Homeಮುಖಪುಟತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಭಾನುವಾರ ಮುಂಜಾನೆ 4.30 ರ ಸುಮಾರಿಗೆ ತಮೀಳ್‌‌‌‌‌‌‌‌‌ ನೇಷನ್ ಪೀಪಲ್ಸ್ ಫ್ರಂಟ್ ಪಾಲಿಟ್‌‌ ಪ್ರಧಾನ ಕಾರ್ಯದರ್ಶಿ ಬಾಲನ್ ಮತ್ತು ಕೊ. ಸೀನಿವಾಸನ್‌‌ ಅವರನ್ನು ಸೇಲಂ ಥೀವಟ್ಟಿಪಟ್ಟಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಒಂದುವರೆ ವರ್ಷಗಳ ಹಿಂದೆ ಕೇರಳ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದ ಮಾವೋವಾದಿ ನಾಯಕ ಮಣಿವಾಸಗಂ ಅವರ ಶವಸಂಸ್ಕಾರದಲ್ಲಿ ಭಾಗವಹಿಸಿದ್ದಕ್ಕಾಗಿ ದಾಖಲಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ನವೆಂಬರ್ 2019 ರಲ್ಲಿ ಬಾಲನ್ ಮತ್ತು ಕೋ. ಸೀನಿವಾಸನ್‌ರವರು ಮಣಿವಾಸಗಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದರು.

ಅವರ ಬಂಧನವನ್ನು ಖಂಡಿಸಿರುವ ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ “ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಯಾರಾದರು ಪ್ರಕರಣಗಳನ್ನು ದಾಖಲಿಸುತ್ತಾರೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಫ್ರಂಟ್‌ನ ಸದಸ್ಯರಾದ ಸತೀಶ್ ಮತ್ತು ಅರುಣ್ ಶೌರಿ ಅವರಿಗೆ ಕೇವಲ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಈ ಪ್ರಕರಣದಲ್ಲಿ ಮತ್ತೊಂದು ಸಮನ್ಸ್‌ ನೀಡಲಾಗಿದೆ ಎಂದು ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ ಹೇಳಿದೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ತಮಿಳ್‌‌ ನೇಷನ್ ಪೀಪಲ್ಸ್ ಫ್ರಂಟ್‌‌‌ನ ಜಿಲ್ಲಾ ಸಮಿತಿ ಸದಸ್ಯರಾದ ಆರ್. ಶ್ರೀರಾಮ್, ಬಿಜೆಪಿ ವಿರುದ್ದ ಜನಾಂದೋಲನ ರೂಪಿಸಿದ್ದಕ್ಕಾಗಿ ಈ ಬಂಧನ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶ್ರೀರಾಮ್, “2021 ರ ಜನವರಿ 20 ರಂದು ಚೆನ್ನೈನಲ್ಲಿ ಎಪ್ಪತ್ತು ತಮಿಳು ಸಂಘಟನೆಗಳನ್ನು ಒಳಗೊಂಡು ’ಬಿಜೆಪಿ ವಿರೋಧಿ ಚಳುವಳಿ’ ಕುರಿತು ಒಂದು ಸಭೆ ನಡೆದಿತ್ತು. ಎಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪರ್ಯಾಯ ಆಂದೋಲನವನ್ನು ಕಟ್ಟುವ ಬಗ್ಗೆ ಸಭೆಯನ್ನು ನಡೆಲಾಗಿತ್ತು. ಈ ಸಭೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರದಂತೆ ತಡೆಯಲು ಬಿಜೆಪಿ ಎಲ್ಲಿ ಚುನಾವಣೆಗೆ ನಿಂತರು ಅಲ್ಲಿ ಅದನ್ನು ಸೋಲಿಸಲು ಒಗ್ಗೂಡುವಂತೆ ಚರ್ಚಿಸಲಾಗಿತ್ತು” ಎಂದು ಹೇಳಿದರು.

“ಈ ಸಭೆಯನ್ನು ’ಬಿಜೆಪಿಯನ್ನು ಸೋಲಿಸಿ ಚಳವಳಿ’ಯ ಮುಖಂಡರಾದ ಬಾಲನ್ ಅವರು ಆಯೋಜಿಸಿದ್ದರು. ಈ ಸಭೆ ನಡೆದ ನಂತರ ಪೊಲೀಸರು ಒಂದುವರೆ ವರ್ಷ ಹಿಂದೆ ದಾಖಲಾದ ಪ್ರಕರಣವನ್ನು ಹೊರತೆಗೆದು ಅವರನ್ನು ಬಂಧಿಸಿದ್ದಾರೆ” ಎಂದು ಶ್ರೀರಾಮ್ ಹೇಳಿದರು.

ಇದನ್ನೂ ಓದಿ: ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

“ಎನ್‌ಕೌಂಟರ್‌ಗಳು ನಿರಂತರವಾಗಿ ನಡೆಯುತ್ತಿರುವುದರಿಂದ, ನಕಲಿ ಎನ್‌ಕೌಂಟರ್‌‌‌ಗಳನ್ನು ತನಿಖೆ ಮಾಡಬೇಕೆಂದು ನಾವು ಮನಿವಾಸಗಂ ಅವರ ಹತ್ಯೆಯನ್ನು ನಾವು ಖಂಡಿಸಿದ್ದೆವು. ಅವರ ಅಂತಿಮ ದರ್ಶನ ಪಡೆಯಲು ಸೇಲಂಗೆ ಹೋದಾಗ ಬಾಲನ್ ಅವರು ಅಲ್ಲಿ ಭಾಷಣ ಮಾಡಿದ್ದರು ಹಾಗೂ ಸೀನಿವಾಸನ್‌ ಅವರ ಒಂದು ಕವಿತೆ ಓದಿದ್ದರು. ಆದರೆ ಅಂದು 7 ಜನರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ಬಾಲನ್ ಅಥವಾ ಸೀನಿವಾಸನ್‌ ಅವರ ಹೆಸರು ಇರಲಿಲ್ಲ” ಎಂದು ಶ್ರೀರಾಮ್ ಹೇಳಿದ್ದಾರೆ.

ತಮಿಳ್‌ ನೇಷನ್‌ ಫ್ರಂಟ್‌ನ ಕಾರ್ಯಕರ್ತರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸ್ವತಃ ಬರೆದಿದ್ದರು. ವಿವಾದಿತ ಯುಎಪಿಎ ಕಾನೂನಿನ ಅಡಿಯಲ್ಲಿ ಈ ರೀತಿ ಬರೆಯುವ ಹಕ್ಕು ಡಿಎಸ್ಪಿಗೆ ಇದೆ. ಕಾನೂನಿನಂತೆ ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದಿದ್ದರೂ, ಪೊಲೀಸರು ಸಿದ್ಧಪಡಿಸಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಬಳಸಿಕೊಂಡು ಅವರು ಯಾರನ್ನೂ ಯಾವಾಗ ಬೇಕಾದರೂ ಬಂಧಿಸಬಹುದಾಗಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಬಂಧಿಸಲು ಇದೇ ರೀತಿಯ ವಿಧಾನಗಳನ್ನು ಬಳಸಲಾಯಿತು. ಮೂಲ ಎಫ್‌ಐಆರ್‌ನಲ್ಲಿ ಅವರ ಹೆಸರುಗಳು ಇರಲಿಲ್ಲವಾದರು ನಂತರ ಪೊಲೀಸರು ಸ್ವತಃ ಸಿದ್ಧಪಡಿಸಿದ ತಪ್ಪೊಪ್ಪಿಗೆಯನ್ನು ಹೇಳಿಕೆಯಾಗಿ ಸೇರಿಸಲಾಯಿತು.

ಪ್ರಕರಣದಲ್ಲಿ ಎಡಪ್ಪಾಡಿ ಸರ್ಕಾರದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಹಸ್ತಕ್ಷೇಪವನ್ನು ತಮೀಳ್‌ ನೇಷನ್ ಪೀಪಲ್ಸ್ ಫ್ರಂಟ್ ಖಂಡಿಸಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪ್ರಕರಣಗಳನ್ನು ದಾಖಲಿಸುವುದು ಮಾನವನ ಮೂಲಭೂತ ಹಕ್ಕುಗಳ ಮೇಲಿನ ಅಮಾನವೀಯ ದಾಳಿ ಎಂದು ಅದು ಹೇಳಿದೆ. ತಮ್ಮ ಸಂಘಟನೆಯ ಸದಸ್ಯರನ್ನು ತಕ್ಷಣವೆ ಬಿಡುಗಡೆ ಮಾಡಬೇಕೆಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...