Homeಮುಖಪುಟದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

'ಸರ್ಕಾರ ನಮ್ಮ ನಾಯಕರನ್ನು ಬಂಧಿಸುತ್ತಿದೆ. ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಶನಿವಾರ ಮೂರು ಗಂಟೆಗಳ ಚಕ್ಕಾ ಜಾಮ್ (ರಸ್ತೆ ಸಂಚಾರ ತಡೆ) ಅನ್ನು ದೇಶಾವ್ಯಾಪಿ ಯಶಸ್ವಿಯಾಗಿ, ಶಾಂತಿಯುತವಾಗಿ ಕೈಗೊಂಡ ರೈತ ಸಂಘಗಳು ತಮ್ಮ ಆಂದೋಲನವನ್ನು ಜೀವಂತವಾಗಿಡಲು ಪ್ರತಿ ವಾರ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಹೇಳಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆ ಜಾರಿಗೊಳಿಸಬೇಕೆಂದು ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರ ಸಂವಾದಕ್ಕೆ ಮುಕ್ತವಾಗಿದ್ದರೂ, ಮಾತುಕತೆಗಳನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಶನಿವಾರ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ದಿಗ್ಬಂಧನ ನಡೆಸಲಾಯಿತು. ಪ್ರತಿಭಟನೆ ಶಾಂತಿಯುತವಾಗಿದ್ದರೂ, ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 50 ಜನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಇದೇ ರೀತಿ ದೇಶಾದ್ಯಂತ ಬಂಧನ, ಬಿಡುಗಡೆಗಳು ನಡೆದಿವೆ.

ಬೆಂಗಳೂರಿನಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ದೇಶದ ವಿವಿಧೆಡೆ ಈ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಗಾಲು ಹಾಕಿದ ವರದಿಗಳು ಬಂದಿವೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಹೊರತುಪಡಿಸಿ ಭಾರತದಾದ್ಯಂತ ರಸ್ತೆ ದಿಗ್ಬಂಧನ ನಡೆಸಲಾಗುವುದು ಎಂದು ತಿಳಿಸಿತ್ತು.

ಎರಡೂವರೆ ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಅಧಿಕಾರಸ್ಥರ ಕಿರುಕುಳ ಮತ್ತು ಬಜೆಟ್‌ನಲ್ಲಿ ರೈತಾಪಿಗಳ ನಿರ್ಲಕ್ಷ್ಯ ವಿರೋಧಿಸಿ ಶನಿವರ ಚಕ್ಕಾ ಬಂದ್ ನಡೆಸಲಾಗಿತು.

“ಚಕ್ಕಾ ಜಾಮ್ ಭಾರತದಾದ್ಯಂತ ಬಹಳ ಯಶಸ್ವಿಯಾಗಿದೆ. ಪ್ರತಿ ರಾಜ್ಯದಲ್ಲಿ ಕನಿಷ್ಠ 100 ಗ್ರಾಮಗಳು, ಪಟ್ಟಣಗಳು ದಿಗ್ಬಂಧನದಲ್ಲಿ ಪಾಲ್ಗೊಂಡಿವೆ” ಎಂದು ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಹೇಳಿದ್ದಾರೆ. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆಯಾದರೂ, ಪ್ರತಿಭಟನೆಯನ್ನು ಜೀವಂತವಾಗಿಡಲು ಪ್ರತಿ ವಾರವೂ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಲ್ಲದಿದ್ದರೆ ಪ್ರತಿಭಟನೆ ಮುಗಿದಿದೆ ಎಂದು ಸರ್ಕಾರ ಭಾವಿಸಬಹುದು” ಎಂದು ಅವರು ಹೇಳಿದ್ದಾರೆ.

ಈ ಒಂದು ಮೊಮೆಂಟಮ್ ಅನ್ನು (ಆವೇಗವನ್ನು ) ಮುಂದುವರೆಸಲು, ಸಾಧ್ಯವಾದಷ್ಟು ಹೆಚ್ಚಿನ ರಾಜ್ಯಗಳನ್ನು ಒಳಗೊಳ್ಳಲು ಪ್ರಯತ್ನಿಸಲಾಗುವುದು ಎಂದು ರೈತ ನಾಯಕರು ಹೇಳಿದರು. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ, ಆದರೆ ಅದು ಸಾಕಾಗುವುದಿಲ್ಲ. ಇಂದಿನ ಚಕ್ಕಾ ಜಾಮ್‌ನಲ್ಲಿ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ನಾವು ನೋಡಿದಂತೆಯೇ, ಭವಿಷ್ಯದಲ್ಲಿ ನಾವು ಇತರ ರಾಜ್ಯಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಜಮ್ಹುರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದರು.

ದೆಹಲಿ ಮತ್ತು ಉತ್ತರ ಪ್ರದೇಶವನ್ನು ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಚಕ್ಕಾ ಜಾಮ್ ಕೊನೆಯಲ್ಲಿ ಸರ್ಕಾರಕ್ಕೆ ಒಂದು ಗಡುವನ್ನು ರವಾನಿಸಿದ್ದಾರೆ. “ನಾವು ಕಾನೂನುಗಳನ್ನು ರದ್ದುಗೊಳಿಸಲು ಅಕ್ಟೋಬರ್ 2 ರವರೆಗೆ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಇದರ ನಂತರ, ನಾವು ಹೆಚ್ಚಿನ ಯೋಜನೆಯನ್ನು ಮಾಡುತ್ತೇವೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

ಇತರ ರೈತ ಮುಖಂಡರು ದಿ ಪ್ರಿಂಟ್‌ಗೆ ಅಂತಹ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. “ಅವರು (ಟಿಕಾಯತ್) ದಿನಾಂಕವನ್ನು ಪ್ರಸ್ತಾಪಿಸಿರಬಹುದು, ಆದರೆ ಇನ್ನೂ ಅಂತಹ ಬದ್ಧತೆಯ ಕಾರ್ಯಕ್ರಮ ರೂಪಿಸಿಲ್ಲ” ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ರಾಜೇವಾಲ್) ಪ್ರಧಾನ ಕಾರ್ಯದರ್ಶಿ ಓಂಕರ್ ಸಿಂಗ್, “ಅಕ್ಟೋಬರ್ 2 ರೊಳಗೆ ಸರ್ಕಾರ ಕಾನೂನುಗಳನ್ನು ರದ್ದುಗೊಳಿಸಿದರೆ ನಾವು ಮನೆಗೆ ಹಿಂದಿರುಗುತ್ತೇವೆ. ಕಾನೂನುಗಳನ್ನು ರದ್ದುಗೊಳಿಸದಿದ್ದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಅಂತಹ ಯಾವುದೇ ದಿನಾಂಕವನ್ನು ಡೆಡ್‌ಲೈನ್ ಎಂದು ಈವರೆಗೂ ನಿಗದಿಪಡಿಸಲಾಗಿಲ್ಲ ” ಎಂದಿದ್ದಾರೆ.

ಅನುಕೂಲಕರ ವಾತಾವರಣವಿದ್ದರಷ್ಠೇ ಮಾತುಕತೆ

ಪ್ರತಿಭಟನಾ ನಿರತ ರೈತರು ಮತ್ತು ಮೋದಿ ಸರ್ಕಾರದ ನಡುವೆ ಈಗಾಗಲೇ 11 ಸುತ್ತಿನ ಚರ್ಚೆ ನಡೆದಿದ್ದರೂ, ಯಾವುದೇ ಪರಿಹಾರವನ್ನು ತಲುಪಿಲ್ಲ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ, ಆದರೆ ಸರ್ಕಾರವು ಕಾನೂನುಗಳನ್ನು 18 ತಿಂಗಳು ತಡೆ ಹಿಡಿಯುವುದರ ಬಗ್ಗೆ ಮತ್ತು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮಾತ್ರ ಭರವಸೆ ನೀಡಿದೆ.

ರೈತ ಮುಖಂಡರು ತಾವು ಮಾತುಕತೆಗೆ ಮುಕ್ತವಾಗಿದ್ದರೂ, ಸರ್ಕಾರ ಮೊದಲ ಹೆಜ್ಜೆ ಇಟ್ಟರೆ ಮಾತ್ರ ಮಾತುಕತೆ ನಡೆಯುತ್ತದೆ ಎಂದು ಹೇಳಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳುತ್ತಿದೆ, ಕೇವಲ ಒಂದು ದೂರವಾಣಿ ಕರೆ ಮಾತ್ರ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಆ ಫೋನ್ ಕರೆ ಬರಲಿ, ನೋಡೋಣ” ಎಂದು ಸಂಧು ಹೇಳಿದರು. “ಮಾತುಕತೆಗಾಗಿ ಸರ್ಕಾರವನ್ನು ಸಂಪರ್ಕಿಸಲು ನಾವು ಸಾಧ್ಯವಿಲ್ಲ; ಅದು ಅವರಿಂದ ಬರಬೇಕು’ ಎಂಬುದು ಬಹುತೇಕ ರೈತರ ಅಭಿಪ್ರಾಯವಾಗಿದೆ.

ಸರ್ಕಾರವು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದರೆ ಮಾತ್ರ ಮಾತುಕತೆ ನಡೆಸಬಹುದು ಎಂದು ರೈತರು ಹೇಳಿದರು. “ಅವರು ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ, ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ. ಅಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ಮೊಲ್ಲಾ ಕೇಳಿದರು. “ಆದರೆ ನಾವು ಯಾವಾಗಲೂ ಈ ಸಮಸ್ಯೆಯನ್ನು ಸರ್ಕಾರ ಮತ್ತು ರೈತರ ನಡುವೆ ಇಟ್ಟುಕೊಂಡಿದ್ದೇವೆ ಮತ್ತು ಸಂವಾದದ ಮೂಲಕ ಮಾತ್ರ ಇದನ್ನು ಪರಿಹರಿಸಬಹುದು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಏನಿದ್ದರೂ, ಪ್ರಾತಿನಿಧಿಕ ಸಂಸ್ಥೆ ಸಂಯುಕ್ತ್ ಕಿಸಾನ್ ಮೋರ್ಚಾ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದು ಮಹತ್ವದ್ದಾಗಿದೆ.


ಇದನ್ನೂ ಓದಿ: ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...