Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...