Homeಕರ್ನಾಟಕಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

ಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರ ನಿರಂತರವಾಗಿ ಇಂಧನ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ, ಕೂಡಲೇ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರವನ್ನು ವಾಪಸ್ ಪಡೆಯುಬೇಕೆಂದು ಆಗ್ರಹಿಸಿ ಇಂದು ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು, ಮುಖಂಡರು ತುಮಕೂರು ನಗರದ ಬಿ.ಎಸ್.ಎನ್.ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿ ಎದುರು ಸಮಾವೇಶಗೊಂಡಿದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ದ್ವಿಚಕ್ರ ವಾಹನಕ್ಕೆ ಬಿಳಿ ಬಟ್ಟೆ ಹೊದಿಸಿ, ಅಣುಕ ಶವಯಾತ್ರೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್, ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಜನ ಸಾಮಾನ್ಯರ ಕಷ್ಟ ಹೇಳತೀರದಾಗಿದೆ. ಜನರ ಕಷ್ಟವನ್ನು ತಗ್ಗಿಸುವ ಬದಲು ಸರಕಾರ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂಧನಗಳ ಮೇಲೆ ಶೇ30ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರು ಬದುಕಿಗೆ ಕೊಳ್ಳಿ ಇಡಲು ಹೊರಟಿವೆ. ಇಂಧನ ಬೆಲೆ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ಹೆಚ್ಚಲಿದೆ. ಇದರ ಪರಿಣಾಮ ದಿನನಿತ್ಯದ ದಿನಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳ ಬೆಲೆಗಳು ಹೆಚ್ಚಳವಾಗುವ ಮೂಲಕ ಜನರ ಬದುಕು ಅದೋಗತಿಗೆ ಇಳಿಯಲಿದೆ. ಆದ್ದರಿಂದ ಸರಕಾರ ಕೂಡಲೇ ಇಂಧನ ಬೆಲೆಗಳನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮಾತನಾಡಿ, ಇಂಧನ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು ತೊಂದರೆಗೀಡಾದರೂ, ಯುಪಿಎ ಸರಕಾರದ ವಿರುದ್ದ ಗುಡುಗಿದ್ದ ಬಿಜೆಪಿ ಪಕ್ಷದ ಯಾವ ಮುಖಂಡರು, ಮಹಿಳಾ ಮಣಿಗಳು ಬಾಯಿ ಬೀಡುತ್ತಿಲ್ಲ. ಅಲ್ಲದೆ ರೈತರ ಹೆಸರಿನಲ್ಲಿ ಸೆಸ್ ಹಾಕಿ ಹಾವನ್ನು ಹೊಡೆದು ಹದ್ದಿಗೆ ಹಾಕುವಂತಹ ಕೆಲಸವನ್ನು ಕೇಂದ್ರ ಸರಕಾರ ಮಾಡಲು ಹೊರಟಿದೆ. ಇದರ ವಿರುದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾ ಮುಂದಿನ ದಿನಗಳಲ್ಲಿ ಉಗ್ರಹೋರಾಟ ನಡೆಸಲಿದೆ ಎಂದರು.

ದಸಂಸ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ “ಹಳ್ಳಿಯ ಕಡೆ ಒಂದು ಗಾದೆ ಇದೆ. ಆಡೋ ಹುಡುಗನ ಕೈಗೆ ಮನೆ ಅಧಿಕಾರ ಕೊಟ್ಟರೆ, ಒಡೆ ಬಂದ ಹೊಲ ಕೊಯ್ದು ಒಟ್ಟಿದ” ಅನ್ನುವ ಹಾಗೇ ಸಂಸಾರದ ಗಂಧ ಗಾಳಿಯೂ ಗೊತ್ತಿಲ್ಲದ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ರಂತಹವರ ಕೈಗೆ ಅಧಿಕಾರ ನೀಡಿದ ಪರಿಣಾಮ ಜನ ಸಮಾನ್ಯರ ಕಷ್ಟಗಳೇ ಅರ್ಥವಾಗುತ್ತಿಲ್ಲ. ತಾವು ಮಾಡಿದ್ದೇ ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ, ದೇವರ ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆದು ತಮ್ಮ ಹಿಡನ್ ಅಜೆಂಡಾಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಜನರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದ್ದ ಸಾರ್ವಜನಿಕ ಸಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ, ನೌಕರರನ್ನು ಉಳ್ಳುವರ ಗುಲಾಮರನ್ನಾಗಿಸುತ್ತಿದ್ದಾರೆ. ಜನಸಾಮಾನ್ಯರು ಇಂತಹವರಿಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ಪರಮೇಶ್ವರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...