Homeಮುಖಪುಟಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ಕಾರ್ಮಿಕ ಮುಖಂಡರು ಸಹ ತಮ್ಮ ಪ್ರಜಾತಾಂತ್ರಿಕ ಹೋರಾಟ ನಡೆಸಲು ಬಿಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ಇಂದು ದೇಶಾದ್ಯಾಂತ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರೆ ನೀಡಿದ್ದಾರೆ. ಈ ರೈತ ಹೋರಾಟವನ್ನು ಬೆಂಬಲಿಸಿ ಹತ್ತಾರು ಕಾರ್ಮಿಕ ಸಂಘಟನೆಗಳು ಹೇಳಿಕೆ ನೀಡಿದ್ದವು. ಅಲ್ಲದೇ ಚಕ್ಕಾ ಜಾಮ್‌ನಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನಿರ್ಣಯಿಸಿದ್ದವು. ಇದನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಶುಕ್ರವಾರ ರಾತ್ರಿಯಿಂದಲೇ ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸಿದ್ದಾರೆ.

ದೆಹಲಿಯ ಐಟಿಒನ ಶಹೀದ್ ಪಾರ್ಕ್‌ನಲ್ಲಿ ಇಂದು ಬೃಹತ್ ಹೋರಾಟ ನಡೆಸಲು ಕಾರ್ಮಿಕ ಸಂಘಟನೆಗಳು ನಿರ್ಧಿರಿಸದ್ದವು. ಈ ಕುರಿತು ದೆಹಲಿ ಪೊಲೀಸರ್ ನೋಟಿಸ್ ಸಹ ನೀಡಲಾಗಿತ್ತು. ಆದರೆ ಕಳೆದ ರಾತ್ರಿಯಿಂದ ಟ್ರೇಡ್ ಯೂನಿಯನ್ ಮುಖಂಡರನ್ನು ಪೊಲೀಸರು ಸಿಕ್ಕ ಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಉತ್ತರ ದೆಹಲಿ ಸಿಐಟಿಯು ಕಾರ್ಯದರ್ಶಿಯಾಗಿರುವ ವಿಪಿನ್ ಅವರನ್ನು ಬದ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಚೌರಾಸಿಯಾ ಅವರನ್ನು ಬುರಾರಿ ಪೊಲೀಸರು ವಶಕ್ಕೆ ಪಡೆದ ನಂತರ ಅವರನ್ನು ಗೃಹಬಂಧನದಲ್ಲಿರಿಸಿದ್ದಾರೆ. ಇಂದು ಬೆಳಿಗ್ಗೆ 5 ಗಂಟೆಗೆ ದೆಹಲಿಯ ಐಎಫ್‌ಟಿಯು ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಅನಿಮೆಶ್ ಅವರನ್ನು ಸಿ.ಆರ್ ಪಾರ್ಕ್‌ನಲ್ಲಿರುವ ಅವರ ಮನೆಯಿಂದ ಬಂಧಿಸಲಾಗಿದೆ. ಐಎಫ್‌ಟಿಯುಗೆ ಸಂಬಂಧಿಸಿದ ಪ್ರಗತಿಶೀಲ್ ಮಹಿಳಾ ಸಂಘಟನ್‌ನ ಪೂನಮ್ ಕೌಶಿಕ್ ರವರನ್ನು ಗೃಹಬಂಧನದಲ್ಲಿಡಲಾಗಿದೆ. ಪೊಲೀಸರು ಅವರ ಮನೆಯ ಹೊರಗೆ ಕಾವಲು ಕಾಯುತ್ತಿದ್ದಾರೆ. ಎಐಸಿಸಿಟಿಯುನ ಸೂರ್ಯ ಪ್ರಕಾಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಜ್ದೂರ್ ಸಹಯೋಗ್ ಕೇಂದ್ರದ ಸಂಚಾಲಕರಾದ ನಯನ್‌ರವರು ಆರೋಪಿಸಿದ್ದಾರೆ.

ಇಂದು ನಾವು ಐಟಿಓದಲ್ಲಿ ಚಕ್ಕಾ ಜಾಮ್ ನಡೆಸುತ್ತಿರಲಿಲ್ಲ. ಬದಲಿಗೆ ಸಾರ್ವಜನಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. ಇದು ಶಹೀದ್ ಪಾರ್ಕ್ ಒಳಗೆ ನಡೆಯುವ ಶಾಂತಿಯುತ ಪ್ರತಿಭಟನೆಯಾಗಿತ್ತು. ಅಲ್ಲಿ ಸಾಮಾನ್ಯವಾಗಿ ಅನೇಕ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಆ ಕಾರ್ಯಕ್ರಮವನ್ನು ತಡೆಯುವುದಕ್ಕಾಗಿ ಈ ಬಂಧನಗಳನ್ನು ಪೊಲೀಸರು ಮಾಡಿದ್ದಾರೆ. ಅಲ್ಲದೆ ಅದಕ್ಕೆ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಎಲ್ಲಾ ಕಾರ್ಮಿಕ ಸಂಘಗಳು, ವಿದ್ಯಾರ್ಥಿ ಸಂಘಟನೆಗಳು, ಮಹಿಳಾ ಸಂಘಟನೆಗಳು, ಪ್ರಜಾಪ್ರಭುತ್ವ ಹಕ್ಕುಗಳ ಸಂಘಟನೆಗಳ ಜಂಟಿ ಪ್ರತಿಭಟನೆಯಾಗಿತ್ತು. ಇದೇ ರೀತಿಯಾಗಿ ಈಗಾಗಲೇ ದೆಹಲಿ ಫಾರ್ ಫಾರ್ಮರ್ಸ್ ಹೆಸರಿನಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳು ನಡೆದಿವೆ. ಅವುಗಳೆಲ್ಲದರ ಸಮಾರೋಪ ಕಾರ್ಯಕ್ರಮವಾಗಿ ಇಂದು ನಾವು ಶಹೀದ್ ಪಾರ್ಕ್‌ನ ಒಳಗೆ ಕಾರ್ಯಕ್ರಮ ನಡೆಸಲು ಯೋಜಿಸಿದ್ದೆವು. ಆದರೆ ಪೊಲೀಸರು ಸಹ ಅಡ್ಡಿಪಡಿಸುತ್ತಿದ್ದಾರೆ ಮತ್ತು ನಮಗೆ ಅವಕಾಶ ನೀಡುತ್ತಿಲ್ಲ ಎಂದು ಅವರು ದೂರಿದ್ದಾರೆ.

ದೆಹಲಿಯಲ್ಲಿ ಇಂದು ಸುಮಾರು 50 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ರಸ್ತೆಗಳಿಗೆ ಮುಳ್ಳಿನ ಸರಳುಗಳನ್ನು ನೆಡುವುದು, ಕಾಂಕ್ರೀಟ್ ಗೋಡೆಗಳನ್ನು ಕಟ್ಟುವುದು, ಮುಳ್ಳು ತಂತಿ ಬೇಲಿ ಮತ್ತು ದೊಡ್ಡ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಸರ್ಕಾರದ ಈ ದಮನ ಕ್ರಮಕ್ಕೆ ಪ್ರಪಂಚಾದ್ಯಂತ ಟೀಕೆ ವ್ಯಕ್ತವಾಗಿತ್ತು. ಈಗ ಪೊಲೀಸರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಕಾರ್ಮಿಕ ಮುಖಂಡರು ಸಹ ತಮ್ಮ ಪ್ರಜಾತಾಂತ್ರಿಕ ಹೋರಾಟ ನಡೆಸಲು ಬಿಡುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...