Homeಮುಖಪುಟತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಭಾನುವಾರ ಮುಂಜಾನೆ 4.30 ರ ಸುಮಾರಿಗೆ ತಮೀಳ್‌‌‌‌‌‌‌‌‌ ನೇಷನ್ ಪೀಪಲ್ಸ್ ಫ್ರಂಟ್ ಪಾಲಿಟ್‌‌ ಪ್ರಧಾನ ಕಾರ್ಯದರ್ಶಿ ಬಾಲನ್ ಮತ್ತು ಕೊ. ಸೀನಿವಾಸನ್‌‌ ಅವರನ್ನು ಸೇಲಂ ಥೀವಟ್ಟಿಪಟ್ಟಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ. ಒಂದುವರೆ ವರ್ಷಗಳ ಹಿಂದೆ ಕೇರಳ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದ ಮಾವೋವಾದಿ ನಾಯಕ ಮಣಿವಾಸಗಂ ಅವರ ಶವಸಂಸ್ಕಾರದಲ್ಲಿ ಭಾಗವಹಿಸಿದ್ದಕ್ಕಾಗಿ ದಾಖಲಿಸಲಾಗಿದ್ದ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ನವೆಂಬರ್ 2019 ರಲ್ಲಿ ಬಾಲನ್ ಮತ್ತು ಕೋ. ಸೀನಿವಾಸನ್‌ರವರು ಮಣಿವಾಸಗಂ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದರು.

ಅವರ ಬಂಧನವನ್ನು ಖಂಡಿಸಿರುವ ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ “ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಯಾರಾದರು ಪ್ರಕರಣಗಳನ್ನು ದಾಖಲಿಸುತ್ತಾರೆಯೇ?” ಎಂದು ಆಕ್ರೋಶ ವ್ಯಕ್ತಪಡಿಸಿದೆ. ಫ್ರಂಟ್‌ನ ಸದಸ್ಯರಾದ ಸತೀಶ್ ಮತ್ತು ಅರುಣ್ ಶೌರಿ ಅವರಿಗೆ ಕೇವಲ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಈ ಪ್ರಕರಣದಲ್ಲಿ ಮತ್ತೊಂದು ಸಮನ್ಸ್‌ ನೀಡಲಾಗಿದೆ ಎಂದು ತಮೀಳ್‌‌ ನೇಷನ್ ಪೀಪಲ್ಸ್ ಫ್ರಂಟ್ ಹೇಳಿದೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ತಮಿಳ್‌‌ ನೇಷನ್ ಪೀಪಲ್ಸ್ ಫ್ರಂಟ್‌‌‌ನ ಜಿಲ್ಲಾ ಸಮಿತಿ ಸದಸ್ಯರಾದ ಆರ್. ಶ್ರೀರಾಮ್, ಬಿಜೆಪಿ ವಿರುದ್ದ ಜನಾಂದೋಲನ ರೂಪಿಸಿದ್ದಕ್ಕಾಗಿ ಈ ಬಂಧನ ನಡೆದಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಶ್ರೀರಾಮ್, “2021 ರ ಜನವರಿ 20 ರಂದು ಚೆನ್ನೈನಲ್ಲಿ ಎಪ್ಪತ್ತು ತಮಿಳು ಸಂಘಟನೆಗಳನ್ನು ಒಳಗೊಂಡು ’ಬಿಜೆಪಿ ವಿರೋಧಿ ಚಳುವಳಿ’ ಕುರಿತು ಒಂದು ಸಭೆ ನಡೆದಿತ್ತು. ಎಪ್ರಿಲ್ ತಿಂಗಳಿನಲ್ಲಿ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪರ್ಯಾಯ ಆಂದೋಲನವನ್ನು ಕಟ್ಟುವ ಬಗ್ಗೆ ಸಭೆಯನ್ನು ನಡೆಲಾಗಿತ್ತು. ಈ ಸಭೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರದಂತೆ ತಡೆಯಲು ಬಿಜೆಪಿ ಎಲ್ಲಿ ಚುನಾವಣೆಗೆ ನಿಂತರು ಅಲ್ಲಿ ಅದನ್ನು ಸೋಲಿಸಲು ಒಗ್ಗೂಡುವಂತೆ ಚರ್ಚಿಸಲಾಗಿತ್ತು” ಎಂದು ಹೇಳಿದರು.

“ಈ ಸಭೆಯನ್ನು ’ಬಿಜೆಪಿಯನ್ನು ಸೋಲಿಸಿ ಚಳವಳಿ’ಯ ಮುಖಂಡರಾದ ಬಾಲನ್ ಅವರು ಆಯೋಜಿಸಿದ್ದರು. ಈ ಸಭೆ ನಡೆದ ನಂತರ ಪೊಲೀಸರು ಒಂದುವರೆ ವರ್ಷ ಹಿಂದೆ ದಾಖಲಾದ ಪ್ರಕರಣವನ್ನು ಹೊರತೆಗೆದು ಅವರನ್ನು ಬಂಧಿಸಿದ್ದಾರೆ” ಎಂದು ಶ್ರೀರಾಮ್ ಹೇಳಿದರು.

ಇದನ್ನೂ ಓದಿ: ದಲಿತ ಹೋರಾಟಗಾರ್ತಿ ನೊದೀಪ್ ಕೌರ್ ಬಿಡುಗಡೆಗೊಳಿಸಿ: ನಟ ದಿಲ್ಜಿತ್, ನಟಿ ರಮ್ಯಾ ಒತ್ತಾಯ

“ಎನ್‌ಕೌಂಟರ್‌ಗಳು ನಿರಂತರವಾಗಿ ನಡೆಯುತ್ತಿರುವುದರಿಂದ, ನಕಲಿ ಎನ್‌ಕೌಂಟರ್‌‌‌ಗಳನ್ನು ತನಿಖೆ ಮಾಡಬೇಕೆಂದು ನಾವು ಮನಿವಾಸಗಂ ಅವರ ಹತ್ಯೆಯನ್ನು ನಾವು ಖಂಡಿಸಿದ್ದೆವು. ಅವರ ಅಂತಿಮ ದರ್ಶನ ಪಡೆಯಲು ಸೇಲಂಗೆ ಹೋದಾಗ ಬಾಲನ್ ಅವರು ಅಲ್ಲಿ ಭಾಷಣ ಮಾಡಿದ್ದರು ಹಾಗೂ ಸೀನಿವಾಸನ್‌ ಅವರ ಒಂದು ಕವಿತೆ ಓದಿದ್ದರು. ಆದರೆ ಅಂದು 7 ಜನರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ಬಾಲನ್ ಅಥವಾ ಸೀನಿವಾಸನ್‌ ಅವರ ಹೆಸರು ಇರಲಿಲ್ಲ” ಎಂದು ಶ್ರೀರಾಮ್ ಹೇಳಿದ್ದಾರೆ.

ತಮಿಳ್‌ ನೇಷನ್‌ ಫ್ರಂಟ್‌ನ ಕಾರ್ಯಕರ್ತರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸ್ವತಃ ಬರೆದಿದ್ದರು. ವಿವಾದಿತ ಯುಎಪಿಎ ಕಾನೂನಿನ ಅಡಿಯಲ್ಲಿ ಈ ರೀತಿ ಬರೆಯುವ ಹಕ್ಕು ಡಿಎಸ್ಪಿಗೆ ಇದೆ. ಕಾನೂನಿನಂತೆ ಎಫ್‌ಐಆರ್‌ನಲ್ಲಿ ಯಾರ ಹೆಸರನ್ನು ಉಲ್ಲೇಖಿಸದಿದ್ದರೂ, ಪೊಲೀಸರು ಸಿದ್ಧಪಡಿಸಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಬಳಸಿಕೊಂಡು ಅವರು ಯಾರನ್ನೂ ಯಾವಾಗ ಬೇಕಾದರೂ ಬಂಧಿಸಬಹುದಾಗಿದೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಆನಂದ್ ತೆಲ್ತುಂಬ್ಡೆ ಮತ್ತು ಗೌತಮ್ ನವಲಖಾ ಅವರನ್ನು ಬಂಧಿಸಲು ಇದೇ ರೀತಿಯ ವಿಧಾನಗಳನ್ನು ಬಳಸಲಾಯಿತು. ಮೂಲ ಎಫ್‌ಐಆರ್‌ನಲ್ಲಿ ಅವರ ಹೆಸರುಗಳು ಇರಲಿಲ್ಲವಾದರು ನಂತರ ಪೊಲೀಸರು ಸ್ವತಃ ಸಿದ್ಧಪಡಿಸಿದ ತಪ್ಪೊಪ್ಪಿಗೆಯನ್ನು ಹೇಳಿಕೆಯಾಗಿ ಸೇರಿಸಲಾಯಿತು.

ಪ್ರಕರಣದಲ್ಲಿ ಎಡಪ್ಪಾಡಿ ಸರ್ಕಾರದ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಹಸ್ತಕ್ಷೇಪವನ್ನು ತಮೀಳ್‌ ನೇಷನ್ ಪೀಪಲ್ಸ್ ಫ್ರಂಟ್ ಖಂಡಿಸಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪ್ರಕರಣಗಳನ್ನು ದಾಖಲಿಸುವುದು ಮಾನವನ ಮೂಲಭೂತ ಹಕ್ಕುಗಳ ಮೇಲಿನ ಅಮಾನವೀಯ ದಾಳಿ ಎಂದು ಅದು ಹೇಳಿದೆ. ತಮ್ಮ ಸಂಘಟನೆಯ ಸದಸ್ಯರನ್ನು ತಕ್ಷಣವೆ ಬಿಡುಗಡೆ ಮಾಡಬೇಕೆಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ’ನಿಮ್ಮ ದುರಹಂಕಾರದ ನೆತ್ತಿಯ ಮೇಲೆ ಕಾಲಿಟ್ಟು ನಡೆಯುತ್ತೇವೆ’: ಕರವೇ ಅಭಿಯಾನಕ್ಕೆ ವ್ಯಾಪಕ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...