Homeಚಳವಳಿಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ಸಿಂಘು ಗಡಿ: ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್‌ ಬಂಧನ ಯಾಕಾಗಿದೆ?

ಜನವರಿ 12, 2021 ರಂದು ಹರಿಯಾಣ ಪೊಲೀಸರು ಸಿಂಘು ಗಡಿಯ ನೊದೀಪ್ ಇದ್ದ ಟೆಂಟ್‌ಗೆ ಬಂದು ಅವರನ್ನು ಬಂಧಿಸಿದ್ದರು.

- Advertisement -
- Advertisement -

ಜನವರಿ 12 ರಂದು ದೆಹಲಿಯ ರೈತ ಹೋರಾಟದಲ್ಲಿದ್ದ 24 ವರ್ಷದ ಪಂಜಾಬ್ ಮೂಲದ ದಲಿತ ಕಾರ್ಮಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ಪೊಲೀಸರು ಬಂಧಿಸಿದ್ದರು. ಅವರಿಗೆ ಫೆಬ್ರವರಿ 2 ರಂದು ಹರಿಯಾಣದ ಸೋನೆಪತ್‌ನ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಪ್ರಸ್ತುತ ಹರಿಯಾಣದ ಕರ್ನಾಲ್ ಜೈಲಿನಲ್ಲಿರುವ ಅವರನ್ನು ಹಿಂಸಿಸಲಾಗುತ್ತಿದೆ ಮತ್ತು ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಅವರ ವಿರುದ್ದ ಗಲಭೆ, ಕಾನೂನುಬಾಹಿರ ಸಭೆ, ಸರ್ಕಾರಿ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸದಂತೆ ತೊಂದರೆ ನೀಡುವುದು, ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಸುಲಿಗೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆ ಹಲವು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸೋನಿಪತ್‌ನ ಕುಂಡ್ಲಿ ಪೊಲೀಸ್ ಠಾಣೆಯ ಎಸ್‌ಎಚ್ಒ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯ ಆಧಾರದ ಮೇಲೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಧೀಶ ಯಶ್ವೀರ್ ಸಿಂಗ್ ರಾಥೋರ್ ವಿಚಾರಣೆ ನಡೆಸಿದ್ದರು. ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ರವಿ ಕುಮಾರ್ ಹೇಳಿಕೆಯಂತೆ, “ಜನವರಿ 12 ರಂದು ತನಗೆ ದೂರವಾಣಿ ಕರೆ ಬಂದಿದ್ದು, ಕೈಗಾರಿಕಾ ಪ್ರದೇಶವಾದ ಕುಂಡ್ಲಿಯಲ್ಲಿನ ಕಾರ್ಖಾನೆ ಸಂಖ್ಯೆ 349 ರಲ್ಲಿ ಲಾಠಿಗಳು ಮತ್ತು ದೊಣ್ಣೆಗಳಂತಹ ಆಯುಧದಾರಿ ಜನರು ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆ ಕರೆಯಲ್ಲಿ ದೂರಲಾಗಿತ್ತು. ಅಲ್ಲಿಗೆ ತಲುಪಿದಾಗ, 2-3 ಹುಡುಗಿಯರು ಸೇರಿದಂತೆ 50-60 ವ್ಯಕ್ತಿಗಳು ಲಾಠಿಗಳು ಮತ್ತು ದೊಣ್ಣೆಗಳಿಂದ ಶಸ್ತ್ರಸಜ್ಜಿತರಾಗಿರುವ ಗುಂಪೊಂದು ಇತ್ತು. ಈ ಸಶಸ್ತ್ರ ಗುಂಪು ಪೊಲೀಸ್ ಅಧಿಕಾರಿಗಳ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದೆ ಮತ್ತು ಅವರಲ್ಲಿ ಒಬ್ಬರು ಪೊಲೀಸರ ಬಂದೂಕನ್ನು ಮತ್ತು ಕೇಸ್ ಫೈಲ್‌ಗಳನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಗುಂಪನ್ನು ನೊದೀಪ್ ಕೌರ್ ಮುನ್ನಡೆಸುತ್ತಿದ್ದರು” ಎಂದು ಹೇಳಿದ್ದಾರೆ.

ಆದರೆ ನೊದೀಪ್ ಅವರ ವಕೀಲರು, ಯಾವುದೇ ಪ್ರಚೋದನೆ ಇಲ್ಲದೆ ಕಾರ್ಖಾನೆಯ ಬಳಿ ನಿಂತಿರುವಾಗ ಪೊಲೀಸರು, ನೊದೀಪ್ ಸೇರಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಲಾಗಿತ್ತು ಎಂದು ವಾದಿಸಿದ್ದಾರೆ. ನೊದೀಪ್ ಜನಸಮೂಹವನ್ನು ಮುನ್ನಡೆಸುತ್ತಿದ್ದು ಮತ್ತು ಕುಂಡ್ಲಿಯಲ್ಲಿ ರೈತ ಆಂದೋಲನವನ್ನು ನಡೆಸಲು ಕಾರ್ಖಾನೆಯ ಮಾಲಿಕರಿಂದ ಹಣವನ್ನು ಸುಲಿಗೆ ಮಾಡುತ್ತಿದ್ದರು ಎಂದು ಆರೋಪಿಸಿ ಅವರಿಗೆ ಜಾಮೀನು ನೀಡಲು ನ್ಯಾಯಾಲಯವು ನಿರಾಕರಿಸಿದೆ.

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನೊದೀಪ್ ವಿರುದ್ಧದ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು,  ಹಣ ಮತ್ತು ಬೆದರಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ಬಾಕಿ ಇದೆ ಎಂದು ನ್ಯಾಯಾಲಯ ಹೇಳಿದೆ. ತನಿಖೆ ಇನ್ನೂ ಆರಂಭಿಕ ಹಂತದಲ್ಲಿದೆ ಮತ್ತು ಉಳಿದ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ ಮತ್ತು ಅಪರಾಧದ ದೃಷ್ಟಿಯಿಂದ, “ಅರ್ಜಿದಾರಳು ಜಾಮೀನಿಗೆ ಅರ್ಹಳಲ್ಲ ಮತ್ತು ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯವು ಹೇಳಿದೆ.

ನ್ಯಾಯಾಲಯದ ಆದೇಶವನ್ನು ಇಲ್ಲಿ ಓದಬಹುದು.ಕೃಪೆ: ಸಬ್‌‌ರಂಗ್‌

ಘಟನೆಯ ಹಿನ್ನಲೆಯೇನು?

24 ವರ್ಷದ ನೊದೀಪ್ ಕೌರ್ ಸುಮಾರು ಒಂದು ತಿಂಗಳಿನಿಂದ ಕರ್ನಾಲ್ ಜೈಲಿನಲ್ಲಿದ್ದು, ಅದೇ ಜೈಲಿನಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಅವರ ಕುಟುಂಬ ಆರೋಪಿಸಿದೆ. ಪಂಜಾಬ್‌ ಮೂಲದ ಕಾರ್ಮಿಕ ಸಂಘದ ಕಾರ್ಯಕರ್ತೆಯಾಗಿರುವ ದಲಿತೆ ನೊದೀಪ್ ಕೌರ್ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ನಲ್ಲಿ ಸಕ್ರಿಯವಾಗಿದ್ದಾರೆ. ಅವರು ಡಿಸೆಂಬರ್ 2020 ರಿಂದ ಸಿಂಘು ಗಡಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸುತ್ತಿದ್ದರು.

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘುವಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಕಾರ್ಮಿಕರ ಮೇಲಿನ ದೌರ್ಜನ್ಯವು ಕಾರ್ಮಿಕರು ರೈತ ಆಂದೋಲನವನ್ನು ಬೆಂಬಲಿಸಲು ಪ್ರಾರಂಭಿಸಿದಾಗಿನಿಂದ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಕುಂಡ್ಲಿ ಕೈಗಾರಿಕಾ ಸಂಘ ಮತ್ತು ಹರಿಯಾಣ ಪೊಲೀಸರ ಸಶಸ್ತ್ರ ಕಾವಲುಗಾರರು ಅವರನ್ನು ಗುರಿಯಾಗಿಸಿ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ 50,000 ಪೊಲೀಸರ ನಿಯೋಜನೆ – ಸಂಯಮ ಕಾಪಾಡಿ ಎಂದ ವಿಶ್ವಸಂಸ್ಥೆ

ಜನವರಿ 12, 2021 ರಂದು ಹರಿಯಾಣ ಪೊಲೀಸರು ಸಿಂಘು ಗಡಿಯ ನೊದೀಪ್ ಇದ್ದ ಟೆಂಟ್‌ಗೆ ಬಂದು ಅವರನ್ನು ಬಂಧಿಸಿದ್ದರು. ಹರಿಯಾಣ ಪೊಲೀಸರು ನೊದೀಪ್‌ಳನ್ನು ಗುರಿಯಾಗಿಸಿಕೊಂಡು ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನೊದೀಪ್ ಸಹೋದರಿ ರಾಜ್‌ವೀರ್ ಕೌರ್ ಆರೋಪಿಸಿದ್ದಾರೆ.

“ನಾನು ಆಕೆಯನ್ನು ಬಂಧನವಾದ ಮಾರನೇ‌ ದಿನವೇ ಕರ್ನಲ್ ಜೈಲಿನಲ್ಲಿ ಭೇಟಿಯಾದೆ. ಆಕೆ ತನ್ನ ಮೇಲೆ ನಡೆದ ದೌರ್ಜನ್ಯದ ಕುರಿತು ಹೇಳಿದಳು. ಪುರುಷ ಪೊಲೀಸರು ಭೀಕರವಾಗಿ ಥಳಿಸಿದ್ದರು. ಆಕೆಯ ಗುಪ್ತಾಂಗಗಳ ಮೇಲೂ ಗಾಯದ ಗುರುತುಗಳಿವೆ. ಅವಳಿಗೆ ನಾವು ನೀಡಿರುವ ಔಷಧಿಗಳನ್ನು ಸಹ ಪೊಲೀಸರು ನೀಡಲಿಲ್ಲ. ಠಾಣೆಯ ಎಸ್‌ಎಚ್‌ಒ ಅವಳನ್ನು ಗ್ಯಾಂಗ್ ಲೀಡರ್ ಆಗಿ ತೋರಿಸಲು ಬಯಸಿದ್ದಾರೆ” ಎಂದು ರಾಜ್‌ವೀರ್‌ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಬ್‌ರಂಗ್ ವರದಿ ಮಾಡಿದೆ.

“ಆಕೆಗೆ ಕೇವಲ 23 ವರ್ಷ, 12 ನೇ ತರಗತಿ ಪೂರ್ಣಗೊಂಡಿದೆ ಮತ್ತು ದೆಹಲಿ ವಿಶ್ವವಿದ್ಯಾಲಯಕ್ಕೆ ಪದವಿಪೂರ್ವ ವಿದ್ಯಾರ್ಥಿಯಾಗಿ ಅರ್ಜಿ ಸಲ್ಲಿಸಲು ಯೋಜಿಸುತ್ತಿದ್ದಳು. ಅವಳನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದರ ವಿರುದ್ದ ಹೋರಾಡುತ್ತೇವೆ” ಎಂದು ರಾಜ್‌ವೀರ್ ಕೌರ್ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹ

ನೋದೀಪ್ ಕೌರ್ ಬಿಡುಗಡೆಗೆ ಆಗ್ರಹಿಸಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ (ಸಿಜೆಪಿ) ಆನ್‌ಲೈನ್ ಅರ್ಜಿಯನ್ನು ಪ್ರಾರಂಭಿಸಿದೆ. ಸಿಜೆಪಿಯು ತನ್ನ ಅರ್ಜಿಯಲ್ಲಿ ನೊದೀಪ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸುವುದಲ್ಲದೆ, ಅವರ ವಿರುದ್ಧದ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಅರ್ಜಿಗೆ ಸಹಿ ಹಾಕುವವರು, ಕರ್ನಾಲ್ ಜೈಲು ಅಧಿಕಾರಿಗಳಿಗೆ ಪತ್ರ ಬರೆದು ನೊದೀಪ್ ವಿರುದ್ಧದ ದೌರ್ಜನ್ಯವನ್ನು ಪ್ರತಿಭಟಿಸುವಂತೆ ಸಿಜೆಪಿ ಒತ್ತಾಯಿಸಿದೆ. ಚೇಂಜ್.ಆರ್ಗ್‌ನಲ್ಲಿರುವ ಅರ್ಜಿಯನ್ನು ಇಲ್ಲಿ ಸಹಿ ಮಾಡಬಹುದು.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...