Homeಕರ್ನಾಟಕಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

ಸಂಸಾರದ ಗಂಧ ಗಾಳಿ ಗೊತ್ತಿಲ್ಲದ ಮೋದಿ, ಯೋಗಿ ಬೆಲೆ ಏರಿಸುತ್ತಿದ್ದಾರೆ: ತುಮಕೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರಕಾರ ನಿರಂತರವಾಗಿ ಇಂಧನ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ, ಕೂಡಲೇ ಹೆಚ್ಚಳವಾಗಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರವನ್ನು ವಾಪಸ್ ಪಡೆಯುಬೇಕೆಂದು ಆಗ್ರಹಿಸಿ ಇಂದು ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು, ಮುಖಂಡರು ತುಮಕೂರು ನಗರದ ಬಿ.ಎಸ್.ಎನ್.ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಅಶೋಕ ರಸ್ತೆಯ ಬಿ.ಎಸ್.ಎನ್.ಎಲ್. ಕಚೇರಿ ಎದುರು ಸಮಾವೇಶಗೊಂಡಿದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಕಾರ್ಯಕರ್ತರು ಹಾಗೂ ಸಾರ್ವಜನಿಕರು, ದ್ವಿಚಕ್ರ ವಾಹನಕ್ಕೆ ಬಿಳಿ ಬಟ್ಟೆ ಹೊದಿಸಿ, ಅಣುಕ ಶವಯಾತ್ರೆ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್, ಕಳೆದ ಒಂದು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಜನ ಸಾಮಾನ್ಯರ ಕಷ್ಟ ಹೇಳತೀರದಾಗಿದೆ. ಜನರ ಕಷ್ಟವನ್ನು ತಗ್ಗಿಸುವ ಬದಲು ಸರಕಾರ ಇಂಧನ ಬೆಲೆಗಳನ್ನು ಹೆಚ್ಚಳ ಮಾಡುವ ಮೂಲಕ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ದೂರಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂಧನಗಳ ಮೇಲೆ ಶೇ30ರಷ್ಟು ತೆರಿಗೆ ವಿಧಿಸುವ ಮೂಲಕ ಜನಸಾಮಾನ್ಯರು ಬದುಕಿಗೆ ಕೊಳ್ಳಿ ಇಡಲು ಹೊರಟಿವೆ. ಇಂಧನ ಬೆಲೆ ಮತ್ತು ಅಡುಗೆ ಅನಿಲದ ಬೆಲೆ ಹೆಚ್ಚಳದಿಂದಾಗಿ ಸಾರಿಗೆ ವೆಚ್ಚ ಹೆಚ್ಚಲಿದೆ. ಇದರ ಪರಿಣಾಮ ದಿನನಿತ್ಯದ ದಿನಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳ ಬೆಲೆಗಳು ಹೆಚ್ಚಳವಾಗುವ ಮೂಲಕ ಜನರ ಬದುಕು ಅದೋಗತಿಗೆ ಇಳಿಯಲಿದೆ. ಆದ್ದರಿಂದ ಸರಕಾರ ಕೂಡಲೇ ಇಂಧನ ಬೆಲೆಗಳನ್ನು ಇಳಿಸಬೇಕು ಎಂದು ಆಗ್ರಹಿಸಿದರು.

ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮಾತನಾಡಿ, ಇಂಧನ ಬೆಲೆಗಳು ಹೆಚ್ಚಾಗಿ, ಜನಸಾಮಾನ್ಯರು ತೊಂದರೆಗೀಡಾದರೂ, ಯುಪಿಎ ಸರಕಾರದ ವಿರುದ್ದ ಗುಡುಗಿದ್ದ ಬಿಜೆಪಿ ಪಕ್ಷದ ಯಾವ ಮುಖಂಡರು, ಮಹಿಳಾ ಮಣಿಗಳು ಬಾಯಿ ಬೀಡುತ್ತಿಲ್ಲ. ಅಲ್ಲದೆ ರೈತರ ಹೆಸರಿನಲ್ಲಿ ಸೆಸ್ ಹಾಕಿ ಹಾವನ್ನು ಹೊಡೆದು ಹದ್ದಿಗೆ ಹಾಕುವಂತಹ ಕೆಲಸವನ್ನು ಕೇಂದ್ರ ಸರಕಾರ ಮಾಡಲು ಹೊರಟಿದೆ. ಇದರ ವಿರುದ್ದ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾ ಮುಂದಿನ ದಿನಗಳಲ್ಲಿ ಉಗ್ರಹೋರಾಟ ನಡೆಸಲಿದೆ ಎಂದರು.

ದಸಂಸ ಮುಖಂಡ ಪಿ.ಎನ್.ರಾಮಯ್ಯ ಮಾತನಾಡಿ “ಹಳ್ಳಿಯ ಕಡೆ ಒಂದು ಗಾದೆ ಇದೆ. ಆಡೋ ಹುಡುಗನ ಕೈಗೆ ಮನೆ ಅಧಿಕಾರ ಕೊಟ್ಟರೆ, ಒಡೆ ಬಂದ ಹೊಲ ಕೊಯ್ದು ಒಟ್ಟಿದ” ಅನ್ನುವ ಹಾಗೇ ಸಂಸಾರದ ಗಂಧ ಗಾಳಿಯೂ ಗೊತ್ತಿಲ್ಲದ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ರಂತಹವರ ಕೈಗೆ ಅಧಿಕಾರ ನೀಡಿದ ಪರಿಣಾಮ ಜನ ಸಮಾನ್ಯರ ಕಷ್ಟಗಳೇ ಅರ್ಥವಾಗುತ್ತಿಲ್ಲ. ತಾವು ಮಾಡಿದ್ದೇ ಕಾನೂನು ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ, ದೇವರ ಹೆಸರಿನಲ್ಲಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆದು ತಮ್ಮ ಹಿಡನ್ ಅಜೆಂಡಾಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಜನರ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಿದ್ದ ಸಾರ್ವಜನಿಕ ಸಾಮ್ಯದ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿ, ನೌಕರರನ್ನು ಉಳ್ಳುವರ ಗುಲಾಮರನ್ನಾಗಿಸುತ್ತಿದ್ದಾರೆ. ಜನಸಾಮಾನ್ಯರು ಇಂತಹವರಿಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ವೇಲ್ಫೇರ್ ಪಾರ್ಟಿ ಅಫ್ ಇಂಡಿಯಾದ ರಾಜ್ಯ ಮಾಧ್ಯಮ ಕಾರ್ಯದರ್ಶಿ ಅಜೀಜ್ ಜಾಗಿರ್ದಾರ್, ಪರಮೇಶ್ವರಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...