Homeಮುಖಪುಟಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

- Advertisement -
- Advertisement -

ಹೊಸ ಕೃಷಿ ಕಾನೂನಿನ ವಿಷಯದಲ್ಲಿ ಕೇಂದ್ರ ಮತ್ತು ರೈತರ ನಡುವಿನ ಸಂಘರ್ಷ ಮುಂದುವರೆದಿದೆ. ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟಗಳು ರಾಜ್ಯದಾದ್ಯಂತ ಭಾರಿ ಟೀಕೆ ಮತ್ತು ಅಸಮಾಧಾನವನ್ನು ಎದುರಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಜೆಪಿ ಪಕ್ಷಗಳ ಕಾರ್ಯಕರ್ತರು, ನಾಯಕರು ಹಳ್ಳಿಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿ ಹೋರ್ಡಿಂಗ್‌ಗಳು ಮತ್ತು ಪೋಸ್ಟರ್‌ಗಳು ಕಾಣಿಸಿಕೊಳ್ಳಲಾರಂಭಿಸಿದೆ.

ರಾಜ್ಯದ ಹಲವಾರು ಜಿಲ್ಲೆಗಳ ಹಳ್ಳಿಗಳಿಗೆ ಬಿಜೆಪಿ-ಜೆಜೆಪಿ ಮುಖಂಡರನ್ನು ಸಾಮಾಜಿಕ ಕಾರ್ಯಕ್ರಮಗಳಿಗೆ ಆಹ್ವಾನಿಸುವುದನ್ನು ನಿಲ್ಲಿಸಿದ್ದಾರೆ. ಹಲವಾರು ಸ್ಥಳಗಳಲ್ಲಿ ಸಂಪೂರ್ಣ ಬಹಿಷ್ಕಾರವನ್ನು ಘೋಷಿಸಿದ್ದಾರೆ. ಅಂಬಾಲಾ, ಕುರುಕ್ಷೇತ್ರ, ಕರ್ನಾಲ್, ಸಿರ್ಸಾ, ಜಿಂದ್, ಫತೇಹಾಬಾದ್, ಪಾಣಿಪತ್, ಸೋನಿಪತ್, ಜಜ್ಜರ್ ಮತ್ತು ರೋಹ್ಟಕ್ ಸೇರಿದಂತೆ ಹಲವಾರು ಜಿಲ್ಲೆಗಳ ಹಳ್ಳಿಗಳು ಆಡಳಿತಾರೂಢ ಮೈತ್ರಿಕೂಟದ ನಾಯರಿಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳನ್ನು ಹಾಕಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಚಾರ್ಖಿ ದಾದ್ರಿ ಜಿಲ್ಲೆಯ ಸಮಸ್ಪುರ್ ಗ್ರಾಮದ ಪ್ರವೇಶ ಕೇಂದ್ರದಲ್ಲಿ “ಸರ್ವಜಾತಿಯ ಫೋಗತ್ ಖಾಪ್ 19” ಹಾಕಿದ ಪೋಸ್ಟರ್ ಹೀಗಿದೆ: “ಆಡಳಿತಾರೂಢ ಬಿಜೆಪಿ ಮತ್ತು ಜೆಜೆಪಿಗೆ ಗ್ರಾಮಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ”.

ಇದನ್ನೂ ಓದಿ:ರಿಹಾನ್ನಾ, ಗ್ರೇಟಾ ಯಾರೆಂದು ಗೊತ್ತಿಲ್ಲ, ಅವರು ಹೋರಾಟ ಬೆಂಬಲಿಸಿದರೆ ತಪ್ಪೇನಿದೆ-ಟಿಕಾಯತ್‌

ರೋಹ್ಟಕ್‌ನ ಭೆನಿ ಚಂದರ್ಪಾಲ್ ಗ್ರಾಮದ ಪೋಸ್ಟರ್‌ ಒಂದು ಬಿಜೆಪಿ-ಜೆಜೆಪಿ ನಾಯಕರನ್ನು ಬಹಿಷ್ಕರಿಸುವುದಾಗಿ ಘೋಷಿಸುತ್ತದಲ್ಲದೆ, ಎಚ್ಚರಿಕೆಯನ್ನೂ ನೀಡುತ್ತದೆ. ಅದರಲ್ಲಿ, “ಬಿಜೆಪಿ ಹಾಗೂ ಜೆಜೆಪಿಗರು ಗ್ರಾಮಕ್ಕೆ ಪ್ರವೇಶಿಸಿದರೆ ಅವರ ಜೀವ ಮತ್ತು ಆಸ್ತಿಪಾಸ್ತಿಗೆ ಅವದೇ ಜವಾಬ್ದಾರರಾಗಿರುತ್ತಾರೆ” ಎಂದು ಬರೆದಿದೆ.

ರಾಜ್ಯದ ಉಪಮುಖ್ಯಮಂತ್ರಿ ದುಶ್ಯಂತ್ ಚೌತಲಾ ಮತ್ತು ಅವರ ಮೊಮ್ಮಗ ರಂಜಿತ್ ಸಿಂಗ್ ಅವರ ತವರೂರಾದ  ನಾನಕ್ಪುರ ಮತ್ತು ಸಿರ್ಸಾದಲ್ಲಿನ ಹಲವಾರು ಹಳ್ಳಿಗಳಲ್ಲಿ ಇಬ್ಬರಿಗೂ ಪ್ರವೇಶವನ್ನು ನಿಷೇಧಿಸಿದ್ದಾರೆ. ಬಿಜೆಪಿ ಅಥವಾ ಜೆಜೆಪಿಯ ಯಾರಾದರು ನಾಯಕರು ಗ್ರಾಮಕ್ಕೆ ಪ್ರವೇಶಿಸಿದರೆ, ಸರ್ಕಾರ ರೈತರ ಮೇಲೆ ಲಾಠಿಚಾರ್ಜ್ ಮಾಡಿದಂತೆ ಗ್ರಾಮಸ್ಥರು ಲಾಠಿಚಾರ್ಜ್ ಮಾಡುತ್ತಾರೆ ಎಂದು ಎಚ್ಚರಿಸಿದ್ದಾರೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಕ್ಷೇತ್ರದ ಹಳ್ಳಿಗಳಾದ ಜೈಸಿಂಗ್‌ಪುರ, ಡೇರಾ ಗಾಮಾ, ಖಿಜ್ರಾಬಾದ್ ಮತ್ತು ಕರ್ನಾಲ್ ಸೇರಿದಂತೆ ಹಲವಾರು ಹಳ್ಳಿಗಳಲ್ಲಿ ಇದೇ ರೀತಿಯ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿ: ’ಮೋದಿ-ಶಾ ನೇರ ಮಾತುಕತೆಗೆ ಬರಲಿ’- ಜಿಂದ್ ಮಹಾಪಂಚಾಯತ್‌ನ ಮಹಾ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...