Homeಮುಖಪುಟಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್, ಸಚಿನ್‌ರನ್ನು ಕೇಳಬಾರದಿತ್ತು.

- Advertisement -
- Advertisement -

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ರಾಜ್‌ ಠಾಕ್ರೆ ದೂರಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್ ಸೇರಿ ಹಲವರು ಟ್ವೀಟ್ ಮಾಡಿದ್ದರು. ಇದರಿಂದ ಕೆರಳಿದ ಲಕ್ಷಾಂತರ ಜಾಲತಾಣಿಗರು ಅಷ್ಟು ದಿನ ರೈತ ಹೋರಾಟ ಇವರಿಗೆ ಕಾಣುವುದಿಲ್ಲವೇ ಎಂದು ಈ ತಾರೆಯರನ್ನು ವಿರೋಧಿಸಿ ದೊಡ್ಡ ಮಟ್ಟದ ಟ್ರೋಲ್ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್‌ಠಾಕ್ರೆ “ಈ ರೈತ ಹೋರಾಟವನ್ನು ಹತ್ತಿಕ್ಕುತ್ತಿರುವುದಕ್ಕೆ ಬರುತ್ತಿರುವ ಅಂತರಾಷ್ಟ್ರೀಯ ಪ್ರತಿಕ್ರಿಯೆಯು ಸರ್ಕಾರಕ್ಕೆ ಸಂಬಂಧಿಸಿದ ವಿಷಯವೇ ಹೊರತು ಇಡೀ ರಾಷ್ಟ್ರಕ್ಕೆ ಸಂಬಂಧಿಸಿಲ್ಲ. ಇದು ಚೀನಾ ಅಥವಾ ಪಾಕಿಸ್ತಾನದಿಂದ ರಾಷ್ಟ್ರವು ಅಪಾಯವನ್ನು ಎದುರಿಸುತ್ತಿರುವುದಲ್ಲ” ಎಂದು ತಿಳಿಸಿದ್ದಾರೆ. ಹಾಗಾಗಿ ಇದನ್ನು ಸರ್ಕಾರವೇ ಎದುರಿಸಬೇಕೆ ಹೊರತು ಇಡೀ ರಾಷ್ಟ್ರಕ್ಕೆ ಅವಮಾನ ಎಂಬಂತೆ ಬಿಂಬಿಸಿ ದೊಡ್ಡ ದೊಡ್ಡ ವ್ಯಕ್ತಿಗಳು ಸರ್ಕಾರದ ಪರ ಟ್ವೀಟ್ ಮಾಡುವಂತೆ ಕೇಳಿಕೊಳ್ಳುವುದು ಸರಿಯಲ್ಲ, ವಿಶೇಷವಾಗಿ ಸಚಿನ್, ಲತಾ ಮಂಗೇಶ್ಕರ್‌ರವರನ್ನು ಕೇಳಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪಾಪ್ ಗಾಯಕಿ ರಿಯಾನ್ನಾ, ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್, ವಕೀಲೆ ಮೀನಾ ಹ್ಯಾರಿಸ್ ಮತ್ತು ಚಲನಚಿತ್ರ ನಟಿ ಮಿಯಾ ಖಲೀಫರವರು ರೈತ ಹೋರಾಟ ಬೆಂಬಲಿಸಿ ಮಾಡಿದ ಟ್ವೀಟ್‌ಗಳಿಗೆ ಪ್ರತಿಯಾಗಿ ಭಾರತದ ಚಿತ್ರನಟರು ಮತ್ತು ಕ್ರೀಡಾಪಟುಗಳು ಯೋಜಿತ ರೀತಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದರಿಂದ ಅವರ ವ್ಯಕ್ತಿತ್ವಕ್ಕೂ ಹಾನಿ ಉಂಟಾಗಿದೆ. ಅದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ರಾಜ್‌ ಠಾಕ್ರೆ ಹೇಳಿದ್ದಾರೆ.

ಸರ್ಕಾರ ತನ್ನ ಪರವಾಗಿ ಟ್ವೀಟ್ ಮಾಡುವಂತೆ ಅಕ್ಷಯ್ ಕುಮಾರ್ ಅವರಂತಹ ಜನರನ್ನು ಕೇಳಿಕೊಂಡರೆ ಪರವಾಗಿಲ್ಲ. ಆದರೆ ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರು ಭಾರತ್ ರತ್ನ ಪಡೆದಿರುವವರು. ಅಂತಹ ಸರಳ ಜನರು ಟ್ವೀಟ್ ಮಾಡುವಂತೆ ಸರ್ಕಾರ ಕೇಳಿದೆ ಮತ್ತು ಅವರೀಗ ಟ್ರೋಲ್‌ಗೊಳಗಾಗುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಿಗ್ಗೆ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ’ಟ್ರಾಕ್ಟರ್‌ ಕ್ರಾಂತಿ’ಯಲ್ಲಿ ಭಾಗವಹಿಸಿ: ದೇಶಕ್ಕೆ ರೈತ ಮುಖಂಡ ಟಿಕಾಯತ್‌ ಕರೆಟ್ರಾಕ್ಟರ್‌ ಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...