Homeಮುಖಪುಟಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಹಕ್ಕಿಗಾಗಿ ಹೋರಾಡಬಾರದೆ? ಮಸಿ ಬಳಿಯುವುದು ಪ್ರತಿಭಟನೆಯೇ?: ಉಡುಪಿ ಸ್ಬಾಮೀಜಿಯ ಸಮಸ್ಯೆಗಳು!

ಈ ಸ್ವಾಮೀಜಿಗೆ ರೈತರ ಹೋರಾಟ ಕಂಡರೆ ಮೈಯುರಿ. ಪಂಚಮಸಾಲಿಗಳು, ಕುರುಬರು, ವಾಲ್ಮೀಕಿಗಳು & ದಲಿತರು ಮೀಸಲಾತಿಗಾಗಿ ಬೀದಿಗಿಳಿದರೆ ಅಸಹನೆ... ಆದರೆ ಸಾಹಿತಿಯೊಬ್ಬರಿಗೆ ಮಸಿ ಬಳಿದಿದ್ದು ಮಾತ್ರ ಪ್ರತಿಭಟನೆಯಂತೆ!

- Advertisement -
- Advertisement -

ಇದು ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿಯವರ ಸಮಸ್ಯೆಯೋ ಅಥವಾ ಅವರ ಹಿಂದಿನ ಪೀಠಾಧಿಪತಿಗಳಿಂದ ಹರಿದು ಬಂದ ಪ್ರಭಾವವೋ ಗೊತ್ತಿಲ್ಲ. ನಿನ್ನೆ ರಾಯಚೂರಿನಲ್ಲಿ ಮಾತಾಡಿರುವ ಈ ಸ್ವಾಮೀಜಿ, (ಪ್ರಜಾವಾಣಿ ವರದಿಯಂತೆ) ಮೂರು ಗಂಭೀರ ವಿಷಯ ಎತ್ತಿದ್ದಾರೆ. ರಾಷ್ಟ್ರದ್ವಜ ಸುಟ್ಟವರನ್ನು ರೈತರೆನ್ನಬೇಕೆ ಎಂದು ಪ್ರಶ್ನಿಸಿದ್ದಾರೆ.

‘ರೈತರು ಜಮೀನುಗಳಲ್ಲಿ ದುಡಿಯುತ್ತಿದ್ದಾರೆ, ಪ್ರತಿಭಟನೆ ಮಾಡುತ್ತಿಲ್ಲ. ಖಾಲಿಸ್ಥಾನ್ ಮತ್ತು ವಿದೇಶದ ಪರವಾಗಿ ಘೋಷಣೆ ಹಾಕುವವರು ರೈತರಲ್ಲ’ ಎಂಬುದು ಸ್ವಾಮೀಜಿಯ ನವ-ಆವಿಷ್ಕಾರ.

ಅಯ್ಯೋ ಶಿವನೇ, ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ್ದು ವಿವಾದ. ಆದರೆ ಪ್ರತಿಭಟನಾ ನಿರತ ರೈತರು ರಾಷ್ಟ್ರಧ್ವಜಕ್ಕೆ ಯಾವಾಗ ಬೆಂಕಿ ಇಟ್ಟರು ಮಾರಾಯ?

ಫೇಕ್‌ಸುದ್ದಿಯೊಂದು ಸ್ವಾಮೀಜಿಯ ಮೇಲೆ ಪ್ರಭಾವ ಬೀರಿರಬಹುದು.

ಜನವರಿ 27ರಂದು ಪೋಸ್ಟ್ ಆದ ವಿಡಿಯೋ ಒಂದರಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ, ಬೆಂಕಿಯನ್ನೂ ಹಚ್ಚುವ ಯತ್ನ ಮಾಡಲಾಗಿದೆ. ಅದನ್ನು ರೈತರು ಮಾಡಿದ್ದಾರೆ ಎಂದು ಫೇಕ್ ಸುದ್ದಿ ಹರಡಲಾಗಿತ್ತು. ಹಲವಾರು ಫ್ಯಾಕ್ಟ್‌ಚೆಕ್ ಸಂಸ್ಥೆಗಳು ತೋರಿಸಿದಂತೆ, ಅದು ಎಂದೋ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆ. ನಾಲ್ಕೈದು ಖಾಲಿಸ್ಥಾನಿ ಬೆಂಬಲಿಗ ಸಿಖ್ ಯುವಕರು ಮಾಡಿದ ಮಾನಗೇಡಿ ಕೆಲಸ.

ಬಹುಷಃ ಸ್ವಾಮೀಜಿ ಇದನ್ನೇ ಇಟ್ಟುಕೊಂಡು ರೈತರು ಧ್ವಜ ಸುಟ್ಟರು ಎಂಬ ತೀರ್ಮಾನಕ್ಕೆ ಬಂದಿರಬಹುದು ಅಥವಾ ಇದು ಸುಳ್ಳು ಎಂದು ಗೊತ್ತಿದ್ದರೂ ಅವರು ಬೇಕೆಂತಲೇ, ಅಧಿಕಾರಸ್ಥರ ಒಲವು ಗಳಿಸಲು ಈ ಹೇಳಿಕೆ ನೀಡಿರಬಹುದು.

ಅವರ ಇನ್ನೊಂದು ಸಮಸ್ಯೆ ಮೀಸಲಾತಿ ಕುರಿತದ್ದು. ಜಾತಿ ಆಧಾರಿತ ಮಿಸಲಾತಿ ಬೇಡ, ಆರ್ಥಿಕತೆ ಆಧಾರಿತ ಮಿಸಲಾತಿ ಇರಲಿ ಎಂಬ ಸಂಘದ ಪುರಾತನ ಸಿದ್ದಾಂತವನ್ನು ಈ ಸ್ವಾಮೀಜಿ ಪ್ರತಿಪಾದಿಸಿದ್ದಾರೆ. ಈಗ ಪಂಚಮಸಾಲಿ, ಕುರುಬ, ವಾಲ್ಮೀಕಿ ಸಮುದಾಯದವರು ಅವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಿಸಲಾತಿಗಾಗಿ ಪಾದಯಾತ್ರ ನಡೆಸಿ ಸರ್ಕಾರದ ಮೇಲೆ ಒತ್ತಡ ತಂದಿರುವ ವಿದ್ಯಮಾನ ಸ್ವಾಮೀಜಿಗೆ ಕಿರಿಕಿರಿ ಮಾಡಿದೆಯೇನೋ?

ಅವರ ಮೂರನೇ ಅನಿಸಿಕೆ ಭಯಂಕರವಾಗಿದೆ. ‘ಚಿಂತಕ ಪ್ರೊ ಕೆಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು ಘಟನೆಯಲ್ಲ, ಪ್ರತಿಭಟನೆ’ ಎನ್ನುವ ಸ್ವಾಮೀಜಿ, ಘಟನೆಯಲ್ಲಿ ಇಬ್ಬರೂ ತಪ್ಪು ಮಾಡಿದ್ದಾರೆ ಎಂದು ತಿಪ್ಪೆ ಸಾರಿಸಿದ್ದಾರೆ ಕೂಡ.

ಮಸಿ ಬಳಿಯುವುದು, ಸೆಗಣಿ ಎರಚುವುದನ್ನು ಈ ಸ್ವಾಮೀಜಿ ಪ್ರತಿಭಟನೆ ಎಂದುಕೊಳ್ಳುತ್ತಾರೆ, ಕೊರೆಯುವ ಚಳಿಯಲ್ಲಿ 73 ದಿನಗಳಿಂದ ರೈತರು ಪ್ರತಿಭಟಿಸಿದರೆ, ಅದು ಇವರ ಪಾಲಿಗೆ ಪ್ರತಿಭಟನೆಯೇ ಅಲ್ಲ. ಅದು ಖಾಲಿಸ್ತಾನಿಗಳ ಹೋರಾಟ.

ಸರ್ಕಾರದ ಪರ ಟ್ವೀಟ್ ಮಾಡಿದ ಆ ಸೆಲೆಬ್ರಿಟಿಗಳಿಗೇನೋ ಲೌಕಿಕ ಜಗತ್ತಿನ ಬಯಕೆಗಳಿವೆ. ಆದರೆ ಈ ಸ್ವಾಮೀಜಿಗೆ ಏನು ಸಮಸ್ಯೆಯಿದೆ ಎಂಬ ಪ್ರಶ್ನೆ ಎದುರಾಗಿದೆ.

  • ಮಲ್ಲನಗೌಡರ್ ಪಿ.ಕೆ (ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ; ನಮ್ಮದು ರಾಷ್ಟ್ರೀಯ ಪಕ್ಷ, ಹಾಗಾಗಿ ಯಾವುದೇ ತೀರ್ಮಾನ ಕೈಗೊಳ್ಳುವ ಅಧಿಕಾರ ನನಗಿಲ್ಲ: ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...