ ಭೇಟಿಯಾದ ಅಮಾಯಕ ರೈತರ ಸುತ್ತ ಒಂದು ಸ್ಟೋರಿ ಬರೆಯಲು ಅವರು ತಮ್ಮ ದೇಹದ ಮೇಲೆ “ಟಿಪ್ಪಣಿಗಳನ್ನು” ಬರೆದುಕೊಂಡು ಹೊರ ಬಂದಿದ್ದಾರೆ.

ದಿ ಕಾರವಾನ್ ನಿಯತಕಾಲಿಕೆಗೆ ಮತ್ತು ಇತರ ಕೆಲವು ಮಾಧ್ಯಮ ಸಂಸ್ಥೆಗಳಿಗೆ ವರದಿ/ಸ್ಟೋರಿ ನೀಡುವ 43 ವರ್ಷದ ಸ್ವತಂತ್ರ ಪತ್ರಕರ್ತ ಪುನಿಯಾ, ತನ್ನನ್ನು ಶನಿವಾರ ಹೇಗೆ ಬಂಧಿಸಲಾಯಿತು, ತನ್ನ ಮೇಲೆ ಹೇಗೆ ಹಲ್ಲೆ ನಡೆಸಲಾಯಿತು ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಮಾಡಿದ ಸುಳ್ಳು ಆರೋಪ ಹೇಗೆ ಹೊರಿಸಲಾಗಿತು ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಹಸ್ತಕ್ಷೇಪವಲ್ಲ, ಮನುಷ್ಯರಿಗಾಗಿ ಮನುಷ್ಯ ನಿಲ್ಲುವ ಮಾನವೀಯತೆ: ಸೋನಾಕ್ಷಿ ಸಿನ್ಹಾ

“ನಾನು ಸಿಂಘುವಿನಲ್ಲಿನ ರೈತರ ಪ್ರತಿಭಟನಾ ಶಿಬಿರದಲ್ಲಿ ಬ್ಯಾರಿಕೇಡ್‌ಗಳ ಪಕ್ಕದಲ್ಲಿ ನಿಂತಿದ್ದೆ. ನನ್ನ ವರದಿಗಾಗಿ ನಾನು ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದೆ. ಕೆಲವು ವಲಸೆ ಕಾರ್ಮಿಕರು ಹಾದುಹೋಗಲು ಪ್ರಯತ್ನಿಸುತ್ತಿದ್ದರು. ಆದರೆ ಪೊಲೀಸರು ನಿರಂತರವಾಗಿ ಅವರನ್ನು ನಿಂದಿಸುತ್ತಿದ್ದರು. ಹಾಗಾಗಿ, ನಾನು ವಲಸೆ ಕಾರ್ಮಿಕರು ಎದುರಿಸುತ್ತಿದ್ದ ಸಮಸ್ಯೆಗಳನ್ನು ರೆಕಾರ್ಡ್ ಮಾಡುತ್ತಿದ್ದೆ….’

‘ಆ ಸಮಯದಲ್ಲಿ, ಪೊಲೀಸರು ಮೊದಲು ನನ್ನ ಪಕ್ಕದಲ್ಲಿ ನಿಂತಿದ್ದ ಮತ್ತೊಬ್ಬ ಪತ್ರಕರ್ತ ಧರ್ಮೇಂದ್ರ ಸಿಂಗ್ ಅವರನ್ನು ಎಳೆದರು. ನಾನು ಪ್ರತಿಭಟಿಸಿದಾಗ, ಅವರಲ್ಲಿ ಒಬ್ಬರು ‘ಇದು ಮಂದೀಪ್ ಪುನಿಯಾ. ಅವನನ್ನೂ ಕರೆದುಕೊಂಡು ಹೋಗು’ ಎಂದು ಕೂಗಿದರು. ಅವರು ನನ್ನನ್ನು ಕೋಲು/ಲಾಠಿಗಳಿಂದ ಹೊಡೆಯುತ್ತಿದ್ದರು ಮತ್ತು ನನ್ನನ್ನು ನಿಂದಿಸಿದರು….’
“ನನ್ನನ್ನು ಟೆಂಟ್ ಒಂದಕ್ಕೆ ಕರೆದೊಯ್ಯಲಾಯಿತು ಮತ್ತು ಅಲ್ಲಿಯೂ ಹೊಡೆದರು. ಅವರು ನನ್ನ ಸಣ್ಣ ಕನ್ನಡಿರಹಿತ ಕ್ಯಾಮೆರಾ ಮತ್ತು ನನ್ನ ಸ್ಯಾಮ್‌ಸಂಗ್ ಫೋನ್ ಅನ್ನು ಒಡೆದು ಹಾಕಿದರು. ಅವರು ನನ್ನ ಗುರುತಿನ ಚೀಟಿಗಳನ್ನು ಎಸೆದರು” ಎಂದು ಪುನಿಯಾ ಹೇಳಿದ್ದಾರೆ.

ನಂತರ ಅವರು ನನ್ನನ್ನು ಬಿಳಿ ಸ್ಕಾರ್ಪಿಯೋದಲ್ಲಿ ಕೂರಿಸಿ ಮೂರು ನಾಲ್ಕು ಪೊಲೀಸ್ ಠಾಣೆಗಳಿಗೆ ಕರೆದೊಯ್ದರು. ನಂತರ ಮುಂಜಾನೆ 2 ರ ಸುಮಾರಿಗೆ ನನ್ನನ್ನು ವೈದ್ಯಕೀಯ ತಪಾಸಣೆಗಾಗಿ ಕರೆದೊಯ್ಯಲಾಯಿತು. ಪೊಲೀಸರು, ‘ಈ ಪ್ರಕರಣ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡಿದೆ. ದಯವಿಟ್ಟು ಅದನ್ನು ನೋಡಿಕೊಳ್ಳಿ’ ಎಂದು ಹೇಳುವ ಮೂಲಕ ವೈದ್ಯರ ಮೇಲೆ ಪ್ರಭಾವ ಬೀರಲು ಸಹ ಪ್ರಯತ್ನಿಸಿದರು. ಆದರೆ ನನ್ನ ಮೇಲಾದ ಎಲ್ಲಾ ಗಾಯಗಳನ್ನು ಪರೀಕ್ಷಿಸುತ್ತೇನೆ ಎಂದು ವೈದ್ಯರು ಹೇಳಿದ್ದಕ್ಕೆ ನಾನು ಕೃತಜ್ಞನಾಗಿದ್ದೇನೆ, ನಂತರ ನನ್ನನ್ನು ಮುಂಜಾನೆ 3 ರ ಸುಮಾರಿಗೆ ಲಾಕಪ್‌ಗೆ ಹಾಕಿದರು….

ಪೊಲೀಸರ ಹೇಳಿಕೆಗಳನ್ನು ತೆಗೆದುಕೊಳ್ಳಲು ನಾನು ದಿನವಿಡೀ ಅವರೊಂದಿಗೆ ಮಾತನಾಡುತ್ತಿದ್ದ ಕಾರಣ ಪೊಲೀಸರಿಗೆ ನನ್ನ ಹೆಸರು ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಮತ್ತು ಒಂದು ದಿನದ ಹಿಂದೆ ನಾನು ರೈತರ ಮೇಲೆ ಕಲ್ಲು ಎಸೆದ ಬಗ್ಗೆ ವರದಿ ಮಾಡಿದ್ದೆ. ರೈತರ ಮೇಲೆ ಹಲ್ಲೆ ನಡೆಸಿದ ಜನರು ಬಿಜೆಪಿಗೆ ಹೇಗೆ ಸಂಪರ್ಕ ಹೊಂದಿದ್ದಾರೆಂದು ನಾನು ವರದಿ ಮಾಡಿದ್ದೆ ” ಎಂದು ಪುನಿಯಾ ಹೇಳಿದ್ದಾರೆ.

ಹೆಚ್ಚಾಗಿ ರೈತರೇ ಆಗಿದ್ದ ಇತರ ಕೈದಿಗಳಿಂದ ನನಗೆ ಜೈಲಿನಲ್ಲಿ ಆತ್ಮೀಯ ಸ್ವಾಗತ ದೊರೆಯಿತು. “ಎಲ್ಲರೂ ನನ್ನನ್ನು ಜೈಲಿನಲ್ಲಿ ಚೆನ್ನಾಗಿ ನಡೆಸಿಕೊಂಡರು. ಎಲ್ಲ ಖೈದಿಗಳು ನನ್ನನ್ನು ಮತ್ತು ನನ್ನ ಹೆಸರನ್ನು ಆಗಲೇ ತಿಳಿದಿದ್ದರೆಂದು ತೋರುತ್ತದೆ. ಪೊಲೀಸರು ನನ್ನನ್ನು ಹೊಡೆದಿದ್ದಾರೆಂದು ಅವರಿಗೆ ತಿಳಿದಿತ್ತು” ಎಂದು ಅವರು ಹೇಳಿದರು.

“ಒಳಗೆ ಹೋಗುವಾಗ, ವ್ಯವಸ್ಥೆಯ ಬಲಿಪಶು ಎಂದು ನಾನು ಭಾವಿಸಿದೆ. ಆದರೆ ಜೈಲಿನಲ್ಲಿರುವ ಈ ಜನರು ಹೇಗೆ ದೊಡ್ಡ ಬಲಿಪಶುಗಳಾಗಿದ್ದಾರೆಂದು ನಾನು ನೋಡಿದೆ. ಪೊಲೀಸರ ಹೊಡೆತಗಳಿಂದ ಆ ರೈತರ ಕಾಲುಗಳು ನೀಲಿ ಬಣ್ಣಕ್ಕೆ ತಿರುಗಿದ್ದವು, ಹೊರಗೆ ಕಾಣಿಸದ ಮೂಗೇಟುಗಳಿಂದ ಅವರು ಬಳಲುತ್ತಿದ್ದರು. ಅಧಿಕಾರದಲ್ಲಿರುವವರಿಂದ ಕಿರುಕ್ಕೊಳಗಾದ ಜನರ ಕುರಿತು ವರದಿ ಮಾಡುವುದು ಎಷ್ಟು ಮುಖ್ಯ ಎಂದು ನನಗೆ ಅರ್ಥವಾಯಿತು, ಏಕೆಂದರೆ ಅಧಿಕಾರದಲ್ಲಿರುವ ಜನರು ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಪುನಿಯಾ ಅಭಿಪ್ರಾಯಪಟ್ಟಿದ್ದಾರೆ.

“ಅದಕ್ಕಾಗಿಯೇ ನಾನು ಒಂದು ಪೆನ್ನಿನ ವ್ಯವಸ್ಥೆ ಮಾಡಿಕೊಂಡು, ನನ್ನ ದೇಹದ ಮೇಲೆ ಟಿಪ್ಪಣಿಗಳನ್ನು ಬರೆದುಕೊಳ್ಳಲು ಪ್ರಾರಂಭಿಸಿದೆ. ನಾನು ರೈತರ ಹೆಸರುಗಳು ಮತ್ತು ಅವರ ಕತೆಗಳನ್ನು ಕೇಳಿಸಿಕೊಂಡೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಗ್ರಾಮದವರಾದ ಗುರುದ್ವಾರದ 70 ವರ್ಷದ ಧಾರ್ಮಿಕ ವ್ಯಕ್ತಿಯನ್ನು (ಅರ್ಚಕ) ಸಹ ನಾನು ಭೇಟಿಯಾದೆ. ಪ್ರತಿಭಟನೆಯಲ್ಲಿ ಅವರು ರೈತರಿಗೆ ಆಹಾರವನ್ನು ನೀಡುತ್ತಿದ್ದ ಕಾರಣ ಅವರನ್ನು ಬಂಧಿಸಲಾಯಿತು” ಎಂದು ಅವರು ಹೇಳಿದರು.

“ನಾನು ಖಂಡಿತವಾಗಿಯೂ ಪ್ರತಿಭಟನಾ ಸ್ಥಳಕ್ಕೆ ಹಿಂತಿರುಗುತ್ತೇನೆ. ಏಕೆಂದರೆ ಅಧಿಕಾರದಲ್ಲಿರುವವರಿಂದ ಕಿರುಕುಳಕ್ಕೊಳಗಾಗುತ್ತಿರುವ ಈ ಜನರ ಬಗ್ಗೆ ವರದಿ ಮಾಡುವುದು ಬಹಳ ಮುಖ್ಯ. ನಾನು ಹಿಂತಿರುಗಿ ರೈತರ ಪ್ರತಿಭಟನೆಯ ಬಗ್ಗೆ ಅಗತ್ಯವಿರುವ ಸೂಕ್ಷ್ಮತೆಯೊಂದಿಗೆ ವರದಿ ಮಾಡುತ್ತೇನೆ” ಎಂದು ಪುನಿಯಾ ಹೇಳಿದ್ದಾರೆ.

ಕಳೆದ ವಾರಾಂತ್ಯದಲ್ಲಿ ಶನಿವಾರ ಮಂದೀಪ್ ಪುನಿಯಾ ಬಂಧನದ ಸಮಯದಲ್ಲೇ, ದೆಹಲಿಯ ಹೊರವಲಯದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ಎರಡು ತಿಂಗಳ ಕಾಲ ನಡೆದ ರೈತರ ಪ್ರತಿಭಟನೆಯ ಮೇಲೆ ಪೊಲೀಸ್ ದಬ್ಬಾಳಿಕೆಯೂ ನಡೆಯುತ್ತಿತ್ತು.

ಜನವರಿ 26ರ ಘಟನೆಗಳ ನಂತರ ಪೊಲೀಸ್ ಅಧಿಕಾರಿಗಳು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ರಸ್ತೆಗಳನ್ನು ಅಗೆದಿದ್ದಾರೆ, ಮೊಳೆಗಳನ್ನು ನೆಟ್ಟಿದ್ದಾರೆ ಮತ್ತು ರೈತರ ಆಂದೋಲನವನ್ನು ಉಸಿರುಗಟ್ಟಿಸಲು ಬಹು-ಪದರಗಳ ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಶಿಬಿರಗಳನ್ನು ತಲುಪದಂತೆ ಪತ್ರಕರ್ತರನ್ನು ತಡೆಯಲಾಗಿದೆ. ಈ ಕುರಿತು ಜಗತ್ತಿನಾದ್ಯಂತ ಖಂಡನೆಗಳು ವ್ಯಕ್ತವಾಗಿವೆ.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...