Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

ಫ್ಯಾಕ್ಟ್‌ಚೆಕ್: ರಿಹಾನ್ನ ಹಿಡಿದಿದ್ದು ಪಾಕ್ ಧ್ವಜವಲ್ಲ, ವೆಸ್ಟ್ಇಂಡೀಸ್ ಕ್ರಿಕೆಟ್ ಧ್ವಜವನ್ನು

- Advertisement -
- Advertisement -

ಭಾರತದಲ್ಲಿ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಪಾಪ್ ಗಾಯಕಿ ರಿಹಾನ್ನ ಟ್ವೀಟ್ ಮಾಡಿದ ನಂತರ, ಆಕೆ ಪಾಕಿಸ್ತಾನದ ಧ್ವಜವನ್ನು ಹಿಡಿದಿರುವುದನ್ನು ತೋರಿಸುವ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಗೂಗಲ್ ಇಂಡಿಯಾ ಸರ್ಚ್ ಪ್ರವೃತ್ತಿಗಳನ್ನು ಗಮನಿಸಿದಾಗ, ‘ರಿಹಾನ್ನಾ ಮುಸ್ಲಿಂ’ ಮತ್ತು ‘ರಿಹಾನ್ನ ಪಾಕಿಸ್ತಾನಿ’ ಎಂಬ ಶೋಧ ಪದಗಳಲ್ಲಿ ಭಾರಿ ಏರಿಕೆ ಕಂಡಿದೆ.

ಪಾಕಿಸ್ತಾನದ ಧ್ವಜವನ್ನು ಹಿಡಿದಿರುವ ಪಾಪ್ ಐಕಾನ್ ಚಿತ್ರವನ್ನು ಹರಡಿದವರಲ್ಲಿ ಬಿಜೆಪಿ ಉತ್ತರ ಪ್ರದೇಶದ ವಕ್ತಾರ ಶಲಾಭ್ ಮಣಿ ತ್ರಿಪಾಠಿ ಸೇರಿದ್ದಾರೆ. ತ್ರಿಪಾಠಿ ಬಿಜೆಪಿ ಯುಪಿ ಯುವ ಮೋರ್ಚಾ ಕಾರ್ಯಕರ್ತ ಅಭಿಷೇಕ್ ಅವರ ಟ್ವೀಟ್ ಅನ್ನು ರಿಟ್ವೀಟ್ ಮಾಡಿದ್ದಾರೆ.
ಲ್ಯಾಪ್‌ಡಾಗ್‌ಗಳ ಹೊಸ ರಾಣಿ ರಿಹಾನ್ನಾ, ಫೋಟೊ ನೋಡಿ, ನಿಮಗೇ ಗೊತ್ತಾಗುತ್ತೆ ಎಂದು ಒಕ್ಕಣಿಕೆ ನೀಡಲಾಗಿದೆ.

ವಿಭಜಕ ಸುಳ್ ಸುದ್ದಿ ಹರಡುವ, ಬಲಪಂಥೀಯ ನಿಲುವುಗಳ ‘ಶಂಖನಾದ’ ಎಂಬ ಫೇಸ್‌ಬುಕ್ ಪೇಜ್ ಕೂಡಾ ಈ ನಕಲಿ ಫೋಟೊ ಹಾಕಿ ರಿಹಾನ್ನಾ ಪಾಕ್ ಏಜೆಂಟ್ ಎಂಬಂತೆ ಬರೆದಿದೆ.

ಫ್ಯಾಕ್ಟ್‌ಚೆಕ್: ತಿರುಚಿದ ಚಿತ್ರ!

ಸರಳ ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಿಂದ ತಿಳಿಯುವುದು ಏನೆಂದರೆ, ಈ ಚಿತ್ರವನ್ನು ತಿರುಚಲಾಗಿದೆ ಅಂದರೆ ಎಡಿಟ್ ಮಾಡಲಾಗಿದೆ. ವಾಸ್ತವದಲ್ಲಿ, ರಿಹಾನ್ನಾ ಕ್ರಿಕೆಟ್ ವೆಸ್ಟ್ ಇಂಡೀಸ್ (CWI) ಮಂಡಳಿಯ ಧ್ವಜವನ್ನು ಹಿಡಿದಿದ್ದರು.

ಡರ್ಹಾಮ್‌ನ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಐಸಿಸಿ 2019 ರ ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಿಹಾನ್ನಾ ವೆಸ್ಟ್ ಇಂಡೀಸ್ ತಂಡದ ಈ ಧ್ವಜವನ್ನು ಹಿಡಿದು, ಆ ತಂಡವನ್ನು ಬೆಂಬಲಿಸಿದ್ದರು. ಅಂದಂತೆ, ಆಗ ಪಾಕಿಸ್ತಾನವು ಆಟ ಆಡುವ ತಂಡಗಳಲ್ಲಿ ಒಂದಾಗಿರಲಿಲ್ಲ.

ಅದೇ ವಿಂಡೀಸ್ ಧ್ವಜವನ್ನು ಹಿಡಿದ ಗಾಯಕಿಯ ಇನ್ನೂ ಹಲವಾರು ಚಿತ್ರಗಳಿವೆ. ಪಂದ್ಯದ ದಿನದಂದು ರಿಹಾನ್ನಾ ಅವರು ಒಂದು ಫೋಟೊ ಅಪ್‌ಲೋಡ್ ಮಾಡಿದ್ದರು, ಅಲ್ಲಿ ಅವರು ವೆಸ್ಟ್ ಇಂಡೀಸ್ ತಂಡದ ಆಟಗಾರರು ಧರಿಸುವ ಕ್ಯಾಪ್ ಧರಿಸಿದ್ದಾರೆ.

ಗಾಯಕಿ ರಿಹಾನ್ನಾ ‘ಕ್ರಿಕೆಟ್ ವೆಸ್ಟ್ ಇಂಡೀಸ್’ ಧ್ವಜವನ್ನು ಹಿಡಿದಿರುವ ಚಿತ್ರವನ್ನು ಪಾಕಿಸ್ತಾನದ ಧ್ವಜವನ್ನು ಹಿಡಿದಿದ್ದಾರೆ ಎಂದು ತಪ್ಪಾಗಿ ಚಿತ್ರಿಸಲು ಎಡಿಟ್ ಮಾಡಲಾಗಿದೆ. ಭಾರತದಲ್ಲಿ ರೈತರ ಆಂದೋಲನವನ್ನು ಬೆಂಬಲಿಸುವ ರಿಹಾನ್ನಾ ಅವರ ಟ್ವೀಟ್‌ನಿಂದ ಗಲಿಬಿಲಿಗೊಂಡ ಬಿಜೆಪಿಯ ಸದಸ್ಯರು ಗಾಯಕಿಗೆ ಪಾಕಿಸ್ತಾನಿ ಸಂಪರ್ಕವಿದೆ ಎಂದು ತಪ್ಪಾಗಿ ಸೂಚಿಸಲು ಪ್ರಯತ್ನಿಸಿದ್ದಾರೆ.

(ಕೃಪೆ: ಆಲ್ಟ್ ನ್ಯೂಸ್)


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರುಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...