Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...