Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...