Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...