Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...