Homeಮುಖಪುಟ2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

2019-20ರಲ್ಲಿ ತಿರಸ್ಕರಿಸಿದ ಬೆಳೆ ವಿಮೆ ಹಕ್ಕುಗಳ ಸಂಖ್ಯೆ 9.28 ಲಕ್ಷ!

ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ

- Advertisement -
- Advertisement -

ಕೇಂದ್ರದ ಪ್ರಮುಖ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‌ಬಿವೈ) ಅಡಿಯಲ್ಲಿ ವಿಮಾ ಕಂಪೆನಿಗಳು ತಿರಸ್ಕರಿಸಿದ ರೈತರ ಬೆಳೆ ವಿಮೆ ಹಕ್ಕುಗಳ ಸಂಖ್ಯೆ ಕೇವಲ ಎರಡು ವರ್ಷಗಳಲ್ಲಿ 10 ಪಟ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ನೀಡಿದ ಶುಕ್ರವಾರ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತ ತಿಳಿಸಿದ್ದಾರೆ.

2017-18ರಲ್ಲಿ, ತಿರಸ್ಕರಿಸಿದ ಹಕ್ಕುಗಳ ಸಂಖ್ಯೆ 92,869 ಆಗಿತ್ತು. ಮುಂದಿನ ವರ್ಷ, 2018-19ರಲ್ಲಿ ಈ ಸಂಖ್ಯೆ 2.04 ಲಕ್ಷಕ್ಕೆ ದ್ವಿಗುಣಗೊಂಡಿದೆ. 2019-20ರ ವೇಳೆಗೆ ಅದು 9.28 ಲಕ್ಷ ಆಗಿದ್ದು, ಇದು 900% ಹೆಚ್ಚಾಗಿದೆ.

ವಿಮೆ ಕಂಪೆನಿಗಳು ಬೆಳೆ ವಿಮೆ ಹಕ್ಕುಗಳನ್ನು ರೈತರಿಗೆ ನಿರಾಕರಿಸಿವೆಯೇ?

ಆ ನಿರ್ದಿಷ್ಟ ವರ್ಷಗಳಲ್ಲಿ ವಿವಿಧ ರಾಜ್ಯಗಳಿಂದ ವರದಿಯಾದ ಪ್ರಕರಣಗಳ ವಿವರಗಳು ಮತ್ತು ಈ ನಿಟ್ಟಿನಲ್ಲಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಮನಸ್ ರಂಜನ್ ಭುನಿಯಾ ಪ್ರಶ್ನೆ ಎತ್ತಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ, ಕೃಷಿ ಸಚಿವ ತೋಮರ್ ಅವರು, ಪಿಎಂಎಫ್‌ಬಿವೈ ಅಡಿಯಲ್ಲಿ, ಬರ ಅಥವಾ ಪ್ರವಾಹದಂತಹ ವ್ಯಾಪಕವಾದ ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಬೆಳೆ ನಷ್ಟದ ಹಕ್ಕುಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಗಮನಸೆಳೆದರು, ಏಕೆಂದರೆ ಇಡೀ ಘಟಕದ ಇಳುವರಿಯಲ್ಲಿನ ಕೊರತೆಯ ಆಧಾರದ ಮೇಲೆ ಹಕ್ಕುಗಳನ್ನು ಲೆಕ್ಕ ಹಾಕಲಾಗುತ್ತದೆ. ಋತುವಿನ (ಹಂಗಾಮಿನ) ಕೊನೆಯಲ್ಲಿ, ಮಾಡಲಾಗದ ಬಿತ್ತನೆ ಮತ್ತು ಮಧ್ಯಕಾಲೀನ ಪ್ರತಿಕೂಲ ಹಕ್ಕುಗಳನ್ನು ಪ್ರದೇಶದ ವಿಧಾನದ ಆಧಾರದ ಮೇಲೆ ಇತ್ಯರ್ಥಪಡಿಸಲಾಗಿದೆ. ಇದನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ಒದಗಿಸಿದ ಇಳುವರಿ ಡೇಟಾ ಮತ್ತು ಬೆಳೆ ಹಾನಿ ವರದಿಗಳನ್ನು ಪರಿಗಣಿಸಿ ನಿರ್ಣಯಿಸಲಾಗಿದೆ ಎಂದು ತೋಮರ್ ತಿಳಿಸಿದ್ದಾರೆ.

ಹೇಗಾದರೂ, ಆಲಿಕಲ್ಲು ಮಳೆ, ಭೂಕುಸಿತಗಳು, ಪ್ರವಾಹ, ಮೋಡದ ಸಿಡಿತ ಅಥವಾ ನೈಸರ್ಗಿಕ ಬೆಂಕಿಯ ಸ್ಥಳೀಯ ಅಪಾಯಗಳಿಂದಾಗಿ ಸಣ್ಣ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಅಪಾಯಗಳು ಬಂದಾಗ ವಿಭಿನ್ನ ಪ್ರಕ್ರಿಯೆ ಅನುಸರಿಸಲಾಗಿದೆ. ಅಂತಹ ನಷ್ಟಗಳನ್ನು ವೈಯಕ್ತಿಕ ವಿಮೆ ಮಾಡಿದ ಜಮೀನು ಪರಿಗಣಿಸಿ, ಬೆಳೆ ನಷ್ಟದ ಮೌಲ್ಯಮಾಪನದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ. ರೈತರು ಅಂತಹ ಬೆಳೆ ನಷ್ಟವನ್ನು ಸಂಬಂಧಪಟ್ಟ ವಿಮಾ ಕಂಪನಿ, ರಾಜ್ಯ ಸರ್ಕಾರ ಅಥವಾ ಹಣಕಾಸು ಸಂಸ್ಥೆಗಳಿಗೆ ತಿಳಿಸಿದ್ದಾರೆ ಮತ್ತು ಅವರ ಹಕ್ಕುಗಳನ್ನು (ಕ್ಲೈಮ್) ರಾಜ್ಯ ಸರ್ಕಾರ ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳ ಜಂಟಿ ಸಮಿತಿಯು ನಿರ್ಣಯಿಸಿದೆ ಎಂದು ವಿವರಿಸಿದ್ದಾರೆ.

“ಆದ್ದರಿಂದ, ಈ ಕೆಲವು ಹಕ್ಕುಗಳನ್ನು ರೈತರು ತಡವಾಗಿ ತಿಳಿಸುವುದು, ವಿಮೆ ಮಾಡದ ರೈತರಿಗೆ ಅಥವಾ ವಿಮೆ ಮಾಡದ ಬೆಳೆಗಳಿಗೆ ಮತ್ತು ಅಪಾಯ ಸಂಭವಿಸದಿರುವುದು ಮುಂತಾದ ವಿವಿಧ ಕಾರಣಗಳಿಗಾಗಿ ವಿಮಾ ಕಂಪನಿಗಳು ಹಕ್ಕುಗಳನ್ನು ತಿರಸ್ಕರಿಸಬಹುದು” ಎಂದು ತೋಮರ್ ಹೇಳಿದರು. ನಂತರ ಅವರು ಹಕ್ಕುಗಳ ನಿರಾಕರಣೆಯ ಡೇಟಾವನ್ನು ನೀಡಿದರು, ಇದು ಎರಡು ವರ್ಷಗಳ ಅವಧಿಯಲ್ಲಿ 900% ಹೆಚ್ಚಳವನ್ನು ತೋರಿಸಿದೆ.


ಇದನ್ನೂ ಓದಿ: ರಾಜ್ಯಾದ್ಯಂತ ಯಶಸ್ವಿಯಾಗಿ ಜರುಗಿದ ಸಂಚಾರ ಸ್ಥಗಿತ ಹೋರಾಟ: ಹೆದ್ದಾರಿ ಬಂದ್ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...