Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...