Homeಮುಖಪುಟಉತ್ತರಾಖಂಡ ಹಿಮ ಪ್ರವಾಹ: ಸುರಂಗದಲ್ಲಿ ಸಿಕ್ಕಿಬಿದ್ದ 12 ಜನರ ರಕ್ಷಣೆ

ಉತ್ತರಾಖಂಡ ಹಿಮ ಪ್ರವಾಹ: ಸುರಂಗದಲ್ಲಿ ಸಿಕ್ಕಿಬಿದ್ದ 12 ಜನರ ರಕ್ಷಣೆ

- Advertisement -
- Advertisement -

ಭಾನುವಾರದಂದು ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ತಪೋವನ್ ಪ್ರದೇಶದಲ್ಲಿ ಹಿಮಪ್ರವಾಹ ಸಂಭವಿಸಲು ಕಾರಣ ಏನೆಂಬುವುದು ಇನ್ನೂ ತಿಳಿದು ಬಂದಿಲ್ಲ ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ ಹೇಳಿದ್ದಾರೆ. ಅಲ್ಲಿನ ಹಿಮ ನದಿಯಾದ ’ನಂದಾ ದೇವಿ’ಯಲ್ಲಿ ಹಿಮ ಪ್ರವಾಹ ಉಂಟಾಗಿ 153 ಜನರು ಕಾಣೆಯಾಗಿದ್ದರು. ಈಗಾಗಲೆ ಹತ್ತು ಮಂದಿಯ ಮೃತದೇಹ ಪತ್ತೆಯಾಗಿದ್ದು, 12 ಜನರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ 100 ಕ್ಕೂ ಅಧಿಕ ಜನರು ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮುಖ್ಯಮಂತ್ರಿ‌, “ಹಿಮನದಿ ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ, ಜನರ ಜೀವ ಉಳಿಸುವ ಕಾರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ: ಹಿಮನದಿಯಲ್ಲಿ ಭಾರಿ ಹಿಮ ಪ್ರವಾಹ, 150 ಜನರು ನಾಪತ್ತೆ

ನಾಪತ್ತೆಯಾಗಿರವವರ ಶೋಧ ನಡೆಸುವುಕ್ಕೆ ಶ್ವಾನ ದಳವನ್ನು ನಿಯೋಜಿಸಲಾಗಿದೆ. ಚಮೋಲಿಯ ತಪೋವನ ಅಣೆಕಟ್ಟೆ ಬಳಿ ಶ್ವಾನ ದಳದ ಸಹಾಯದೊಂದಿಗೆ ಶೋಧ ಕಾರ್ಯ ನಡೆಯುತ್ತಿದೆ. ಅಲ್ಲದೆ ಇಂಡೊ–ಟಿಬೆಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿಗಳು ಕೂಡಾ ಶೋಧಕಾರ್ಯದಲ್ಲಿ ತೊಡಗಿದ್ದಾರೆ.

ಈ ಬಗ್ಗೆ ಮಾತನಾಡಿದ ಉತ್ತರಾಖಂಡ ಡಿಜಿಪಿ ಅಶೋಕ್‌ ಕುಮಾರ್‌, “ಭಯವನ್ನು ಹರಡುವ ಅಗತ್ಯವಿಲ್ಲ. ನಿನ್ನೆ ಹಿಮನದಿ ಸ್ಪೋಟಗೊಂಡಿದ್ದು, ಇದರಿಂದಾಗಿ ತಪೋವನ್‌ನ ರೈನಿ ವಿದ್ಯುತ್ ಯೋಜನೆಗೆ ಹಾನಿಯಾಗಿದೆ.ಒಟ್ಟು 153 ಜನರು ಕಾಣೆಯಾಗಿದ್ದಾರೆ” ಹೇಳಿದ್ದಾರೆ.

ಇದನ್ನೂ ಓದಿ: ದಿಲ್ಜಿತ್ ತಾನು ಖಲಿಸ್ತಾನಿ ಅಲ್ಲ ಎಂದು ಸಾಬೀತುಪಡಿಸಲಿ: ಕಂಗನಾ ರಾಣಾವತ್‌

“ಈ ಪೈಕಿ 10 ಮೃತ ಶರೀರವನ್ನು ಪತ್ತೆ ಮಾಡಲಾಗಿದೆ. ತಪೋವನ್‌ನ ಸಣ್ಣ ಸುರಂಗದಿಂದ ನಿನ್ನೆ 12 ಜನರನ್ನು ರಕ್ಷಿಸಲಾಗಿದೆ. ದೊಡ್ಡ ಸುರಂಗವನ್ನು ತೆರೆಯುವ ಪ್ರಯತ್ನಗಳು ನಡೆಯುತ್ತಿವೆ. ಅದರ ಮೇಲಿರುವ ಬಂಡೆಗಳನ್ನು ತೆಗೆದುಹಾಕಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಾದ್ರಿ ಮಹಾಪಂಚಾಯತ್‌ನಲ್ಲಿ 50 ಸಾವಿರ ರೈತರು ಭಾಗಿ: 5 ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...