Homeಚಳವಳಿಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ವಿಡಿಯೋ ಮತ್ತು ಚಿತ್ರಗಳು ಇಲ್ಲಿವೆ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ದೇಶದಾದ್ಯಂತ ಶನಿವಾರ ಚಕ್ಕಾ ಜಾಮ್(ರಸ್ತೆ ದಿಗ್ಭಂಧನ) ಪ್ರತಿಭಟನೆಗೆ ಕರೆ ನೀಡಿದ್ದರು. ಪ್ರತಿಭಟನಾ ನಿರತ ರೈತರ ಕರೆಗೆ ದೇಶದಾದ್ಯಂತ ಜನರು ಓಗೊಟ್ಟಿದ್ದು ಯಶಸ್ವಿ ರಸ್ತೆ ದಿಗ್ಬಂಧನ ನಡೆಯುತ್ತಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಖಂಡ್ ಹೊರತುಪಡಿಸಿ ಉಳಿದ ರಾಜ್ಯಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರೈತರು ಕರೆ ನೀಡಿದ್ದರು. ಇದಕ್ಕೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಜನಬೆಂಬಲ ವ್ಯಕ್ತವಾಗಿದೆ. ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ಥಾನ್‌‌ ರಾಜ್ಯಗಳಲ್ಲಿ ಭಾರಿ ಜನಬೆಂಬಲ ವ್ಯಕ್ತವಾಗಿದೆ.

ಪಂಜಾಬ್‌ನ ಮೆಹಲ್ ಕಲನ್ ಬರ್ನಾಲ ಟೋಲ್ ಪ್ಲಾಜಾ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಲೈವ್‌ ವಿಡಿಯೋ ನೋಡಿ.

ಹರಿಯಾಣದ ಕರ್ನಾಲ್‌ನಲ್ಲಿ ರಸ್ತೆ ದಿಗ್ಭಂಧನ ನಡೆಸಿ ರೈತರಿಗೆ ಬೆಂಬಲ ನೀಡಲಾಯಿತು.

ನಾಸಿಕ್-ಔರಂಗಾಬಾದ್ ಹೆದ್ದಾರಿಯನ್ನು ಸ್ವಾಭಿಮಾನಿ ಶೇತ್ಕಾರಿ ಸಂಘಟನೆಯು, ನಾಸಿಕ್‌ನ ನಿಫಾದ್‌ನಲ್ಲಿ ತೆಡೆದು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ದೆಹಲಿ-ಚಂಡೀಘಡ್ ಹೆದ್ದಾರಿಯನ್ನು ರೈತರು ಕರ್ನಾಲ್‌‌ನಲ್ಲಿ ತಡೆಹಿಡಿದಿದ್ದಾರೆ.

ಹರಿಯಾಣದಲ್ಲಿರುವ ಭಿವಾನಿ-ಜಿಂದ್ ಹೆದ್ದಾರಿಯನ್ನು ರೈತರು ತಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 44 ಅನ್ನು ಲೂಧಿಯಾನದಲ್ಲಿ ತಡೆಯಲಾಗಿದೆ. ಅಲ್ಲದೆ ಅಮೃತಸರ ಪ್ರವೇಶ ಮಾಡುವ ಹೆದ್ದಾರಿ ಬಳಿ ಭಾರಿ ಸಂಖ್ಯೆಯ ರೈತರು ನರೆದಿದ್ದಾರೆ. ಶಹಜಹಾನ್‌ಪುರ್ ಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಯಲಾಗಿದೆ.

ಹರಿಯಾಣದ ಫತೇಹಾಬಾದ್ ಜಿಲ್ಲೆಯ ’ಲಾಲ್ ಬತ್ತಿ’ ಹೆದ್ದಾರಿಯನ್ನು ಬಂದ್ ಮಾಡಲಾಯಿತು.

ಹರಿಯಾಣದ ಮಹಾಮ್-ಗೊಹಾನ ರಸ್ತೆಯನ್ನು ತಡೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ-1 ಅನ್ನು ರೈತರು ಕರ್ನಾಲ್‌‌‌ನಲ್ಲಿ ತಡೆದರು.

ಉಕ್ಲಾನಾ ಮಂಡಿಯ ಸುರೇವಾಲಾ ಚೌಕ್‌ನಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಜಮಾಯಿಸಿದ್ದಾರೆ. ರಸ್ತೆ ತಡೆಯನ್ನು ಮಾಡಲಿದ್ದಾರೆ.

ಪಾಣಿಪತ್‌-ರೋಹ್ಟಕ್ ರಸ್ತೆಯನ್ನು ರೈತರು ತಡೆದಿದ್ದಾರೆ. ರೋಹ್ಟಕ್-ಹಿಸಾರ್ ರಸ್ತೆಯಲ್ಲಿರುವ ಮದೀನಾ ಟೋಲ್‌ನಲ್ಲಿ ರೈತರು ಸಭೆ ನಡೆಸಿ ಅಲ್ಲಿ ರಸ್ತೆ ತಡೆ ಮಾಡಿದ್ದಾರೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಗ್ರಾಮವಾದ ನಿಂಡಾನಾದಲ್ಲಿನ ಹೆದ್ದಾರಿಯನ್ನು ರೈತರು ದಿಗ್ಬಂಧನ ಮಾಡಿದ್ದಾರೆ.

ಸಂಗೂರ್‌ನ ಕಲಾಝಾರ್ ಟೋಲ್‌ ಪ್ಲಾಝಾದಲ್ಲಿ ರೈತರು ರಸ್ತೆ ತಡೆ ಮಾಡಿ ದಿಗ್ಬಂಧನ ಮಾಡಿದ್ದಾರೆ.

ಹಿಸಾರ್-ಚಂಡೀಗಡ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಡ್ಡೋಪಟ್ಟಿ ಟೋಲ್ ಪ್ಲಾಜಾದಲ್ಲಿ ರೈತರು ರಸ್ತೆ ದಿಗ್ಭಂಧನ ಮಾಡಿದ್ದಾರೆ. ಅಲ್ಲಿನ ಚೌಧರಿವಾಸ್, ಮಯ್ಯದ್ ಮತ್ತು ಲ್ಯಾಂಡ್ಹಾಲಿ ಟೋಲ್ ಪ್ಲಾಜಾಗಳಲ್ಲಿಯೂ ಸಹ ಚಕ್ಕಾ-ಜಾಮ್ ಮಾಡಲಾಗಿದೆ.

ಪಂಜಾಬ್‌ನ ಪಾಟಿಯಾಲದ ಹಳ್ಳಿಯಾದ ಬರ್ನ್‌ನಲ್ಲಿ ರೈತರು ರಸ್ತೆ ತಡೆ ನಡೆಸಿದ್ದಾರೆ.

ರಾಜಸ್ಥಾನ್‌‌ನ ನೋಹರ್‌‌ನಲ್ಲಿ ರೈತರು ರಸ್ತೆ ತಡೆ ನಡೆಸಿದರು.

AIKMS ಸಂಘಟನೆಯು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯಲ್ಲಿ ರಸ್ತೆತಡೆಯನ್ನು ನಡೆಸಿ ರೈತರಿಗೆ ಬೆಂಬಲ ಸೂಚಿಸಿತು.

ಹೈದರಾಬಾದ್‌‌ನಲ್ಲಿ ರೈತರನ್ನು ಬೆಂಬಲಿಸಿ ರಸ್ತೆ ತಡೆಯನ್ನು ಮಾಡಲಾಯಿತು.

ಇದನ್ನೂ ಓದಿ: ರೈತ ಹೋರಾಟ: ಏನಿದು ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ? ಹೇಗಿರುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...