Homeಕರ್ನಾಟಕರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ 73 ದಿನಗಳಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟಿಸುತ್ತಿರುವ ರೈತರು ನೀಡಿದ ಚಕ್ಕಾ ಜಾಮ್ (ಸಂಚಾರ ಸ್ಥಗಿತ ಹೋರಾಟ) ಗೆ ಕರ್ನಾಟಕದ ರೈತರು ಅಭೂತಪೂರ್ವವಾಗಿ ಬೆಂಬಲಿಸಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಾದ್ಯಂತ ಆರಂಭಗೊಂಡ ಹೆದ್ದಾರಿ ಬಂದ್ ಹೋರಾಟ ಬಹುತೇಕ ಯಶಸ್ವಿಯಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಇಂದು ಚಕ್ಕಾ ಜಾಮ್ ಹೋರಾಟ ನಡೆದಿದೆ. ದೆಹಲಿಯ ರೈತರ ಮೇಲಿನ ಹಲ್ಲೆಯನ್ನು ಒಕ್ಕೊರಲಿನಿಂದ ಖಂಡಿಸಲಾಗಿದೆ.

ಸಿಂಧನೂರಿನ ಶ್ರೀಪುರಂ ಜಂಕ್ಷನ್ ನಲ್ಲಿ ಹೆದ್ದಾರಿ ಬಂದ್ ಯಶಸ್ವಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ಹೊಸದಿಲ್ಲಿಯಲ್ಲಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ದಿಟ್ಟ ಹೋರಾಟವನ್ನು ಬೆಂಬಲಿಸಿ ದಿನಾಂಕ: 6.02.2021 ಶನಿವಾರ ಶ್ರೀಪುರಂಜಂಕ್ಷನಲ್ಲಿ ರೈತ ವಿರೋಧಿ ಕೃಷಿ ಕಾನೂನು ರದ್ದಿತಿ ಹೋರಾಟ ಸಮಿತಿ ಸಿಂಧನೂರು ವತಿಯಿಂದ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ರಸ್ತೆ ತಡೆ ನಡಸಿದ ಪ್ರತಿಭಟನೆಕಾರರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹೋರಟಗಾರರಾದ ಡಿ ಎಚ್ ಕಂಬಳಿ ಮಾತನಾಡಿ, “ಕಾರ್ಪೊರೇಟ್ ಕಂಪನಿಗಳಿಗೆ ದೇಶ ಒತ್ತೆ ಇಡುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಈ ರೀತಿ ಕರಾಳ ಕಾನೂನುಗಳನ್ನು ತರುವುದರ ಮುಖಾಂತರ ಕೋಟ್ಯಂತರ ರೈತರ ಹೊಟ್ಟಗೆ ಚೂರಿ ಹಾಕಲು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಸ ನೀಡುವುದಿಲ್ಲ” ಎಂದರು.

ರಸ್ತೆ ತಡೆಯ ಕಾರಣಕ್ಕಾಗಿ ರಸ್ತೆಯ ಎರಡು ಬದಿಯಲ್ಲಿ ಕಿಲೋಮಿಟರ್‌ಗಟ್ಟಲೆ ವಾಹನ ನಿಲುಗಡೆಯಾಗಿದ್ದವು ಹೋರಾಟದಲ್ಲಿ ಒಕ್ಕೂಟದ ಸಂಚಾಲಕ ರಾದ ಚೆಂದ್ರಶೇಖರ್ ಗೊರೆಬಾಳ, ಸಮುದಾಯದ ಎಸ್ ದೇವೇಂದ್ರಗೌಡ, ರೈತ ಸಂಘಟನೆಯ ಶರಣಪ್ಪ ಮಳ್ಳಿ, ಅಮೀನ್ ಪಾಷ, ದಿದ್ದಿಗಿ ಶಿವರಾಜ್, ಬಸವಕೇಂದ್ರದ ವೀರಭದ್ರ ಗೌಡ ಅಮರಾಪುರ, ಜಿಲಾ ನಿಪಾಷ ಜಾಹಗೀರದಾರ್, ಮನುಜಮತ ಬಳಗದ ಖಾದರ ಸುಬಾನಿ, ಬಸವರಾಜ ಬಾದರ್ಲಿ, ಸಮದ್ ಚೌದ್ರಿ, ಮಂಜುನಾಥ ಗಾಂಧಿನಗರ, ಬಿ.ಎನ್ ಯರದಿಹಾಳ, ಬಸರಾಜ ಎಕ್ಕಿ, ರಮೇಶ ಪಾಟೀಲ್ ದೇಶಪ್ರೇಮಿ ಯುವಾಂದೋಲನದ ಚಾಂದ್ ಪಾಷ್, ಯಂಕಪ್ಪ ಕೆಂಗಲ್ ಸೇರಿದಂತೆ ಇತರರಿದ್ದರು.

ಕೋಲಾರ ವರದಿ

ದೆಹಲಿಯ ರೈತರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಗಡಿಗಳಲ್ಲಿ ಇಂಟರ್ನೆಟ್ ಕಡಿತ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಬಂಗಾರಪೇಟೆ – ಕೋಲಾರ ರಸ್ತೆ ತಡೆ ಮಾಡಲಾಯಿತು. ಈ ವೇಳೆ ಹತ್ತಾರು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದಲ್ಲಿ ಪ್ರತಿಭಟನೆ

ರಾಜ್ಯದ್ಯಾಂತ ನಡೆದ ಹೆದ್ದಾರಿ ತಡೆಯ ಚಿತ್ರಗಳು ಕೆಳಗಿನಂತಿವೆ.

ದಾವಣಗೆರೆಯಲ್ಲಿ ಬೃಹತ್ ಹೆದ್ದಾರಿ ತಡೆ ಹೋರಾಟ
ವಿಜಯಪುರದಲ್ಲಿ ರಸ್ತೆ ತಡೆ
ಬಳ್ಳಾರಿಯಲ್ಲಿ ಹೋರಾಟ
ಭದ್ರಾವತಿಯಲ್ಲಿ ಹೋರಾಟ
ಯಲಹಂಕದಲ್ಲಿ ಚಕ್ಕಾ ಜಾಮ್
ಚಿಕ್ಕಬಳ್ಳಾಪುರದಲ್ಲಿ ಹೋರಾಟ
ರಾಯಚೂರಿನಲ್ಲಿ ರಸ್ತೆ ತಡೆ
ಹರಪನಹಳ್ಳಿಯಲ್ಲಿ ರಸ್ತೆ ತಡೆ
ರಾಯಚೂರಿನಲ್ಲಿ ಹೆದ್ದಾರಿ ತಡೆ
ನಾಗಮಂಗಲದಲ್ಲಿ ಹೋರಾಟ
ಬೆಳಗಾವಿಯಲ್ಲಿ ಹೋರಾಟ
ನಂಜನಗೂಡಿನಲ್ಲಿ ಪ್ರತಿಭಟನೆ
ಮೈಸೂರಿನಲ್ಲಿ ರಸ್ತೆ ತಡೆ, ಬಂಧನ
ಧಾರವಾಡದಲ್ಲಿ ನಡೆಯುತ್ತಿರುವ ಪ್ರತಿಭಟನೆ
ಕಲಬುರಗಿಯಲ್ಲಿ ರಾಸ್ತ ರೋಕ್
ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ
ಹಾಸನದಲ್ಲಿ ರಸ್ತೆ ತಡೆ
ಕುರುಗೋಡಿನಲ್ಲಿ ರೈತರ ಪ್ರತಿಭಟನೆ

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...