Homeಮುಖಪುಟಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಬಿಜೆಪಿ & ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ"

- Advertisement -
- Advertisement -

ಬೃಹತ್ ಆಂದೋಲನವೇ ಬ್ರಿಟಿಷ್ ವಸಾಹತುಶಾಹಿಯಿಂದ ಭಾರತವನ್ನು ಬಿಡುಗಡೆಗೊಳಿಸಿತು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೆನಪಿಸಲು ಬಯಸುತ್ತೇವೆ. ಅದಕ್ಕಾಗಿ ನಾವು ಆಂದೋಲನ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ ಎಂದು ಹೇಳುವ ಮೂಲಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರಧಾನಿ ನರೇಂದ್ರ ಮೋದಿಯವರ ಆಂದೋಲನ್ ಜೀವಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದೆ.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ಮೋದಿಯವರು “ದೇಶದಲ್ಲಿ ಆಂದೋಲನ್‌ ಜೀವಿ (ಹೋರಾಟಗಾರರು) ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ” ಎಂದು ಹೇಳಿದ್ದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಯುಕ್ತ ಕಿಸಾನ್ ಮೋರ್ಚಾ ಡಾ.ದರ್ಶನ್ ಪಾಲ್ “ಬಿಜೆಪಿ ಮತ್ತು ಅವರ ಪರಿವಾರ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಡಲಿಲ್ಲ. ಅವರು ಸ್ವಾತಂತ್ರ್ಯ ಚಳವಳಿಯ ವಿರುದ್ಧವಿದ್ದರು. ಹಾಗಾಗಿ ಇಂದಿಗೂ ಚಳವಳಿಗಳಿಗೆ ಅವರು ಹೆದರುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

ಕೇಂದ್ರ ಸರ್ಕಾರ ಈಗಲಾದರೂ ನಮ್ಮ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಒಪ್ಪಿಕೊಂಡರೆ, ರೈತರು ಕೃಷಿಗೆ ಮರಳಲು ಹೆಚ್ಚು ಸಂತೋಷಪಡುತ್ತಾರೆ. ಆದರೆ ಸರ್ಕಾರದ ಅಹಂ ಮನೋಭಾವವೇ ಹೆಚ್ಚು ಆಂದೋಲನ್ ಜೀವಿಗಳನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಎಂಎಸ್‌ಪಿ ಕುರಿತ ಪ್ರಧಾನಿಯವರ ಖಾಲಿ ಹೇಳಿಕೆಗಳು ರೈತರಿಗೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗುವುದಿಲ್ಲ ಮತ್ತು ಹಿಂದಿನ ಕಾಲದಲ್ಲಿಯೂ ಇಂತಹ ಅರ್ಥಹೀನ ಹೇಳಿಕೆಗಳನ್ನು ನೀಡಲಾಗಿದೆ. ಎಲ್ಲಾ ಬೆಳೆಗಳಿಗೆ ಎಂಎಸ್‌ಪಿ ಖಾತ್ರಿ ಮಾಡುವ ಕಾನೂನು ಜಾರಿಮಾಡಿದರೆ ಮಾತ್ರ ರೈತರು ವಾಸ್ತವದಲ್ಲಿ ನ್ಯಾಯಯುತವಾಗಿ ಮತ್ತು ಸುಸ್ಥಿರ ರೀತಿಯಲ್ಲಿ ಪ್ರಯೋಜನ ಪಡೆಯುತ್ತಾರೆ ಎಂದು ದರ್ಶನ್ ಪಾಲ್ ಹೇಳಿದ್ದಾರೆ.

ಯಾವುದೇ “ವಿದೇಶಿ ವಿನಾಶಕಾರಿ ಐಡಿಯಾಲಜಿ” ಯಿಂದ ನಾವು ದೂರವಾಗಿದ್ದೇವೆ. ಆದರೆ ಪ್ರಧಾನಮಂತ್ರಿಯ ಎಫ್‌ಡಿಐ ವಿಧಾನವು ಅಪಾಯಕಾರಿ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಪ್ರಪಂಚದ ಯಾವುದೇ ಭಾಗದಲ್ಲಿ ಮೂಲಭೂತ ಮಾನವ ಹಕ್ಕುಗಳನ್ನು ಎತ್ತಿಹಿಡಿಯುವ ರಚನಾತ್ಮಕ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ನಾವು ಬೆಂಬಲಿಸುತ್ತೇವೆ ಮತ್ತು ಪ್ರಪಂಚದಾದ್ಯಂತದ ಸಮಾನ ಮನಸ್ಕ ನಾಗರಿಕರಿಂದ ಇದೇ ರೀತಿಯ ಬೆಂಬಲವನ್ನು ನಿರೀಕ್ಷಿಸುತ್ತೇವೆ, ಏಕೆಂದರೆ “ಎಲ್ಲಿಯೇ ನಡೆಯುವ ಅನ್ಯಾಯವು, ಎಲ್ಲೆಡೆಯು ನ್ಯಾಯಕ್ಕೆ ಅಪಾಯವಾಗಿದೆ” ಎಂದು ಮೋರ್ಚಾ ಹೇಳಿದೆ.

ರೈತರ ಬೇಡಿಕೆಗಳನ್ನು ಗಂಭೀರವಾಗಿ ಮತ್ತು ಪ್ರಾಮಾಣಿಕವಾಗಿ ಪರಿಹರಿಸುವಲ್ಲಿ ಸರ್ಕಾರದ ಬದ್ಧತೆ ಮೇಲೆ ನಮಗೆ ಅನುಮಾನವಿದೆ. ಏಕೆಂದರೆ ವಿದ್ಯುತ್ ತಿದ್ದುಪಡಿ ಮಸೂದೆ 2021 ಕರಡು ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ರೈತರ ಸಂಘಟನೆಗಳಿಗೆ ಭರವಸೆ ನೀಡಿದ್ದ ಕೇಂದ್ರ ಇಂದು ಅದನ್ನು ಸಂಸತ್ತಿನಲಲ್ಲಿ ಪರಿಚಯಿಸುತ್ತಿದೆ ಎಂದು ಡಾ.ದರ್ಶನ್ ಪಾಲ್ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಿಗೆ ಜನಪ್ರಹಾವೇ ಹರಿದುಬರುತ್ತಿದೆ. ಇದು ದೆಹಲಿಯ ಗಡಿಗಳಲ್ಲಿ ಹೋರಾಟನಿರತ ರೈತರ ಸ್ಫೂರ್ತಿ ಮತ್ತು ಉತ್ಸಾಹವನ್ನು ಹಿಮ್ಮಡಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಎಂಎಸ್‌ಪಿ ಮುಂಚೆಯು ಇತ್ತು, ಮುಂದೆಯು ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳೀದ್ದಾರೆ. ಆದರೆ ಅವರು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ತರುತ್ತೇವೆ ಎಂದು ಹೇಳಿಲ್ಲ. ಇಂದು ದೇಶವು ನಂಬಿಕೆಯ ಮೇಲೆ ನಡೆಯುತ್ತಿಲ್ಲ ಬದಲಿಗೆ ಕಾನೂನು ಮತ್ತು ಸಂವಿಧಾನದ ಮೇಲೆ ನಡೆಯುತ್ತಿದೆ ಎಂದು ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

ಪ್ರಧಾನಿಗಳು ಶಾಂತಿಯುತವಾಗಿ ಹೋರಾಡುತ್ತಿರುವ ರೈತರನ್ನು ಆಂದೋಲನ್ ಜೀವಿಗಳೆಂದು ವ್ಯಂಗ್ಯವಾಡಿದ್ದಾರೆ. ವಿದೇಶಿ ವಿನಾಶಕಾರಿ ಐಡಿಯಾಲಜಿಯಿಂದ ಪ್ರೇರಿತರಾದವರು ಎಂದು ಅವಮಾನ ಮಾಡಿದ್ದಾರೆ. ತಮ್ಮ ಅಧಿಕಾರ ದುರಪಯೋಗ ಪಡಿಸಿಕೊಂಡು ರೈತರನ್ನು ಅವಮಾನಿಸುವ ಪ್ರಧಾನಿಗಳ ನಡೆಯನ್ನು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾ ಖಂಡಿಸಿದೆ.

11 ಸುತ್ತಿನ ಮಾತುಕತೆಗಳಲ್ಲಿ ರೈತರು ಸಮಸ್ಯೆಗಳನ್ನು ವಿವರವಾಗಿ ಚರ್ಚಿಸಿದ್ದಾರೆ. ಆದರೆ ಮೋದಿಯವರು ತಮ್ಮ ಕಾರ್ಪೊರೇಟ್ ಗೆಳೆಯರಿಗಾಗಿ ಈ ಕಾನೂನುಗಳನ್ನು ವಾಪಸ್ ಪಡೆಯದೆ ಹಠಮಾರಿ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆಲ್‌ ಇಂಡಿಯಾ ಕಿಸಾನ್ ಮಜ್ದೂರ್ ಸಭಾದ ಪ್ರಧಾನ ಕಾರ್ಯದರ್ಶಿ ಆಶಿಸ್ ಮಿತ್ತಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...