Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...