Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...