Homeಕರ್ನಾಟಕನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಅವರು ಕೂಡಲೇ ರಾಜೀನಾಮೆ ಕೊಡಬೇಕು - ಬಸವ ಜಯಮೃತ್ಯುಂಜಯ ಸ್ವಾಮೀಜಿ

- Advertisement -
- Advertisement -

“ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ, ಯಾವುದೇ ಸೂಚನೆಯನ್ನಾದರೂ ಕೇಂದ್ರವೇ ನೀಡಬೇಕು” ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಹೇಳಿದ್ದಾರೆ. ಪಂಚಮಸಾಲಿ ಮೀಸಲಾಗತಿಗೆ ಆಗ್ರಹಿಸಿದ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಆ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

“ನಮ್ಮದು ಪ್ರಾದೇಶಿಕ ಪಕ್ಷ ಅಲ್ಲ, ರಾಷ್ಟ್ರೀಯ ಪಕ್ಷ. ಯಾವುದೇ ಸಮಸ್ಯೆ ಇದ್ದರೂ ಕೇಂದ್ರದಲ್ಲಿ ಪ್ರಧಾನಿಯವರ ಮತ್ತು ಉಳಿದವರ ಸಲಹೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಬೇಕು. ಇದಾವುದಕ್ಕೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ. ಕರ್ನಾಟಕದಲ್ಲಿ 25 ಸಂಸದರಿದ್ದಾರೆ. ಯಾರು ಬೇಕೋ ಕರೆದುಕೊಂಡು ಹೋಗಿ ಕೇಂದ್ರದ ನಾಯಕರನ್ನ ಭೇಟಿ ಮಾಡಿ. ನಾನಂತು ಇಲ್ಲಿ ಕುಳಿತು ಯಾವುದೇ ಸಮಸ್ಯೆಗೆ ಪರಿಹಾರ ಕೊಡುವ ಸ್ಥಿತಿಯಲ್ಲಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತೇನೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಭಾಷಣೆಯನ್ನು ಈ ವಿಡಿಯೋದ 1 ಗಂಟೆ 31 ನಿಮಿಷದ ನಂತರ ಕೇಳಬಹದು.

ಹಲವು ದಿನಗಳಿಂದ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ವರ್ಗಕ್ಕೆ ಸೇರಿಸಬೇಕು ಎಂದು ಕೂಗು ಕೇಳಿಬರುತ್ತಿದೆ. ಇದರ ಪ್ರಮುಖ ನಾಯಕರಾಗಿದ್ದ ಬಸನಗೌಡ ಯತ್ನಾಳ್ ಪಟ್ಟಬಿಡದೇ ಅಧಿವೇಶನದಲ್ಲಿ ಮುಖ್ಯಮಂತ್ರಿಯವರು ಸ್ವಷ್ಟನೆ ಕೊಡಲೇಬೇಕು ಎಂದು ಒತ್ತಾಯಿಸಿದರು. ಆದರೆ ಯಡಿಯೂರಪ್ಪನವರು ಹೈಕಮಾಂಡ್ ಕಡೆ ಕೈತೋರಿಸಿ ಜಾರಿಕೊಂಡರು.

ಇದರ ಬಗ್ಗೆ ಆಕ್ರೋಶಗೊಂಡ ಯತ್ನಾಳ್, ಇದು ನಮ್ಮ ಸಮುದಾಯವನ್ನು ಮುಗಿಸಲು ಮಾಡಿರುವ ಕುತಂತ್ರ ಎಂದು ಆರೋಪಿಸಿದರು. ಜೊತೆಗೆ ಯಡಿಯೂರಪ್ಪನವರ ಖಡಕ್ ಹೇಳಿಕೆಗೆ ರಾಜ್ಯದಲ್ಲಿಯೂ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಪಂಚಮಸಾಲಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಪ್ರತಿಕ್ರಿಯಿಸಿ, “ನಮ್ಮ ಸಮಾಜದ ಕನಸನ್ನು ಯಡಿಯೂರಪ್ಪನವರು ನುಚ್ಚುನೂರು ಮಾಡಿದ್ದಾರೆ. ನಮ್ಮ ಸಮಾಜದ ಮತವನ್ನು ಪಡೆದು ಉನ್ನತ ಹುದ್ದೆಗೇರಿದ ಮುಖ್ಯಮಂತ್ರಿಯವರು ಕೂಡಲೇ ರಾಜೀನಾಮೆ ಕೊಡಬೇಕು” ಎಂದು ಆಗ್ರಹಿಸಿದ್ದರು. ಈ ವೀಡಿಯೋವನ್ನು ಇಲ್ಲಿ ನೋಡಬಹುದು.

ಇದೆಲ್ಲ ನಡೆದ ನಂತರ ರಾತ್ರೋರಾತ್ರಿ ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, “ಪಂಚಮಸಾಲಿ ಸಮುದಾಯದ ಸಮಗ್ರ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು” ಎಂದು ಆದೇಶ ನೀಡಿದ್ದಾರೆ.

ಇದನ್ನೂ ಓದಿ: ‘ಅಧಿಕಾರಸ್ಥರು ರೈತರ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸಬೇಕು’: ವಿಶ್ವಸಂಸ್ಥೆಯ ಮಾನವ ಹಕ್ಕು ವಿಭಾಗ

ಯಡಿಯೂರಪ್ಪನವರು ಸದನದಲ್ಲಿ ನನಗೆ ಅಧಿಕಾರ ಇಲ್ಲ ಎಂದು ಹೇಳಿರುವ ಮಾತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಹಲವು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂತೋಣಿ ಜಾನ್ ಟಂಬುವವರು ಟ್ವೀಟ್ ಮಾಡಿ, “ನಿಮ್ಮ ಬಳಿ ಅಧಿಕಾರ ಇಲ್ಲ ಅಂತಾದರೆ, ಅಧಿಕಾರ ಕೊಡಿ ಅಧಿಕಾರ ಕೊಡಿ ಅಂತ ಜನರ ಮುಂದೆ (ಚುನಾವಣೆಯ ಹೊತ್ತಲ್ಲಿ) ಕೇಳಿಕೊಂಡದ್ದು ಯಾಕೆ!? ಇನ್ನು ಮುಂದೆ ಮುಖ್ಯಮಂತ್ರಿಗಳ ಪ್ರತಿಮೆ ವಿಧಾನ ಮಂಡಲದಲ್ಲಿ ಸ್ಥಾಪಿಸಿ ಆಡಳಿತ ನಡೆಸಬಹುದಲ್ಲ!? ರಾಜ್ಯದ ಹಿತ ಕಾಪಾಡುವ ಅಧಿಕಾರ ಇಲ್ಲದ ನೀವು ರಾಜೀನಾಮೆ ನೀಡುವ ಮೂಲಕವಾದರೂ ಕರ್ನಾಟಕದ ಹಿತ ಕಾಪಾಡಿ” ಎಂದು ಒತ್ತಾಯಿಸಿದ್ದಾರೆ.

ಚೇತನ್ ಶೆಟ್ಟಿ ಸಕಲೇಶಪುರ ಟ್ವೀಟ್ ಮಾಡಿ, “ಇವರು ನಮ್ಮ ಕರ್ನಾಟಕದ ಮುಖ್ಯಮಂತ್ರಿ ಆಗೋಕೆ ನಾಲಾಯಕ್. ಅವರ ಪಕ್ಷದವರೇ ಕೇಳೋ ಒಂದು ಬೇಡಿಕೆ ಈಡೇರಿಸೋಕೆ ಆಗದೆ ಇರೋರು ನಮ್ಮಂಥ ಸಾಮಾನ್ಯ ಜನರ ಸಮಸ್ಯೆಗೆ ಪರಿಹಾರ ಕೊಡ್ತಾರ. ಬರಿ ಕೇಂದ್ರದವರು ಹೇಳ್ದಂಗೆ ಮಾಡೋಕೆ ಇವರೇ ಬೇಕಾ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ಹಲವರು, ಯಡಿಯೂರಪ್ಪನವರೇ ತಾನು ರಬ್ಬರ್ ಸ್ಟ್ಯಾಂಪ್ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ

(ನಾನುಗೌರಿ.ಕಾಂ ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ)


ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮುಖ್ಯಮಂತ್ರಿ ಸ್ಥಾನವನ್ನು ಒಬ್ಬ ಗುಮಾಸ್ತನ ಮಟ್ಟಕ್ಕೆ ಇಳಿಸಿದ ಮಹಾನ್ ರಾಜಕಾರಣಿ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...