Homeಕರ್ನಾಟಕವಕೀಲರ ಸಂಘದ ‘ಜಾತ್ಯಾತೀತತೆ’ – ಅಂಬೇಡ್ಕರ್ ಜಯಂತಿಗೆ ನಿರಾಕರಣೆ

ವಕೀಲರ ಸಂಘದ ‘ಜಾತ್ಯಾತೀತತೆ’ – ಅಂಬೇಡ್ಕರ್ ಜಯಂತಿಗೆ ನಿರಾಕರಣೆ

- Advertisement -
- Advertisement -

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‍ರವರು ಪ್ರತಿನಿಧಿಸುವ ರಾಮನಗರ ಜಿಲ್ಲಾ ವಕೀಲರ ಸಂಘದಲ್ಲಿ ‘ಅಂಬೇಡ್ಕರ್ ಜಯಂತಿ’ ಆಚರಿಸುವ ಹಾಗಿಲ್ಲ. ವಿಚಿತ್ರ ಎನಿಸಿದರೂ ಇದು ನಿಜ.

ರಾಮನಗರದ ಜಿಲ್ಲಾ ವಕೀಲರ ಸಂಘದ ಕೆಲ ಜನಪರ ವಕೀಲರು ಅಂಬೇಡ್ಕರ್ ಜಯಂತಿ ಹಾಗೂ ಪರಿನಿರ್ವಾಣ ದಿನವನ್ನು ಆಚರಣೆ ಮಾಡಲು ಕಳೆದ ಒಂದು ವರ್ಷದಿಂದ ಪ್ರಯತ್ನ ಪಡುತ್ತಿದ್ದರೂ ಸಂಘದ ಚುನಾಯಿತ ಪ್ರತಿನಿಧಿಗಳ ಕಾರ್ಯಕಾರಿ ಸಮಿತಿಯು ಅನುಮತಿ ನಿರಾಕರಿಸುತ್ತಿದ್ದರು. ಈ ವರ್ಷದ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ನಡೆಸಲು ಅನುಮತಿ ಕೋರಿ ಏಪ್ರಿಲ್ 11ರಂದು ಸಮಾನ ಮನಸ್ಕ ಸದಸ್ಯರು ಮನವಿ ಸಲ್ಲಿಸಿದ್ದು ಏಪ್ರಿಲ್ 12ರಂದು ಅನುಮತಿಯನ್ನು ಲಿಖಿತವಾಗಿ ನಿರಾಕರಿಸಲಾಗಿದೆ! ಅನುಮತಿಯನ್ನು ವಜಾಗೊಳಿಸಿರುವ ಪತ್ರದಲ್ಲಿ “ರಾಮನಗರ ವಕೀಲ ಸಂಘವು 1927ರಲ್ಲಿ ಸ್ಥಾಪನೆಗೊಂಡಿದ್ದು, ಅಂದಿನಿಂದ ಇಂದಿನವರೆಗು ಎಲ್ಲಾ ಜನಾಂಗದ ಸದಸ್ಯರು ಸೋದರ ಭಾವನೆಯಿಂದ ಯಾವುದೇ ಜಾತಿಬೇಧವಿಲ್ಲದೇ ವಕೀಲ ವೃತ್ತಿಯನ್ನು ನಡೆಸುತ್ತಾ ಬಂದಿರುತ್ತಾರೆ. ಸದರಿ ಸಂಘದಲ್ಲಿ ಹಿಂದಿನ ದಿನದಿಂದಲೂ ಈ ರೀತಿಯ ಯಾವ ಆಚರಣೆಯನ್ನು ನಮ್ಮ ಸಂಘದಲ್ಲಿ ಆಚರಿಸುತ್ತಾ ಬಂದಿರುವುದಿಲ್ಲ… ಸದರಿ ತಮ್ಮ ಮನವಿಯನ್ನು ವಜಾಗೊಳಿಸಿರುವುದಾಗಿ ತಿಳಿಯಪಡಿಸಲಾಗಿದೆ. ಸಂಘದ ಆವರಣದಲ್ಲಿ ಈ ರೀತಿ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಾರದಾಗಿ ಈ ಮೂಲಕ ತಿಳಿಯಪಡಿಸಲಾಗಿದೆ.” ಎಂದು ಬರೆಯಲಾಗಿದೆ.

ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುವುದು ಎಂದರೆ ಜಾತಿಬೇಧ ಮಾಡಿದಂತಾಗುತ್ತದೆ ಎನ್ನುವುದು ಕಾರ್ಯಕಾರಿ ಸಮಿತಿಯ ಅಭಿಪ್ರಾಯವಾಗಿದೆ! ಅಂಬೇಡ್ಕರ್ ಜಯಂತಿ ಅಧಿಕೃತವಾಗಿ ದೇಶದಾದ್ಯಂತ ರಜೆಯನ್ನು ನೀಡಿ ಸರ್ಕಾರದ ಭಾಗವಾಗಿ ನಡೆಯುವ ಕಾರ್ಯಕ್ರಮವಾಗಿದೆ. ಹೀಗಿದ್ದು ರಾಮನಗರದ ವಕೀಲರ ಸಂಘದ ಕಾರ್ಯಕಾರಿ ಸಮಿತಿ ಆಚರಣೆಯ ಅನುಮತಿಯನ್ನು ವಜಾ ಮಾಡಿದೆ.

ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಸದಸ್ಯರ ಪ್ರತಿನಿಧಿ ಚಾಂದ್‍ಪಾಷ ಅವರನ್ನು ಮಾತನಾಡಿಸಿದಾಗ “ನಾವು ಕಳೆದ ವರ್ಷದಿಂದ ನಿರಂತರ ಪ್ರಯತ್ನ ಮಾಡುತ್ತಿದ್ದೇವೆ, ಅಂಬೇಡ್ಕರ್ ಜಯಂತಿಯಾಗಲಿ ಪರಿನಿರ್ವಾಣ ದಿನಕ್ಕಾಗಲಿ ನಮಗೆ ಅನುಮತಿ ನೀಡುತ್ತಲೇ ಇಲ್ಲ. ಅಂಬೇಡ್ಕರ್ ಜಯಂತಿಯಿಂದ ಜಾತಿಭೇದ ಉಂಟಾಗುತ್ತದೆ ಹಾಗಾಗಿ ಮನವಿಯನ್ನು ವಜಾ ಮಾಡಲಾಗಿದೆ ಎಂದು ಲಿಖಿತ ಪತ್ರವನ್ನು ಉನ್ನತ ಸಮಿತಿ ನೀಡಿದೆ. ಇದನ್ನು ವಿರೋಧಿಸಿ ನಾವು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ದೂರನ್ನು ನೀಡಿದ್ದೇವೆ. ಅನುಮತಿ ನೀಡದೇ ಇದ್ದರೆ ಸಮಾನ ಮನಸ್ಕರ ಸಂಘಟನೆಗಳು ಎಲ್ಲರು ಒಂದಾಗಿ ಸೋಮವಾರದಂದು ಪ್ರತಿಭಟನೆ ನಡೆಸುತ್ತೇವೆ” ಎಂದರು.

ಕಾರ್ಯಕಾರಿ ಸಮಿತಿಯ ಅಧ್ಯಕ್ಷ ದೇವರಾಜ್ ಅವರನ್ನು ಮಾತನಾಡಿಸಿದಾಗ “ಇದೆಲ್ಲಾ ಏನು ಇಲ್ಲ, ಕೋಮುದ್ವೇಷ ಬಿತ್ತಲು ಸಂಚು ಹೂಡುತ್ತಿರುವವರು ಇದನ್ನು ದೊಡ್ಡದು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬಹಿಷ್ಕಾರ ಎಂಬ ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ನಾವು ಎಲ್ಲಿಯೂ ಬಹಿಷ್ಕಾರ ಎಂಬ ಪದವನ್ನು ಬಳಸಿಯೇ ಇಲ್ಲ. 1927ರಿಂದ ನಮ್ಮ ಸಂಘ ಅಸ್ತಿತ್ವದಲ್ಲಿದೆ. ಅಂದಿನಿಂದ ಇಂತಹ ಕಾರ್ಯಕ್ರಮಗಳು ನಡೆದುಕೊಂಡು ಬಂದಿಲ್ಲ. ಅಂಬೇಡ್ಕರ್ ಅವರ ಮೇಲೆ ನಮಗೆ ಗೌರವ ಇದೆ, ಭಾರತದಲ್ಲಿ ಯಾರೂ ಸಹ ಅಂಬೇಡ್ಕರ್ ಅವರನ್ನು ಕೀಳಾಗಿ ಕಾಣಲು ಸಾಧ್ಯವಿಲ್ಲ. ಜಯಂತಿ ಆಚರಣೆ ಮಾಡಬಾರದು ಎಂದು ನನ್ನ ಅಭಿಪ್ರಾಯವಲ್ಲ ಆದರೆ ನಾನೂ ಸಂಘದ ಇತರ ಸದಸ್ಯರ ಅಭಿಪ್ರಾಯಕ್ಕೆ ಬದ್ಧನಾಗಿರಬೇಕಾಗುತ್ತದೆ. ಆಚರಣೆಗೆ ಅನುಮತಿ ನೀಡಿದರೆ ನಾಳೆ ಟಿಪ್ಪು, ವಾಲ್ಮೀಕಿ, ಕನಕದಾಸ ಹೀಗೆ ಎಲ್ಲರೂ ಅನುಮತಿ ಕೇಳುತ್ತಾರೆ ಇದರಿಂದ ಕೋಮುದ್ವೇಷ ಹೆಚ್ಚಾಗಬಹುದು. ರಾಮನಗರ ಸೂಕ್ಷ್ಮ ಪ್ರದೇಶವಾಗಿದೆ. ಹಾಗಾಗಿ ಅಪಾಯ ತಪ್ಪಿಸಲು ನಮ್ಮ ಸಮಿತಿ ಈ ತೀರ್ಮಾನಕ್ಕೆ ಬರಬೇಕಾಯಿತು” ಎಂದರು.

ಆದರೆ ವಕೀಲರ ಪರಿಷತ್ತಿಗೆ ದೂರು ನೀಡಿರುವ ಪತ್ರದ ಪ್ರಕಾರ ಜಿಲ್ಲಾ ಸಂಘದ ಆವರಣದಲ್ಲಿ ಹಿಂದಿನಿಂದಲೂ ಶ್ರೀ ರಾಮನವಮಿ, ಹನುಮ ಜಯಂತಿ, ವಿವೇಕಾನಂದ ಜಯಂತಿ, ಅಂಬರೀಶ್ ಹಾಗೂ ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ, ವಕೀಲರು ಮೃತರಾದಾಗ ಶ್ರದ್ಧಾಂಜಲಿ ಕಾರ್ಯಕ್ರಮಗಳು, ವರ್ಷದಲ್ಲಿ 2 ಬಾರಿ ಪೌರಾಣಿಕ ನಾಟಕಗಳು, ಗಣೇಶ ಚತುರ್ಥಿ ಅಂತಹ ಧಾರ್ಮಿಕ ಆಚರಣೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಆದರೆ ಜಾತಿ ವಿನಾಶಕ್ಕೆ ತಮ್ಮಿಡೀ ಜೀವನವನ್ನು ಬೆಸೆದ ಇಡೀ ದೇಶಕ್ಕೆ ಸಲ್ಲಬೇಕಾದ ಮಾನವತಾವಾದಿ ಅಂಬೇಡ್ಕರ್ ಅವರನ್ನು ಒಂದು ಸಮುದಾಯಕ್ಕೆ ಸೀಮಿತವಾಗಿ ನೋಡುವುದು ಹೇಗೆ ಸಾಧ್ಯ ಎಂಬ ಪ್ರಶ್ನೆ ಉಳಿಯುತ್ತದೆ.

ಇದರ ಕುರಿತು ನಾವು ರಾಮನಗರದ ಸಾಮಾಜಿಕ ಕಾರ್ಯಕರ್ತೆ ರಾಣಿಯವರನ್ನು ವಕೀಲರನ್ನು ಮಾತಾಡಿಸಿದಾಗ, ‘ಸರ್, ಇದು ಮಿದುಳಿನಲ್ಲೇ ಅಸ್ಪೃಶ್ಯ ಆಚರಣೆಯ ಮನೋಭಾವ ಇಟ್ಟುಕೊಂಡಿರುವುದರ ಪರವಾಗಿದೆ. ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ ಅಷ್ಟೇ. ದೇಶದಲ್ಲಿ ಅದೇಷ್ಟೋ ಮೂಲೆಗಳಲ್ಲಿ ಈ ರೀತಿ ಅಂಬೇಡ್ಕರ್ ಜಯಂತಿ ಮಾಡಲಾಗದ ಸ್ಥಿತಿ ಇರಲು ಸಾಧ್ಯ. ಇನ್ನು ದಲಿತರ ಸ್ಥಿತಿ?! ಅಂಬೇಡ್ಕರ್ ಅವರ ಆಶಯವನ್ನು ಪಸರಿಸುವ ಜಯಂತಿಯನ್ನು ಮಾಡುತ್ತಾ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದ್ದ ವಕೀಲರೇ ಇಂದು ಜಾತಿಗೆ ಸೀಮಿತವಾಗಿ ನೋಡುವುದು ನಿಜಕ್ಕು ಮನುಷ್ಯತ್ವಕ್ಕೆ ಮಾಡಿದ ಅವಮಾನವಾಗಿದೆ. ಇಂತಹ ವೈರಸ್‍ಗಳು ಹರಡದಂತೆ ತಡೆಯಬೇಕಿದೆ. “ಮೊದಲನೆಯದಾಗಿ ಮತ್ತು ಕೊನೆಯದಾಗಿ, ನಾವು ಭಾರತೀಯರು” ಎನ್ನುವ ಅಂಬೇಡ್ಕರ್ ಅವರ ಮಾತುಗಳನ್ನು ವಕೀಲರಿಗೆ ಪಾಠ ಮಾಡುವ ಅವಶ್ಯಕತೆ ಬಂದಿರುವುದು ದುರಂತ’ ಎಂದರು.

ಇದರ ಬಗ್ಗೆ ಕಾನೂನು ವಿದ್ಯಾರ್ಥಿ ಪುಷ್ಟಾ ಅವರೊಡನೆ ನಾನುಗೌರಿ.ಕಾಂ ಮಾತಾಡಿದಾಗ ಅವರು ಸುದೀರ್ಘವಾಗಿ ತಮ್ಮ ಅನಿಸಿಕೆಗಳನ್ನು ಹೇಳಿದರು “ ‘ಪ್ರಗತಿಯ ಹಾದಿಯಲ್ಲಿ ಯಾವುದೇ ದಿಕ್ಕಿಗೆ ನೀವು ಸಾಗಿದರು ಜಾತಿ ಎಂಬ ಭೂತ ನಿಮ್ಮನ್ನು ಎದುರುಗೊಳ್ಳುತ್ತದೆ. ಈ ಭೂತವನ್ನು ನೀವು ನಾಶ ಮಾಡದೇ ಪ್ರಗತಿಯನ್ನು ಸಾಧಿಸಲು ಸಾಧ್ಯವಿಲ್ಲ. ನಾನು ಹೇಳುವ ಮಾರ್ಗದಲ್ಲಿ ಅಲ್ಲದಿದ್ದರೂ ಸರಿ ನಿಮ್ಮದೇ ಆದ ಯಾವುದಾದರೂ ಮಾರ್ಗದಲ್ಲಿ ಜಾತಿ ವಿನಾಶಕ್ಕೆ ಹೋರಾಡಿ’ ಹೀಗೆಂದು ಹೇಳಿದವರು ಮಹಾ ಮಾನವತಾವಾದಿ ಬಾಬಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು. ಭೂಮಿ ಮೇಲೆ ಎಲ್ಲೂ ಇಲ್ಲದ ಕ್ರೂರವಾದ ಭಾರತದಲ್ಲಿನ ಜಾತಿಪದ್ಧತಿಯ ವಿರುದ್ಧ ಆಳವಾದ ಅಧ್ಯಯನ ಮಾಡಿ ಜಾತಿ ವಿನಾಶಕ್ಕೆ ಹೋರಾಟಗಳನ್ನು ರೂಪಿಸಿದವರು ಅಂಬೇಡ್ಕರ್. ಶೋಷಣೆಯ ವಿರುದ್ಧದ ವಿಮೋಚನೆಯ ಹೋರಾಟಗಳಲ್ಲಿಯೂ ಸಹ ಅಂಬೇಡ್ಕರ್ ಅವರು ಕೆಲವೇ ಸಮುದಾಯಗಳಿಗೆ ಸೀಮಿತವಾಗಿರದೆ ಮೇಲ್ಜಾತಿ ಎಂದು ಕರೆಯಲ್ಪಡುವ ಬ್ರಾಹ್ಮಣ ಜಾತಿಯಲ್ಲಿನ ಮಹಿಳೆಯರ ಶಿಕ್ಷಣ, ಸ್ವಾತಂತ್ರದ ಬಗ್ಗೆ ದನಿ ಎತ್ತಿ ಹಿಂದೂ ಕೋಡ್ ಬಿಲ್ ನಂತಹ ನೀತಿಗಳನ್ನು ರೂಪಿಸಲು ಮುಂದಾಗಿದ್ದರು. ಗಣಿ ಕಾರ್ಮಿಕರ ಹಕ್ಕುಗಳು, ಭಾರತದ ರೂಪಾಯಿ ಸಮಸ್ಯೆ, ಶಿಕ್ಷಣ, ನೀರಾವರಿ ಅಣೆಕಟ್ಟು… ಹೀಗೆ ಪುಟಗಳನ್ನು ತುಂಬಿಸಬಹುದಾದಷ್ಟು ಜನಪರ ವಿಚಾರಗಳಲ್ಲಿ ಅಂಬೇಡ್ಕರ್ ಅವರು ಕೆಲಸಗಳನ್ನು ಮಾಡಿದ್ದಾರೆ.

1950ರ ದಶಕದಲ್ಲಿ ಎಲ್ಲಾ ಜಾತಿಯಲ್ಲಿನ ಶೋಷಿತ ಹೆಣ್ಣುಮಕ್ಕಳ ಹಕ್ಕಿಗಾಗಿ ಅಂಬೇಡ್ಕರ್ ಅವರು ರಚಿಸಿದ್ದ ಹಿಂದೂ ಕೋಡ್ ಬಿಲ್‍ನ ವಿರುದ್ಧ, ಅದರ ಫಲಾನುಭವಿಗಳಾಗಬೇಕಿದ್ದ ಮೇಲ್ಜಾತಿಯ ಹೆಣ್ಣು ಮಕ್ಕಳೇ ಪ್ರತಿಭಟನೆ ನಡೆಸಿದ್ದರು. ಅಂದಿನ ಮನಸ್ಥಿತಿಯ ಜನರು ಇಂದಿಗೂ ಜೀವಂತವಾಗಿರುವುದು ದುರಂತ’. ದೇಶದ ಸಮಸ್ತ ಜನರಿಗೂ ಸಿಗಬೇಕಾದ ಹಕ್ಕುಗಳಿಗಾಗಿ ಹೋರಾಡಿದವರು, ಶೋಷಿತ ಸಮುದಾಯಗಳ ವಿಮೋಚನೆಯ ಮೂಲಕ ಎಲ್ಲರ ಮನಸ್ಸಿನಲ್ಲಿರುವ ಕೊಳೆಯನ್ನೂ ಕಳೆಯಲು ಹೊರಟವರನ್ನು ಜಾತಿಗೆ ಸೀಮಿತಗೊಳಿಸುತ್ತಿರುವುದು ದುರಂತ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...