Homeಮುಖಪುಟಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

ಸಂಚುಕೋರ ದೀಪ್ ಸಿಧುವಿನ ವಿಡಿಯೋ ಅಪ್‌ಲೋಡ್ ಮಾಡುತ್ತಿರುವುದು ಅವನ ಫಾರಿನ್ ಗೆಳತಿ!

- Advertisement -
- Advertisement -

ಪಂಜಾಬಿ ನಟ, ಕೆಂಪುಕೋಟೆ ಹಿಂಸಾಚಾರದ ಸಂಚುಕೋರ ಎಂದೇ ಕುಖ್ಯಾತನಾಗಿ ತಲೆ ಮರೆಸಿಕೊಂಡಿರುವ ದೀಪ್ ಸಿಧು, ಆ ಘಟನೆಯ ನಂತರ ಏನೇನೋ ಹೇಳಿಕೊಂಡು ವಿಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದಾನೆ. ಈಗಲೂ ಆತನನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ!

“ಜನವರಿ 26 ರ ಘಟನೆ ನಂತರ ರೈತರ ಪ್ರತಿಭಟನೆಯ ಬಗ್ಗೆ ಸ್ಪಷ್ಟೀಕರಣಗಳನ್ನು ನೀಡುವ ಸಿಧು ವಿಡಿಯೊಗಳನ್ನು ವಿದೇಶದಲ್ಲಿರುವ ಅವನ ಗೆಳತಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಪ್ರಕರಣದಲ್ಲಿ ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನು ದೆಹಲಿ ಪೊಲೀಸರು ಘೋಷಿಸಿದ್ದಾರೆ.

“ದೀಪ್ ಸಿಧುನ ಫೇಸ್ಬುಕ್ ಖಾತೆಯನ್ನು ಅವರ ಮಹಿಳಾ ಸ್ನೇಹಿತರೊಬ್ಬರು ನಿರ್ವಹಿಸುತ್ತಿದ್ದಾರೆ. ಅವನು ಆಕೆಗೆ ವೀಡಿಯೊಗಳನ್ನು ಕಳುಹಿಸುತ್ತಿದ್ದಾನೆ ಮತ್ತು ಆ ಗೆಳತಿ ಅವನ್ನು ವಿದೇಶದಿಂದ ಅಪ್ಲೋಡ್ ಮಾಡುತ್ತಾರೆ” ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಚಕ್ಕಾ ಜಾಮ್‌ಗೆ ಬೆಂಬಲ: ಹತ್ತಾರು ಕಾರ್ಮಿಕ ಮುಖಂಡರನ್ನು ಬಂಧಿಸುತ್ತಿರುವ ದೆಹಲಿ ಪೊಲೀಸರು

ದೀಪ್ ಸಿಧು ಬಿಜೆಪಿಯ ನಾಯಕರೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದ ಎಂಬುದಕ್ಕೆ ಹಲವಾರು ಫೋಟೊಗಳು ಸಾಕ್ಷಿಗಳಾಗಿವೆ. ಯಾವ ಬಿಜೆಪಿ ನಾಯಕನೂ ಈ ಫೋಟೊಗಳ ಬಗ್ಗೆ ಮಾತನಾಡಿಲ್ಲ. ದೀಪ್ ಸಿಧು ಮೋದಿ ಮತ್ತು ಶಾ ಅವರೊಂದಿಗೆ ಅತ್ಯಂತ ಸಲುಗೆಯಿಂದ ಇರುವ ಫೋಟೊಗಳು ಜ.26 ರ ಮಧ್ಯಾಹ್ನದಿಂದಲೇ ವೈರಲ್ ಆಗಿವೆ.

ದೆಹಲಿಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ಪ್ರಮುಖ ಸಂಚುಕೋರ ದೀಪ್ ಸಿಧು ಎಂದು ಸ್ವತಂತ್ರ ಮಾಧ್ಯಮಗಳು ಆರೋಪಿಸಿದ ನಂತರ, ದೆಹಲಿ ಪೊಲೀಸರ ಅಪರಾಧ ವಿಭಾಗದ ಹಲವಾರು ತಂಡಗಳು ಸಿಧುಗೆ ನೋಟಿಸ್ ಕಳಿಸಿ, ಅವನನ್ನು ಹುಡುಕುತ್ತಿವೆ.

“ನನ್ನನ್ನು ಗದ್ದಾರ್ (ದೇಶದ್ರೋಹಿ) ಎಂದು ಹಣೆಪಟ್ಟಿ ಕಟ್ಟಲಾಗಿದ್ದರೆ, ಎಲ್ಲಾ ರೈತ ಮುಖಂಡರು ಗದ್ದಾರ್‌ಗಳು” ಎಂದು ದೀಪ್ ತನ್ನ ವೀಡಿಯೊವೊಂದರಲ್ಲಿ ಆರೋಪಿಸಿದ್ದ.

ಇದನ್ನೂ ಓದಿ: ಸ್ವಾರ್ಥ, ಹೇಡಿತನದಲ್ಲಿ ಚಿತ್ರನಟರನ್ನು ಮೀರಿಸಿದ ಕ್ರಿಕೆಟಿಗರು: ನಟ ಚೇತನ್ ಆಕ್ರೋಶ

ಏತನ್ಮಧ್ಯೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜಗ್ಬೀರ್ ಸಿಂಗ್, ಬೂಟಾ ಸಿಂಗ್, ಸುಖದೇವ್ ಸಿಂಗ್ ಮತ್ತು ಇಕ್ಬಾಲ್ ಸಿಂಗ್ ಎಂಬ ನಾಲ್ವರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ ಪೊಲೀಸರು 50 ಸಾವಿರ ರೂ. ಬಹುಮಾನವನ್ನು ಘೋಷಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಟ್ರಾಕ್ಟರ್ ರ್‍ಯಾಲಿ ಸಂದರ್ಭದಲ್ಲಿ ದೀಪ್ ಸಿಧು ನೇತೃತ್ವದ ಗುಂಪು ಕೆಲವು ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಪ್ರವೇಶ ಮಾಡುವಂತೆ ಮಾಡಿತ್ತು. ಅಲ್ಲಿ ಸಿಧು ಗ್ಯಾಂಗ್ ಸಿಖ್ ಧ್ವಜ ಹಾರಿಸಿದ್ದರು. ಆ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿ ಹಿಂಸಾಚಾರ ನಡೆದಿತ್ತು.

ಈ ಕೃತ್ಯ ತಮ್ಮ ಆಂದೋಲನವನ್ನು ಹಳಿ ತಪ್ಪಿಸುವ ಪಿತೂರಿ ಎಂದು ರೈತ ನಾಯಕರು ಆರೋಪಿಸಿದ್ದರು ಮತ್ತು ಸಿಧು “ಪಿತೂರಿ”ಯನ್ನು ಮುನ್ನಡೆಸಿದ ಸಂಚುಕೋರ ಎಂದೂ ಆರೋಪಿಸಿದ್ದರು.


ಇದನ್ನೂ ಓದಿ: ಗ್ರಾ.ಪಂ: ಮಹಿಳಾ ಸದಸ್ಯರಿಗೆ ಬೆದರಿಕೆಯೊಡ್ಡಿ ಅಧ್ಯಕ್ಷ ಸ್ಥಾನ ಕಸಿದುಕೊಂಡ ಸದಸ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...