Homeಮುಖಪುಟಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ಪಂಜಾಬ್‌‌ನ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ.

- Advertisement -
- Advertisement -

ಪಂಜಾಬ್… ಕಳೆದ ಸೆಪ್ಟಂಬರ್‌ನಿಂದ ದೇಶ ವಿದೇಶಗಳ ಗಮನ ಸೆಳೆಯುತ್ತಿರುವ ರಾಜ್ಯ. ಒಕ್ಕೂಟ ಸರ್ಕಾರ ವಿವಾದಾತ್ಮ ಕೃಷಿ ಕಾನೂನುಗಳನ್ನು ಜಾರಿಗೊಳಿಸಿದ ದಿನದಿಂದ ಪಂಜಾಬ್‌ನಲ್ಲಿ ಶುರುವಾದ ಹೋರಾಟ ದೆಹಲಿ ಚಲೋ ಮೂಲಕ ದೇಶಾದ್ಯಂತ ಐದು ತಿಂಗಳಲ್ಲಿ ಆವರಿಸಿದೆ.

ಪಂಜಾಬ್, ಹರಿಯಾಣದ ಜನರು ದೆಹಲಿ ಚಲೋಗೆ ಕರೆಕೊಟ್ಟರು. ಇದು ಇಂದು ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕ, ಕೇರಳ ಸೇರಿದಂತೆ ದೇಶಾದ್ಯಂತ ಹಲವು ರಾಜ್ಯಗಳಿಗೆ ಪಸರಿಸಿದೆ. ದೆಹಲಿಯ ಗಡಿಗಳಲ್ಲಿ ಪಂಜಾಬಿನ ಜನರು ತಮ್ಮ ಹೊಸ ಗ್ರಾಮಗಳನ್ನು ಸೃಷ್ಟಿಸಿದ್ದಾರೆ. ಇಂತಹ ಜನರ ಪಂಜಾಬಿನಲ್ಲಿ ಹೋರಾಟ ಹೇಗಿದೆ ಎಂಬುದನ್ನು ತಿಳಿಯಲು ಗೌರಿ ಮೀಡಿಯಾ ತಂಡ ಪಂಜಾಬಿಗೆ ಭೇಟಿ ನೀಡಿತು.

ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್ ತಿಂಗಳಿನಿಂದಲೂ ವಿವಾದಿತ ಕಾನೂನುಗಳ ವಿರುದ್ದ ಪ್ರತಿಭಟನೆ ನಡೆಯುತ್ತಲೇ ಇದೆ. ರಾಜ್ಯದ ಎಲ್ಲಾ ಕಡೆಗಳಲ್ಲಿ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಲಾಗಿದೆ. ರಿಲಯನ್ಸ್ ಕಂಪನಿಗೆ ಸೇರಿದ ಎಲ್ಲಾ ಪೆಟ್ರೋಲ್ ಬಂಕ್, ಮಾಲ್‌ಗಳಿಗೆ ಘೇರಾವ್ ಹಾಕಲಾಗಿದೆ. ರೈಲ್ ರೋಖೋ ಚಳುವಳಿ ಕೊಂಚ ಮಟ್ಟಿಗೆ ತಗ್ಗಿದ್ದು, ಈಗಲೂ ರೈಲ್ವೇ ಸ್ಟೇಷನ್‌‌ಗಳಲ್ಲಿ ಪ್ರತಿದಿನ ಪ್ರತಿಭಟನೆ ನಡೆಸಲಾಗುತ್ತಿದೆ.

ರೈತರಿಂದ ದೆಹಲಿ ಆಗ್ರಾ ರಸ್ತೆ ಬಂದ್ Photo Courtesy: The Hindu

ಇದನ್ನೂ ಓದಿ: ಹೋರಾಟ ನಿರತ ರೈತರ ಕರೆಗೆ ಓಗೊಟ್ಟ ಭಾರತ: ದೇಶದಾದ್ಯಂತ ’ಚಕ್ಕಾ ಜಾಮ್‌‌’ ಪ್ರತಿಭಟನೆಯ ಚಿತ್ರಣಗಳು

ಕಳೆದ 5 ತಿಂಗಳಿನಿಂದಲೂ ಒಂದು ದಿನವೂ ತಪ್ಪದೇ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ರೈಲ್ವೇ ಸ್ಟೇಷನ್, ಮಾಲ್, ಟೋಲ್ ಪ್ಲಾಜಾಗಳ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳ ಜನರು ಹೋರಾಟದಲ್ಲಿ ಭಾಗವಹಿಸುತ್ತಾರೆ. 3 ಗಂಟೆ ನಂತರ ಮನಗಳಿಗೆ ತೆರಳುತ್ತಾರೆ. ಆದರೆ ಕೆಲ ರೈತರು ಇಲ್ಲೇ ಟ್ರ್ಯಾಲಿಗಳು, ಟೆಂಟ್‌‌ಗಳನ್ನು ಹಾಕಿಕೊಂಡು ಉಳಿದುಕೊಂಡಿದ್ದಾರೆ.

ನಮಗೆ ಪಂಜಾಬ್‌ಗೆ ಕಾಲಿಡುತ್ತಿದ್ದಂತೆ ಆರಂಭದಲ್ಲೇ ಸ್ವಾಗತಿಸಿದ್ದು ರೈತ ಹೋರಾಟವನ್ನು ಬೆಂಬಲಿಸುತ್ತಾ ಸರ್ಕಲ್‌‌‌ಗಳಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದ ಯುವಜನರು. ಹಲವು ರಸ್ತೆಗಳು ಸೇರುವ ಪಟಿಯಾಲದ ಮುಖ್ಯ ವೃತ್ತದಲ್ಲಿ ಪ್ರತಿದಿನ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತದೆ.

ರಸ್ತೆಯಲ್ಲಿ ಓಡಾಡುವ ಪ್ರತಿ ವಾಹನದ ಮೇಲೂ ರೈತರ ಧ್ವಜಗಳು ವಿರಾಜಮಾನವಾಗಿವೆ. ಎಲ್ಲಾ ಅಂಗಡಿ ಮುಂಗಟ್ಟು, ಮನೆಗಳ ಮೇಲೆ ರೈತ ಹೋರಾಟದ ಘೋಷನೆಗಳು, ಧ್ವಜಗಳು ನಮ್ಮ ಕಣ್ಣು ಕುಕ್ಕುತ್ತಿದ್ದವು. ಎಕರೆಗಟ್ಟಲೆ ವಿಶಾಲವಾದ ಎಳೆಯ ಗೋದಿ ಹುಲ್ಲಿನ ಹಸಿರಿನ ಮಧ್ಯೆ ಅಲ್ಲಲ್ಲಿ ಕಾಣುವ ಮನೆಗಳು, ಮನೆಗಳ ಮೇಲೆ ಕಾಣುವ ರೈತ ಧ್ವಜಗಳು ಗಮನ ಸೆಳೆಯದೆ ಇರದೆ ಸಾಧ್ಯವೆ ಇಲ್ಲ.

ಇದನ್ನೂ ಓದಿ: ಬಾಲಿವುಡ್‌ನಲ್ಲಿರುವವರಿಗಿಂತ ಗಟ್ಟಿಯಾದ ಬೆನ್ನುಮೂಳೆಯಿದೆ – ಗ್ರೇಟಾ ಬಗ್ಗೆ ನಟಿ ರಮ್ಯಾ ಟ್ವೀಟ್

ಬರ್ನಾಲಾ, ಲೂದಿಯಾನ ಜಿಲ್ಲೆಯಲ್ಲಿ ರಸ್ತೆ ತಡೆ ಚಳುವಳಿಗೆ ನಾವು ಸಾಕ್ಷಿಯಾದೆವು. ಬರ್ನಾಲಾದ ರೈಲು ನಿಲ್ದಾಣದಲ್ಲಿ ಸೇರುತ್ತಿದ್ದ ರೈತರು ಹೆದ್ದಾರಿ ತಡೆಗಾಗಿ ಇಂದು (ಫೆಬ್ರವರಿ 6) 5 ಭಾಗಗಳಾಗಿ ವಿಭಜನೆಗೊಂಡಿದ್ದರು. ಬರ್ನಾಲಾ ಮತ್ತು ಲೂದಿಯಾನ ಹೆದ್ದಾರಿಯಲ್ಲಿ 5 ಕಡೆ ಹೆದ್ದಾರಿ ತಡೆ ನಡೆಸಲಾಗಿತ್ತು. ಮೆಹಾಲ್ ಕಲಾನ್ ಟೋಲ್ ಪ್ಲಾಜಾ ಬಂದ್ ಮಾಡಿ ಸಾವಿರಾರು ಮಂದಿ ಸೇರಿದ್ದರು. ಲೂದಿಯಾನದ ಜಗ್ರೂನ್‌ನಲ್ಲಿ ನೂರಾರು ಮಂದಿ ಹಾಡುಗಳನ್ನು ಹಾಡುತ್ತಾ ಪ್ರತಿಭಟನೆ ನಡೆಸಿದರು.

ಪಂಜಾಬ್‌‌ನಲ್ಲಿ ನಾವು ಗಮನಿಸಿದ ಮತ್ತೊಂದು ವಿಚಾರ ಹಾರ್ನ್ ಮಾಡಿ ಬೆಂಬಲ ನೀಡಿ ಎನ್ನುವುದು. ರಸ್ತೆಗಳಲ್ಲಿ, ಹೆದ್ದಾರಿಯ ವೃತ್ತಗಳಲ್ಲಿ ಪ್ರತಿಭಟನೆ ನಡೆಸುವ ರೈತ ಹೋರಾಟಗಾರರು, ಪ್ರತಿಭಟನೆಗೆ ಬೆಂಬಲ ನೀಡಲು ಹಾರ್ನ್ ಮಾಡಿ ಎಂದು ಘೋಷಿಸುತ್ತಾರೆ. ಕೆಲವೊಂದು ಕಡೆ ಭಿತ್ತಿಪತ್ರ ಪ್ರದರ್ಶಿಸುತ್ತಾರೆ. ಈ ಅಭಿಯಾನಕ್ಕೆ ಜನರು ಉತ್ತಮ ಪ್ರತಿಕ್ರಿಯೆ ನೀಡುತ್ತಾರೆ. ಒಂದೇ ಸಮನೆ ಐದು ನಿಮಿಷಗಳವರೆಗೂ ಹಾರ್ನ್ ಮಾಡಲಾಗುತ್ತದೆ.

ಇನ್ನು ಪಂಜಾಬ್‌‌ನಿಂದ ದೆಹಲಿಯ ಗಡಿಗಳಿಗೆ, ದೆಹಲಿಯ ಗಡಿಗಳಿಂದ ಪಂಜಾಬಿಗೆ ಓಡಾಡುವ ಟ್ರ್ಯಾಕ್ಟರ್, ಟ್ರ್ಯಾಲಿ, ಕಾರುಗಳು ರಸ್ತೆಯುದ್ದಕ್ಕೂ ಕಾಣಿಸುತ್ತಲೇ ಇರುತ್ತವೆ. ರಸ್ತೆಗಳಲ್ಲಿ ಘೋಷಣೆಗಳು ಸಾಮಾನ್ಯವಾಗಿ ಕೇಳಿಸುತ್ತವೆ. ಇನ್ನೊಂದು ಮುಖ್ಯ ವಿಷಯವೆಂದರೆ ದೆಹಲಿ ಪೊಲೀಸರಂತೆ ಇಲ್ಲಿನ ಪೊಲೀಸರು ಅತಿಯಾಗಿ ವರ್ತಿಸುತ್ತಿಲ್ಲ!

ಇದನ್ನೂ ಓದಿ: ಪೊಲೀಸರು ಮುಳ್ಳು ನೆಟ್ಟ ಜಾಗದಲ್ಲಿಯೇ ಹೂವಿನ ಗಿಡ ನೆಟ್ಟ ರೈತನಾಯಕ ರಾಕೇಶ್ ಟಿಕಾಯತ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...